Nepal Protest: ನೇಪಾಳ ಹಂಗಾಮಿ ಪ್ರಧಾನಿಯಾಗಿ ಸುಶೀಲ ಕರ್ಕಿ ಆಯ್ಕೆ, ಕೆಲವೇ ಕ್ಷಣಗಳಲ್ಲಿ ಅಧಿಕಾರ ಸ್ವೀಕಾರ ನಿರೀಕ್ಷೆ!
ನೇಪಾಳ ದೇಶದಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ನಡೆದ ಹಿಂಸಾಚಾರ & ಪ್ರತಿಭಟನೆಯ ಹೊರತಾಗಿ ಇದೀಗ ಭರ್ಜರಿ ಸುದ್ದಿ ಸಿಕ್ಕಂತಾಗಿದೆ. ಭ್ರಷ್ಟಾಚಾರ & ಬಡತನದ ಬೇಗೆಯಲ್ಲಿ ಬೆಂದಿದ್ದ ನೇಪಾಳದ ಯುವ ಜನತೆಯು ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಿ, ಪ್ರಧಾನಿ ಮತ್ತು ರಾಷ್ಟ್ರಪತಿ ಪಟ್ಟವನ್ನೇ ಬದಲಾಯಿಸಿದ್ದಾರೆ. ಆದರೆ ಇದೀಗ ಖಾಲಿ ಉಳಿದಿರುವ ಈ ಹುದ್ದೆಗೆ ಮಹತ್ವದ ವ್ಯಕ್ತಿಯನ್ನ ಆಯ್ಕೆ ಮಾಡಲಾಗಿದೆ. ಹಾಗಾದರೆ ಯಾರು ನೇಪಾಳ ದೇಶದ ಹಂಗಾಮಿ ಪ್ರಧಾನಿ? ಬನ್ನಿ ತಿಳಿಯೋಣ.
ನೇಪಾಳ ದೇಶ ಭಾರತದ ಪಕ್ಕದ ರಾಷ್ಟ್ರವಾಗಿದ್ದು, ಈ ದೇಶದಲ್ಲಿ ಶಾಂತಿ ನೆಲೆಸಬೇಕಾದ ಅನಿವಾರ್ಯ ಸ್ಥಿತಿ ಇದೆ. ಯಾಕಂದ್ರೆ ನೇಪಾಳ ನೆಲದಲ್ಲಿ ಏನಾದರೂ ಅಶಾಂತಿ ಹೆಚ್ಚಾದರೆ ಅದು ಮುಂದೆ ನಮ್ಮ ದೇಶ ಭಾರತಕ್ಕೂ ಅಪಾಯ ತಂದೊಡ್ಡುತ್ತದೆ. ಹೀಗಿದ್ದಾಗ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ನೇಪಾಳ ದೇಶದಲ್ಲಿ ಭಾರಿ ದೊಡ್ಡ ಹೋರಾಟ ನಡೆಯುತ್ತಿತ್ತು. ಹೀಗೆ ಶುರುವಾಗಿದ್ದ ಹೋರಾಟದಲ್ಲಿ ರಕ್ತಪಾತವೇ ನಡೆದು ಹೋಗಿತ್ತು. ಇದೀಗ ಎಲ್ಲವೂ ತಣ್ಣಗಾಗಿದ್ದು, ನೇಪಾಳ ಶಾಂತವಾಗಿದೆ. ಹೀಗಾಗಿ ಇದೀಗ ನೇಪಾಳ ನೆಲದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರುವುದು ಗ್ಯಾರಂಟಿ ಕೂಡ ಆಗಿದೆ. ಹಂಗಾಮಿ ಪ್ರಧಾನಿಯಾಗಿ ಮಹಿಳೆ ಪ್ರಮಾಣ ವಚನ ಸ್ವೀಕರಿಸಲು ಸಜ್ಜಾಗಿದ್ದಾರೆ.

