ಅಫ್ಘಾನ್ನಲ್ಲಿ ವಿದೇಶಿ ಕರೆನ್ಸಿ ಬಳಕೆಯನ್ನು ನಿಷೇಧಿಸಿದ ತಾಲಿಬಾನ್
ಕಾಬೂಲ್, ನವೆಂಬರ್ 03: ಅಫ್ಘಾನಿಸ್ತಾನದಲ್ಲಿ ವಿದೇಶಿ ಕರೆನ್ಸಿ ಬಳಕೆಯನ್ನು ನಿಷೇಧ ಮಾಡಲಾಗಿದೆ ಎಂದು ಅಫ್ಘಾನಿಸ್ತಾನದಲ್ಲಿ ಸರ್ಕಾರ ನಡೆಸುತ್ತಿರುವ ತಾಲಿಬಾನ್ ಹೇಳಿದೆ. ಈಗಾಗಲೇ ಯುದ್ಧ ಪೀಡಿತ ಅಫ್ಘಾನಿಸ್ತಾನದ ಆರ್ಥಿಕ ಪರಿಸ್ಥಿತಿಯು ಭಾರೀ ಹದಗೆಟ್ಟಿದೆ. ಈ ನಡುವೆ ಈ ಆರ್ಥಿಕತೆಗೆ ಮತ್ತಷ್ಟು ಅಡ್ಡಿಪಡಿಸುವ ಬೆದರಿಕೆ ಹಾಕುತ್ತಿದೆ.
ಯುಎಸ್ ಅಫ್ಘಾನಿಸ್ತಾನದಿಂದ ತನ್ನ ಸೇನೆಯನ್ನು ಹಿಂದಕ್ಕೆ ಪಡೆಯುತ್ತಿದ್ದಂತೆ ತಾಲಿಬಾನ್ ಅಫ್ಘಾನಿಸ್ತಾನದ ಮೇಲೆ ದಾಳಿ ನಡೆಸಿದೆ. ಕ್ಷೀಪ್ರವಾಗಿ ಅಫ್ಘಾನಿಸ್ತಾನದ ಪ್ರದೇಶಗಳನ್ನು ತನ್ನ ವಶಕ್ಕೆ ಪಡೆಯುತ್ತಾ ಬಂದ ತಾಲಿಬಾನ್ ಕಳೆದ ಆಗಸ್ಟ್ನಲ್ಲಿ ಕಾಬೂಲ್ ಅನ್ನು ತನ್ನ ತೆಕ್ಕೆಗೆ ಪಡೆಯುವ ಮೂಲಕ ಸಂಪೂರ್ಣವಾಗಿ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿದೆ. ಈಗ ಸರ್ಕಾರವನ್ನು ತಾಲಿಬಾನ್ ರಚನೆ ಮಾಡಿದೆ.
ಆದರೆ ಭಯೋತ್ಪಾದಕ ಗುಂಪು ಎಂದು ಗುರುತಿಸಿಕೊಳ್ಳುವ ಮೂಲಕ ಅಂತಾರಾಷ್ಟ್ರೀಯ ಮಾನ್ಯತೆಯನ್ನು ಪಡೆಯಲದಿರುವ ತಾಲಿಬಾನ್, ಅಫ್ಘಾನಿಸ್ತಾನದಲ್ಲಿ ತನ್ನ ಸರ್ಕಾರ ಆರಂಭ ಮಾಡಿದಾಗಿನಿಂದ ತನ್ನದೇ ಆದ ನಿಯಮಗಳನ್ನು ಶರಿಯತ್ ನೆಪದಲ್ಲಿ ಜಾರಿ ಮಾಡುತ್ತಿದೆ. ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಕ್ಕೆ ಪಡೆದ ಬಳಿಕ ಅಫ್ಘಾನಿಸ್ತಾನದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು ಕಂಡು ಬಂದಿದೆ. ಈ ನಡುವೆ ದೇಶದ ಸಂಪತ್ತು ವಿದೇಶದ ಬ್ಯಾಂಕ್ಗಳಲ್ಲಿ ಇದೆ. ತಾಲಿಬಾನ್ ಸರ್ಕಾರವನ್ನು ಅಫ್ಘಾನಿಸ್ತಾನದ ಸರ್ಕಾರ ಎಂದು ಅಂತಾರಾಷ್ಟ್ರೀಯವಾಗಿ ಪರಿಗಣಿಸದ ಕಾರಣದಿಂದಾಗಿ ವಿದೇಶದಲ್ಲಿರುವ ಅಫ್ಘಾನ್ ಹಣವನ್ನು ಅಂತಾರಾಷ್ಟ್ರೀಯ ಬ್ಯಾಂಕುಗಳು ತಡೆದು ಹಿಡಿದಿದೆ.

ಅಫ್ಘಾನ್ನಲ್ಲಿ ಡಾಲರ್, ಪಾಕ್ ರೂಪಾಯಿ ಬಳಕೆ!
