ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸಿಡಿಸಿದ ಸಂಭ್ರಮದ ಗುಂಡಿಗೆ 17 ಸಾವು, 41 ಮಂದಿಗೆ ಗಾಯ
ಕಾಬೂಲ್, ಸಪ್ಟೆಂಬರ್ 4: ಅಫ್ಘಾನಿಸ್ತಾನದಲ್ಲಿ ಪಂಜ್ ಶೀರ್ ಅನ್ನು ಮಣಿಸಿದ ಸಂಭ್ರಮದಲ್ಲಿ ತಾಲಿಬಾನ್ ಸಂಘಟನೆ ಸಿಡಿಸಿದ ಗುಂಡಿನ ದಾಳಿಯಲ್ಲಿ ಮಕ್ಕಳು ಸೇರಿದಂತೆ 17ಕ್ಕೂ ಹೆಚ್ಚು ಮಂದಿ ಪ್ರಾಣ ಬಿಟ್ಟಿದ್ದು, 41ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ ಎಂದು ಅಫ್ಘಾನಿಸ್ತಾನದ ಸ್ಥಳೀಯ ಸುದ್ದಿ ಸಂಸ್ಥೆ ಅಸ್ವಕಾ ವರದಿ ಮಾಡಿದೆ.
ಅಫ್ಘಾನಿಸ್ತಾನದ ರಾಷ್ಟ್ರೀಯ ಪ್ರತಿರೋಧಕ ತಂಡವನ್ನು ಸೋಲಿಸಿದ ಖುಷಿಯಲ್ಲಿ ತಾಲಿಬಾನ್ ಉಗ್ರರು ಮನಸೋ-ಇಚ್ಛೆ ಗುಂಡಿನ ಸುರಿಮಳೆಗೈದರು. ಈ ವೇಳೆಯಲ್ಲಿ ಮಕ್ಕಳು ಸೇರಿದಂತೆ ಗುಂಡು ತಗುಲಿದ 17ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎಂದು ಗೊತ್ತಾಗಿದೆ.
ಸರ್ವಶಕ್ತನಾದ ಅಲ್ಲಾಹನ ಕೃಪೆಯಿಂದ, ನಾವು ಇಡೀ ಅಫ್ಘಾನಿಸ್ತಾನವನ್ನು ನಿಯಂತ್ರಿಸುತ್ತೇವೆ. ನಮಗೆ ಅಡ್ಡಿಯಾದವರನ್ನು ಈಗಾಗಲೇ ಸೋಲಿಸಿದ್ದೇವೆ. ಪಂಜಶೀರ್ ಈಗ ನಮ್ಮ ಅಧೀನದಲ್ಲಿದೆ ಎಂದು ತಾಲಿಬಾನ್ ಕಮಾಂಡರ್ ಒಬ್ಬರು ರಾಯಿಟರ್ಸ್ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.

ಪಾಕಿಸ್ತಾನ ವಾಹಿನಿಗಳಲ್ಲಿನ ಸುದ್ದಿ ಸುಳ್ಳು:
ಪಂಜಶೀರ್ನಲ್ಲಿ ಪ್ರತಿರೋಧ ಪಡೆಗಳ ನಾಯಕ ಅಹ್ಮದ್ ಮಸೂದ್ ತಮ್ಮ ಹಕ್ಕುಗಳನ್ನು ತಳ್ಳಿಹಾಕಿದರು. ಪಾಕಿಸ್ತಾನದ ಮಾಧ್ಯಮಗಳಲ್ಲಿ ವರದಿಯಾಗುತ್ತಿರುವ ಪಂಜಶೀರ್ ವಿಜಯದ ಸುದ್ದಿಗಳೆಲ್ಲ ಸುಳ್ಳಾಗಿವೆ. ಪಂಜ್ ಶೀರ್ ಅನ್ನು ವಶಪಡಿಸಿಕೊಂಡ ದಿನವೇ ನನ್ನ ಕೊನೆಯ ದಿನವಾಗುತ್ತದೆ ಎಂದು ಹೇಳಿದ್ದಾರೆ.