ಭಾರತದ ನೆರೆಯ ದೇಶಕ್ಕೆ ಮಹಿಳಾ ಪ್ರಧಾನಿ
ನೇಪಾಳದಲ್ಲಿ ಶುರುವಾಗಿದ್ದ ಹೋರಾಟದ ಬೆಂಕಿ ಇಡೀ ದೇಶವನ್ನೇ ಸುಟ್ಟು ಹಾಕಿತ್ತು. ದಿಢೀರ್ ನೇಪಾಳ ಸರ್ಕಾರ ಯುಟ್ಯೂಬ್, ಎಕ್ಸ್, ಇನ್ಸ್ಟಾಗ್ರಾಮ್ & ಫೇಸ್ಬುಕ್ ಸೇರಿ 26 ದೊಡ್ಡ ದೊಡ್ಡ ಸೋಷಿಯಲ್ ಮೀಡಿಯಾ ಆಪ್ಸ್ ಬ್ಯಾನ್ ಮಾಡಿತ್ತು. ಈ ಸುದ್ದಿ ತಿಳಿದ ಲಕ್ಷಾಂತರ ನೇಪಾಳ ಯುವತಿ & ಯುವಕರು ಬೀದಿ ಬೀದಿಯಲ್ಲಿ ಪ್ರತಿಭಟನೆ ನಡೆಸಿದ್ದರು ಎನ್ನಲಾಗಿತ್ತು. ಆದರೆ ಇದು ಸೋಷಿಯಲ್ ಮೀಡಿಯಾಗಳ ಪರವಾಗಿ ಅಲ್ಲ ಭ್ರಷ್ಟಾಚಾರ ವಿರುದ್ಧದ ಹೋರಾಟ ಅಂತಾ ಖುದ್ದಾಗಿ ನೇಪಾಳ ಯುವ ಸಮುದಾಯ ಹೇಳಿತ್ತು. ಮತ್ತೊಂದು ಕಡೆ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಬೆಂಕಿ ಹೊತ್ತಿಕೊಂಡಿತ್ತು.
ನೂರಾರು ಜನರಿಗೆ ಗಂಭೀರ ಗಾಯ
ಹೀಗಿದ್ದಾಗ ಹಿಂಸಾಚಾರದಲ್ಲಿ 20ಕ್ಕೂ ಹೆಚ್ಚು ನೇಪಾಳ ಜನ ಮೃತಪಟ್ಟು, 400ಕ್ಕೂ ಹೆಚ್ಚು ಜನರಿಗೆ ಈ ಗಲಾಟೆಯ ವೇಳೆ ಗಂಭೀರವಾಗಿ ಗಾಯಗಳಾಗಿವೆ ಎಂದು ಆರೋಪ ಮಾಡಲಾಗಿತ್ತು. ಇಷ್ಟೆಲ್ಲದರ ನಡುವೆ ಸುಶೀಲ ಕರ್ಕಿ ಅವರನ್ನ ನೇಪಾಳ ದೇಶದ ಹಂಗಾಮಿ ಪ್ರಧಾನಿಯಾಗಿ ಆಯ್ಕೆ ಮಾಡಲಾಗಿದ್ದು, ಇನ್ನು ಕೆಲವೇ ಕ್ಷಣಗಳಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸುವ ನಿರೀಕ್ಷೆ ಇದೆ. ಹಾಗೇ ಈ ಪ್ರತಿಭಟನೆ ನಿಂತು ಶಾಂತವಾಗಿರುವ ಸಮಯದಲ್ಲಿ ನೇಪಾಳ ಸೇನೆ ದೇಶದ ಅಧಿಕಾರವನ್ನ ತನ್ನ ಹಿಡಿತಕ್ಕೆ ತೆಗೆದುಕೊಂಡು, ಈಗ ಭಾರಿ ದೊಡ್ಡ ನಿರ್ಧಾರ ಜಾರಿ ಮಾಡಲು ಮುಂದಾಗಿದೆ. ಸುಶೀಲ ಕರ್ಕಿ ಅಧಿಕಾರ ಸ್ವೀಕರಿಸಲಿದ್ದಾರೆ ಎನ್ನಲಾಗಿದ್ದು, ನೇಪಾಳದ ಮೊದಲ ಮಹಿಳಾ ಪ್ರಧಾನಿ ಸುಶೀಲ ಕರ್ಕಿ ಅವರೇ ಆಗಲಿದ್ದಾರೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion












Click it and Unblock the Notifications