ಅಫ್ಘಾನಿಸ್ತಾನದಲ್ಲಿ ಪ್ರಸ್ತುತ ಆರ್ಥಿಕತೆಯು ಕ್ಷೀಣಿಸುತ್ತಿದೆ. ಈ ನಡುವೆ ಅಫ್ಘಾನಿಸ್ತಾನದಲ್ಲಿ ಬ್ಯಾಂಕುಗಳು ನಗದು ಕೊರತೆಯನ್ನು ಎದುರಿಸುತ್ತಿವೆ. ಆದರೂ ಅಂತರರಾಷ್ಟ್ರೀಯ ಸಮುದಾಯವು ತಾಲಿಬಾನ್ ಆಡಳಿತವನ್ನು ಸರ್ಕಾರವೆಂದು ಗುರುತಿಸಲು ನಿರಾಕರಿಸಿದೆ. ಈ ನಡುವೆ ಅಫ್ಘಾನಿಸ್ತಾನದಲ್ಲಿ ಹಲವಾರು ವಹಿವಾಟುಗಳನ್ನು ಯುಎಸ್ ಡಾಲರ್ಗಳಲ್ಲಿ ನಡೆಸಲಾಗುತ್ತಿದೆ ಎಂದು ವರದಿಯು ಹೇಳಿದೆ. ದಕ್ಷಿಣ ಗಡಿ ವ್ಯಾಪಾರ ಮಾರ್ಗಗಳಿಗೆ ಹತ್ತಿರವಿರುವ ಪ್ರದೇಶಗಳಲ್ಲಿ ಪಾಕಿಸ್ತಾನಿ ರೂಪಾಯಿಗಳನ್ನು ಬಳಸಲಾಗುತ್ತಿದೆ ಎಂದು ಕೂಡಾ ವರದಿ ಆಗಿದೆ. ಒಂದು ಅಫ್ಘಾನ್ ಅಪ್ಘಾನಿಯು (ಅಫ್ಘಾನ್ ಹಣ) 0.011 ಯುಎಸ್ ಡಾಲರ್ಗೆ ಸಮವಾಗಿದೆ. ಹಾಗೆಯೇ ಒಂದು ಅಫ್ಘಾನ್ ಅಪ್ಘಾನಿಯು (ಅಫ್ಘಾನ್ ಹಣ) 1.87 ಪಾಕಿಸ್ತಾನ ರೂಪಾಯಿಗೆ ಸಮವಾಗಿದೆ
ಈ ನಿಟ್ಟಿನಲ್ಲಿ ತಾಲಿಬಾನ್ ಸರ್ಕಾರವು ದೇಶದಲ್ಲಿ ವಿದೇಶಿ ಕರೆನ್ಸಿಗಳ ಬಳಕೆಯನ್ನು ನಿಷೇಧ ಮಾಡಿದೆ. ಈ ಬಗ್ಗೆ ಪತ್ರಿಕಾ ಹೇಳಿಕೆಯ ಮೂಲಕ ಮಾಹಿತಿ ನೀಡಿರುವ ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್, "ಇನ್ನು ಮುಂದೆ ಯಾರಾದರೂ ವಿದೇಶಿ ಕರೆನ್ಸಿಯನ್ನು ದೇಶೀಯ ವ್ಯವಹಾರಕ್ಕೆ ಬಳಸಿದರೆ ಕಾನೂನು ಕ್ರಮ ಜರುಗಿಸಲಾಗುವುದು," ಎಂದು ಎಚ್ಚರಿಕೆ ನೀಡಿದ್ದಾರೆ.
"ದೇಶದಲ್ಲಿನ ಆರ್ಥಿಕ ಪರಿಸ್ಥಿತಿ ಮತ್ತು ರಾಷ್ಟ್ರೀಯ ಹಿತಾಸಕ್ತಿಯನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಎಲ್ಲಾ ಅಫ್ಘಾನ್ ನಾಗರಿಕರು ಎಲ್ಲಾ ವಹಿವಾಟಿನಲ್ಲಿಯೂ ಅಫ್ಘಾನಿ ಕರೆನ್ಸಿಯನ್ನು ಬಳಸಬೇಕಾಗುತ್ತದೆ," ಎಂದು ಪತ್ರಿಕಾ ಹೇಳಿಕೆಯ ಮೂಲಕ ತಾಲಿಬಾನ್ ವಕ್ತಾರ ಜಬೀವುಲ್ಲಾ ಮುಜಾಹಿದ್ ತಿಳಿಸಿದ್ದಾರೆ. "ಇಸ್ಲಾಮಿಕ್ ಎಮಿರೇಟ್ ಎಲ್ಲಾ ನಾಗರಿಕರು, ಅಂಗಡಿಯವರು, ವ್ಯಾಪಾರಿಗಳು, ಉದ್ಯಮಿಗಳು ಮತ್ತು ಸಾರ್ವಜನಿಕರಿಗೆ ಇನ್ಮುಂದೆ ಅಫ್ಘಾನಿಸ್ತಾನಿಗಳ ಜೊತೆ ವಹಿವಾಟು ನಡೆಸುವ ಸಂದರ್ಭದಲ್ಲಿ ವಿದೇಶಿ ಕರೆನ್ಸಿಯ ಬಳಕೆ ಮಾಡುವುದನ್ನು ಕಟ್ಟುನಿಟ್ಟಾಗಿ ತಡೆಯುವಂತೆ ಸೂಚನೆ ನೀಡಲಾಗಿದೆ," ಎಂದಿದ್ದಾರೆ.