ಅನಗತ್ಯ ಫೈರಿಂಗ್ ನಡೆಸದಂತೆ ಸೂಚನೆ:
ಅಫ್ಘಾನಿಸ್ತಾನದಲ್ಲಿ ಸಂಭ್ರಮದಿಂದ ಫೈರಿಂಗ್ ನಡೆಸಿದ ವೇಳೆ 17 ಜನರು ಜೀವ ಕಳೆದುಕೊಂಡಿರುವ ಬಗ್ಗೆ ವರದಿಯಾಗುತ್ತಿದ್ದಂತೆ ತಾಲಿಬಾನ್ ಎಚ್ಚೆತ್ತುಕೊಂಡಿದೆ. ತಾಲಿಬಾನ್ ವಕ್ತಾರ ಜಬಿಹುಲ್ಲಾ ಮುಜಾಹಿದ್ ಅನಗತ್ಯವಾಗಿ ಗುಂಡು ಹಾರಿಸದಂತೆ ಸಂಘಟನೆಯವರಿಗೆ ಸೂಚನೆ ನೀಡಿದ್ದಾರೆ. "ಗಮನಿಸಿ, ಕಾಬೂಲ್ ನಗರ ಮತ್ತು ದೇಶದಾದ್ಯಂತ ಗಾಳಿಯಲ್ಲಿ ಗುಂಡು ಹಾರಿಸುವುದನ್ನು ತಪ್ಪಿಸಿ, ಅದರ ಬದಲಾಗಿ ಅಲ್ಲಾಗೆ ಧನ್ಯವಾದ ಸಲ್ಲಿಸಿ. ಆಯುಧಗಳು ಮತ್ತು ಮದ್ದುಗುಂಡುಗಳು ನಿಮ್ಮ ಕೈಯಲ್ಲಿದೆ. ಅವುಗಳನ್ನು ಹಾಳುಮಾಡುವ ಹಕ್ಕು ಯಾರಿಗೂ ಇಲ್ಲ. ಗುಂಡುಗಳು ನಾಗರಿಕರಿಗೆ ಹಾನಿ ಮಾಡುವ ಸಾಧ್ಯತೆ ಹೆಚ್ಚಾಗಿದ್ದು, ಅನಗತ್ಯವಾಗಿ ಶೂಟ್ ಮಾಡಬೇಡಿ ಎಂದು ಮುಜಾಹಿದ್ ಹೇಳಿದ್ದಾರೆ.
ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರ:
ಕಳೆದ ಆಗಸ್ಟ್ 15ರಂದು ಅಫ್ಘಾನ್ ರಾಜಧಾನಿ ಕಾಬೂಲ್ ಮೇಲೆ ತಾಲಿಬಾನ್ ಉಗ್ರ ಸಂಘಟನೆ ಹಿಡಿತ ಸಾಧಿಸಿತು. ಎರಡು ದಶಕಗಳ ಕಾಲ ಅಫ್ಘಾನಿಸ್ತಾನದಲ್ಲಿ ಸಂಘರ್ಷದ ಯುದ್ಧವನ್ನು ಯುಎಸ್ ಅಂತ್ಯಗೊಳಿಸಿತು. ಕಳೆದ ಆಗಸ್ಟ್ 31ರವರೆಗೂ ಯುಎಸ್ ಸೇನೆ ತಮ್ಮ ಪ್ರಜೆಗಳ ಸುರಕ್ಷಿತ ಸ್ಥಳಾಂತರಕ್ಕಾಗಿ ಕಾರ್ಯಾಚರಣೆ ನಡೆಸಿತು. ಯುಎಸ್ ಸೇನೆಯು ದೇಶದಿಂದ ವಾಪಸ್ ಆಗುತ್ತಿದ್ದಂತೆ ಇಡೀ ಅಫ್ಘಾನಿಸ್ತಾನ ತಾಲಿಬಾನ್ ಸಂಘಟನೆಯ ಕೈವಶವಾಯಿತು. ಅಫ್ಘಾನಿಸ್ತಾನದಲ್ಲಿ 20 ವರ್ಷಗಳ ನಂತರ ಮತ್ತೊಮ್ಮೆ ಅಧಿಕಾರ ಹಿಡಿಯಲು ಮುಂದಾಗಿರುವ ತಾಲಿಬಾನ್ ಸಪ್ಟೆಂಬರ್ 3ರಂದು ಸರ್ಕಾರ ರಚಿಸಿತು.
-
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್









Click it and Unblock the Notifications