ಉಗ್ರರ ಹತ್ಯಾಕಾಂಡ ನಿಲ್ಲಿಸದಿದ್ದರೆ ಮತ್ತೆ ಪ್ರತೀಕಾರ!
ಇಸ್ಲಾಮಾಬಾದ್, ಡಿ. 20 : ತಾಲಿಬಾನ್ ಅಡಗುತಾಣಗಳ ಮೇಲೆ ಮುಗಿಬಿದ್ದಿರುವ ಪಾಕಿಸ್ತಾನದ ಸೇನೆ ಉಗ್ರರನ್ನು ಅಟ್ಟಾಡಿಸಿಕೊಂಡು ಕೊಲ್ಲುತ್ತಿದ್ದರೆ, ಸದ್ಯದಲ್ಲೇ ಪ್ರಧಾನಿ ನವಾಜ್ ಷರೀಫ್, ಸೇನಾಧಿಕಾರಿಗಳ ಕುಟುಂಬವನ್ನು ನಿರ್ನಾಮ ಮಾಡುವುದಾಗಿ ತೆಹರಿಕ್-ಇ-ತಾಲಿಬಾನ್ ಪಾಕಿಸ್ತಾನ ಕಟ್ಟೆಚ್ಚರಿಕೆ ನೀಡಿದೆ.
ತೆಹರಿಕ್-ಇ-ತಾಲಿಬಾನ್ ಸಂಘಟನೆಯ ಕಮಾಂಡರ್ ಮೊಹಮ್ಮದ್ ಖರಾಸಾನಿ ಪಾಕಿಸ್ತಾನಿ ಅಧಿಕಾರಿಗಳಿಗೆ ಶುಕ್ರವಾರ ಸಂಜೆ ಬರೆದಿದ್ದಾನೆಂದು ಹೇಳಲಾಗಿರುವ ಪತ್ರದಲ್ಲಿ, ತಾಲಿಬಾನ್ ಮೇಲೆ ಮಾಡುತ್ತಿರುವ ದಾಳಿಗೆ ಸದ್ಯದಲ್ಲಿಯೇ ಪ್ರತೀಕಾರ ತೀರಿಸಿಕೊಳ್ಳುವುದಾಗಿ, ಮತ್ತಷ್ಟು ರಕ್ತ ಹರಿಸುವುದಾಗಿ ಬೆದರಿಕೆ ಒಡ್ಡಲಾಗಿದೆ. [ಉಗ್ರ ಮೌಲಾನಾ ಫಜ್ಲುಲ್ಲಾ ಹತ್ಯೆ]

ಡಿಸೆಂಬರ್ 16ರಂದು ತಾಲಿಬಾನಿ ಉಗ್ರರು ಸೇನಾ ಶಾಲೆಯ ಮೇಲೆ ದಾಳಿ ಮಾಡಿ, 140ಕ್ಕೂ ಹೆಚ್ಚು ಅಮಾಯಕ ಮಕ್ಕಳನ್ನು ಮತ್ತು ಶಿಕ್ಷಕರನ್ನು ಮನಬಂದಂತೆ ಗುಂಡಿಟ್ಟು ಹತ್ಯೆಗೈದಿದ್ದರು. ಭಯೋತ್ಪಾದಕರ ಮೇಲೆ ಕ್ರಮ ತೆಗೆದುಕೊಳ್ಳಲು ಭಾರತ ಸೇರಿದಂತೆ ವಿಶ್ವದಾದ್ಯಂತ ಒತ್ತಡ ಬಂದ ಹಿನ್ನೆಲೆಯಲ್ಲಿ ಪಾಕ್ ಸೇನೆ ಉಗ್ರರ ಮೇಲೆ ಮುಗಿಬಿದ್ದಿದೆ.
ಗಲ್ಲಿಗೇರಿಸುವುದನ್ನು ನಿಷೇಧಿಸಿದ್ದ ಪಾಕಿಸ್ತಾನ ಸರಕಾರ ಅದನ್ನೀಗ ಹಿಂತೆಗೆದುಕೊಂಡಿದ್ದು, ಶುಕ್ರವಾರ ಇಬ್ಬರು ಉಗ್ರರನ್ನು ಗಲ್ಲಿಗೇರಿಸಿದೆ. ಇದನ್ನು ನಿಲ್ಲಿಸಲಿದ್ದರೆ ಇನ್ನಷ್ಟು ಕುಟುಂಬಗಳಲ್ಲಿ ಸ್ಮಶಾನಸದೃಶ ವಾತಾರವಣವನ್ನು ಸೃಷ್ಟಿಸುತ್ತೇವೆ, ಎಂದು ತಾಲಿಬಾನಿಗಳು ಗುಡುಗಿದ್ದಾರೆ. [ಭಾರತದಲ್ಲಿ ರಕ್ತದ ಹೊಳೆ ಹರಿಸುತ್ತೇನೆಂದ ಉಗ್ರನಿಗೆ ಜಾಮೀನು]
ಅಫಘಾನಿಸ್ತಾನದ ಗಡಿಗೆ ಅಂಟಿಕೊಂಡಿರುವ ಪಾಕಿಸ್ತಾನದ ಪ್ರದೇಶದಲ್ಲಿ ಅಡಗಿಕೊಂಡಿದ್ದ ತಾಲಿಬಾನ್ ಉಗ್ರರನ್ನು ಪಾಕಿಸ್ತಾನ ಬೆನ್ನತ್ತಿ ಕೊಲ್ಲುತ್ತಿದ್ದು, ಇಲ್ಲಿಯವರೆಗೆ 119 ಭಯೋತ್ಪಾದಕನ್ನು ಹತ್ಯೆಗೈದಿದೆ.
-
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್












Click it and Unblock the Notifications