ನಮ್ಮ ಹಣವನ್ನು ನಮಗೆ ನೀಡಿ ಎಂದಿದ್ದ ತಾಲಿಬಾನ್
ಅಫ್ಘಾನಿಸ್ತಾನಕ್ಕೆ ದಾಳಿ ನಡೆಸಿದ ತಾಲಿಬಾನ್ ದೇಶವನ್ನು ತನ್ನ ವಶಕ್ಕೆ ಪಡೆದುಕೊಂಡು ಸರ್ಕಾರವನ್ನು ರಚನೆ ಮಾಡಿದೆ. ಆದರೆ ಈಗ ತಾಲಿಬಾನ್ಗೆ ಸರ್ಕಾರ ನಡೆಸಲು ಆರ್ಥಿಕ ಸಮಸ್ಯೆ ಕಾಣಿಸಿಕೊಂಡಿದೆ. ಬರಪೀಡಿತ ರಾಷ್ಟ್ರವಾದ ಅಫ್ಘಾನಿಸ್ತಾನ ಈಗ ಆರ್ಥಿಕ ಸಮಸ್ಯೆ, ಬಡತನ ಮೊದಲಾದ ಸಮಸ್ಯೆಯನ್ನು ಎದುರಿಸುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರಿಯ ಸೆಂಟ್ರಲ್ ಬ್ಯಾಂಕ್ ಶತಕೋಟಿ ಡಾಲರ್ನಷ್ಟು ಹಣವನ್ನು ಬಿಡುಗಡೆ ಮಾಡಬೇಕು ಎಂದು ಅಫ್ಘಾನಿಸ್ತಾನದ ತಾಲಿಬಾನ್ ಸರ್ಕಾರವು ಇತ್ತೀಚೆಗೆ ಆಗ್ರಹ ಮಾಡಿದೆ.
ಯು.ಎಸ್. ಫೆಡರಲ್ ರಿಸರ್ವ್ ಮತ್ತು ಯುರೋಪ್ನಲ್ಲಿರುವ ಇತರೆ ಹಲವಾರು ಕೇಂದ್ರ ಬ್ಯಾಂಕುಗಳಲ್ಲಿ ಅಫ್ಘಾನಿಸ್ತಾನವು ಶತಕೋಟಿ ಡಾಲರ್ ಹಣವನ್ನು ಇರಿಸಿದೆ. ಆದರೆ ಕಳೆದ ಆಗಸ್ಟ್ನಲ್ಲಿ ಅಫ್ಘಾನಿಸ್ತಾನವನ್ನು ತಾಲಿಬಾನ್ ವಶಕ್ಕೆ ಪಡೆದ ಬಳಿಕ ಈ ಅಂತಾರಾಷ್ಟ್ರೀಯ ಬ್ಯಾಂಕುಗಳು ಹಣವನ್ನು ತಡೆ ಹಿಡಿದಿದೆ. ತಾಲಿಬಾನ್ ಭಯೋತ್ಪಾದಕ ಸಂಘಟನೆ ಎಂದು ಪರಿಗಣಿಸಲಾಗಿರುವ ಹಿನ್ನೆಲೆಯಲ್ಲಿಅಂತಾರಾಷ್ಟ್ರೀಯ ಮಟ್ಟದಲ್ಲಿ ತಾಲಿಬಾನ್ ಸರ್ಕಾರವನ್ನು ಸ್ವೀಕಾರ ಮಾಡಿಲ್ಲ ಈ ನಿಟ್ಟಿನಲ್ಲಿ ಈ ಕ್ರಮವನ್ನು ಕೈಗೊಳ್ಳಲಾಗಿದೆ. ಈ ಹಿನ್ನೆಲೆ "ಆ ಹಣವು ಅಫ್ಘಾನ್ ದೇಶಕ್ಕೆ ಸೇರಿದ ಹಣ. ನಮಗೆ ನಮ್ಮ ಹಣವನ್ನು ನೀಡಿ. ಹಣವನ್ನು ಹೀಗೆ ತಡೆದು ಹಿಡಿಯುವುದು ಅನೈತಿಕ ಹಾಗೂ ಇದು ಕಾನೂನು, ಮೌಲ್ಯಕ್ಕೆ ವಿರುದ್ಧವಾದುದು," ಎಂದು ತಾಲಿಬಾನ್ ಸರ್ಕಾರದ ಹಣಕಾಸುವ ಸಚಿವಾಲಯದ ವಕ್ತಾರ ಅಹ್ಮದ್ ವಾಲಿ ಹಕ್ಮಲ್ ಆಗ್ರಹಿಸಿದ್ದಾರೆ.
(ಒನ್ಇಂಡಿಯಾ ಸುದ್ದಿ)
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications