ಫಿಜಿಯಲ್ಲಿ ತೈವಾನ್ ಅಧಿಕಾರಿಗಳ ಮೇಲೆ ಚೀನೀ ರಾಜತಾಂತ್ರಿಕರಿಂದ ಹಲ್ಲೆ
ಹಾಂಕಾಂಗ್, ಅಕ್ಟೋಬರ್ 20: ಫಿಜಿಯಲ್ಲಿ ನಡೆಯ ಕಾರ್ಯಕ್ರಮವೊಂದರಲ್ಲಿ ಚೀನಾದ ಇಬ್ಬರು ರಾಜತಾಂತ್ರಿಕರ ಜತೆಗೆ ಕೈಕೈ ಮಿಲಾಯಿಸಿದ ತೈವಾನ್ ಅಧಿಕಾರಿಯೊಬ್ಬರಿಗೆ ಗಾಯಗಳಾಗಿವೆ. ತೈವಾನ್ ಅಧಿಕಾರಿಯ ತಲೆಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಫಿಜಿ ರಾಜಧಾನಿ ಸುವಾದಲ್ಲಿ ಅಕ್ಟೋಬರ್ 8ರಂದು ನಡೆದ ತೈವಾನ್ ರಾಷ್ಟ್ರೀಯ ದಿನಾಚರಣೆಯ ವೇಳೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಈ ಕಾರ್ಯಕ್ರಮಕ್ಕೆ ಆಹ್ವಾನ ಇಲ್ಲದಿದ್ದರೂ ಸ್ಥಳಕ್ಕೆ ನುಗ್ಗಿದ ಚೀನಾದ ರಾಯಭಾರಿ ಕಚೇರಿ ಅಧಿಕಾರಿಗಳು ಅಲ್ಲಿ ಭಾಗವಹಿಸಿದ್ದ ಅತಿಥಿಗಳ ಫೋಟೊಗಳನ್ನು ತೆಗೆಯಲು ಪ್ರಯತ್ನಿಸಿದ್ದರು ಎಂದು ತೈವಾನ್ ವಿದೇಶಾಂಗ ಸಚಿವಾಲಯದ ವಕ್ತಾರೆ ಜೋಅನ್ನೆ ಒಯು ಹೇಳಿದ್ದಾರೆ.

'ಅಕ್ರಮವಾಗಿ ಒಳಗೆ ಬಂದ ಚೀನೀ ಅಧಿಕಾರಿಗಳಿಗೆ ತೈವಾನ್ ಸಿಬ್ಬಂದಿ ಅಡ್ಡಿಪಡಿಸಿದರು. ಆಗ ಚೀನಾದ ಇಬ್ಬರು ಅಧಿಕಾರಿಗಳು ಆಕ್ರೋಶದಿಂದ ಹಲ್ಲೆ ನಡೆಸಿದ್ದಾರೆ. ಇದರಿಂದ ನಮ್ಮ ಅಧಿಕಾರಿಯ ತಲೆಗೆ ತೀವ್ರ ಗಾಯವಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ' ಎಂದು ಅವರು ತಿಳಿಸಿದ್ದಾರೆ.
ಇದನ್ನು ಅಲ್ಲಗೆಳೆದಿರುವ ಫಿಜಿಯಲ್ಲಿನ ಚೀನಾ ರಾಯಭಾರ ಕಚೇರಿ, ಸಮಾರಂಭದ ಸ್ಥಳದ ಹೊರಗಿನ ಸಾರ್ವಜನಿಕ ಸ್ಥಳದಲ್ಲಿ ತಮ್ಮ ಕಚೇರಿ ಕೆಲಸ ನಡೆಸುತ್ತಿದ್ದ ಚೀನಾ ರಾಜತಾಂತ್ರಿಕ ಸಿಬ್ಬಂದಿ ವಿರುದ್ಧ ತೈವಾನ್ ಅಧಿಕಾರಿಗಳು ಪ್ರಚೋದನಾಕಾರಿಯಾಗಿ ವರ್ತಿಸಿದ್ದರು. ಆಗ ನಡೆದ ಜಗಳದಲ್ಲಿ ಚೀನಾದ ರಾಜತಾಂತ್ರಿಕರೊಬ್ಬರಿಗೆ ಗಾಯವಾಗಿದೆ ಎಂದು ಹೇಳಿಕೊಂಡಿದೆ.
ಚೀನಾ ಸತ್ಯವನ್ನು ತಲೆಕೆಳಗಾಗಿಸುವ ಮೂಲಕ ಜನರಲ್ಲಿ ಗೊಂದಲ ಮೂಡಿಸಲು ಪ್ರಯತ್ನಿಸುತ್ತಿದೆ ಎಂದು ಜೋಅನ್ನೆ ಒಯು ಆರೋಪಿಸಿದ್ದಾರೆ.
ಚೀನಾ ಮತ್ತು ತೈವಾನ್ ನಡುವೆ ಸುದೀರ್ಘ ಕಾಲದಿಂದ ಕಿತ್ತಾಟ ನಡೆಯುತ್ತಿದ್ದು, ಈ ಘಟನೆ ಅದನ್ನು ಮತ್ತಷ್ಟು ಉದ್ವಿಗ್ನಗೊಳಿಸಿದೆ. ತೈವಾನ್ ತನ್ನ ಪ್ರದೇಶದ ಅವಿಭಾಜ್ಯ ಅಂಗ ಎಂದು ಚೀನಾ ಹೇಳಿಕೊಂಡಿದ್ದು, ಅಗತ್ಯಬಿದ್ದರೆ ಬಲವಂತವಾಗಿ ತನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳುವುದಾಗಿ ಬೆದರಿಕೆ ಹಾಕುತ್ತಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications