ತೈವಾನ್ ಅನಿಲ ಸ್ಫೋಟ, 24 ಮಂದಿ ಸಾವು
ತೈವಾನ್, ಆ.1 : ದಕ್ಷಿಣದ ತೈವಾನ್ ಕವೋಹ್ ಸಿಯಾಂಗ್ ನ ಅನಿಲ ಸ್ಥಾವರವೊಂದರಲ್ಲಿ ಗ್ಯಾಸ್ ಸೋರಿಕೆಯಿಂದಾಗಿ ಉಂಟಾದ ಭಾರಿ ಸ್ಫೋಟದಲ್ಲಿ 24 ಮಂದಿ ಪ್ರಾಣ ಕಳೆದುಕೊಂಡು 271ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಗಾಯಗೊಂಡಿರುವ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.
ದಕ್ಷಿಣದ ತೈವಾನ್ ಎರಡನೇ ಅತಿದೊಡ್ಡ ನಗರ ಕವೋಹ್ ಸಿಯಾಂಗ್ ನ ಅನಿಲ ಸ್ಥಾವರವೊಂದರಲ್ಲಿ ಗುರುವಾರ ಮಧ್ಯರಾತ್ರಿ ನಂತರ ಗ್ಯಾಸ್ ಸೋರಿಕೆಯುಂಟಾಗಿ ಸ್ಫೋಟ ಸಂಭವಿಸಿದೆ. ಶುಕ್ರವಾರ ಮುಂಜಾನೆ ಹೊತ್ತಿಗೆ ಸ್ಫೋಟ ಭೀಕರತೆ ಪಡೆದುಕೊಂಡು ಬಂದರು ನಗರಿಯನ್ನು ಬೆಚ್ಚಿ ಬೀಳಿಸಿದೆ.
ಸಿಯಾಂಜೈನ್ ಜಿಲ್ಲೆಯ ಕವೋಹ್ ಸಿಯಾಂಗ್ ನಗರದಲ್ಲಿರುವ ಸಿಯಾಂಜೈನ್ ಸ್ಥಾವರದಲ್ಲಿ ಈ ದುರಂತ ಸಂಭವಿಸಿದೆ. ನೂರಾರು ವಾಹನಗಳು ಬೆಂಕಿಗಾಹುತಿಯಾಗಿವೆ. ಬೆಂಕಿ ನಂದಿಸಲು ಅಗ್ನಿಶಾಮಕ ದಳ ಹರಸಾಹಸ ಪಡುತ್ತಿದ್ದು ಇನ್ನು ಪರಿಸ್ಥಿತಿ ನಿಯಂತ್ರಣ ಸಾಧ್ಯವಾಗುತ್ತಿಲ್ಲ.

ಅಗ್ನಿಶಾಮಕ ದಳ ಹರಸಾಹಸ
ವಾರದ ಕೆಳಗೆ ತೈವಾನ್ ನಲ್ಲಿ ವಿಮಾನ ದುರಂತ ಸಂಭವಿಸಿ 48 ಮಂದಿ ಮೃತಪಟ್ಟಿದ್ದರು. ಈಗ ಅನಿಲ ಸ್ಪೋಟ ಸಂಭವಿಸಿದ್ದು ದುರಂತ ಸಾವು ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಕಂಡು ಬಂದಿದೆ. ಐದಾರು ಬಾರಿ ಸ್ಫೋಟ ಕಂಡು ಬಂದಿದೆ.
|
ತೈವಾನ್ ಅನಿಲ ಸ್ಫೋಟದ ಚಿತ್ರಗಳು
ತೈವಾನ್ ಅನಿಲ ಸ್ಫೋಟದ ಚಿತ್ರಗಳು ಸಾಮಾಜಿಕ ಜಾಲ ತಾಣ ಟ್ವಿಟ್ಟರ್ ನಲ್ಲಿ ಹರಿದಾಡುತ್ತಿವೆ
|
ಅನಿಲ ದುರಂತದ ಚಿತ್ರಗಳು ಮಾಹಿತಿ
ಅನಿಲ ದುರಂತದ ಚಿತ್ರಗಳು ಮಾಹಿತಿಯನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಳ್ಳಲಾಗುತ್ತಿದೆ.
|
ತೈವಾನ್ ಅನಿಲ ದುರಂತದ ಚಿತ್ರಗಳು
ತೈವಾನ್ ಅನಿಲ ದುರಂತದ ಚಿತ್ರಗಳು
ತೈವಾನ್ ಅನಿಲ ದುರಂತದ ವಿಡಿಯೋ
ತೈವಾನ್ ಅನಿಲ ದುರಂತದ ವಿಡಿಯೋ ದೃಶ್ಯಾವಳಿ ಇಲ್ಲಿದೆ
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications