ತಾಂಜೇನಿಯಾದ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಸಾಮಿಯಾ ಹಸನ್
ತಾಂಜೇನಿಯಾದ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಸಾಮಿಯಾ ಸುಳುಹು ಹಸನ್ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಈ ಹಿಂದಿನ ಅಧ್ಯಕ್ಷ ಜಾನ್ ಮಾಗುಫೆಲ್ ನಿಧನದಿಂದಾಗಿ ತೆರವಾಗಿದ್ದ ಸ್ಥಾನಕ್ಕೆ ಸಾಮಿಯಾ ನೇಮಕಗೊಂಡಿದ್ದಾರೆ.61 ವರ್ಷದ ಹಸನ್ ಮುಸ್ಲಿಂ ಮಹಿಳೆಯಾಗಿದ್ದು, ಜಾನ್ಜಿಬಾರ್ ಮೂಲದವರಾಗಿದ್ದಾರೆ. ಇವರು ಮಗುಫುಲಿಯವರ ಐದು ವರ್ಷದ ಅಧಿಕಾರವನ್ನು ಪೂರೈಸಲಿದ್ದಾರೆ.
ಹಸನ್ ಅವರು ತಾಂಜೇನಿಯಾದ ಸಂವಿಧಾನವನ್ನು ಪಾಲಿಸುವುದಾಗಿ ಪ್ರಮಾಣ ಮಾಡಿದ್ದಾರೆ. ಜಾನ್ ಮಗುಫುಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಕೆಲವರು ಹೇಳಿದರೆ ಇನ್ನೂ ಕೆಲವರು ಕೊರೊನಾದಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗುತ್ತಿದೆ ಆದರೆ ಸಾವಿಗೆ ನಿಜವಾದ ಕಾರಣ ಇನ್ನೂ ಬಹಿರಂಗವಾಗಿಲ್ಲ.

ಮಗುಫುಲಿ 1995ರಲ್ಲಿ ಮೊದಲ ಬಾರಿಗೆ ಪಾರ್ಲಿಮೆಂಟ್ಗೆ ಆಯ್ಕೆಯಾಗಿದ್ದರು. 2010ರಲ್ಲಿ ಎರಡನೇ ಬಾರಿಗೆ ಸಾರಿಗೆ ಮಂತ್ರಿಯಾದ ನಂತರ ಹೆಚ್ಚು ಜನಪ್ರಿಯತೆ ಗಳಿಸಿದ್ದರು. ರಸ್ತೆ ನಿರ್ಮಾಣ ಉದ್ಯಮದಲ್ಲಿ ಅವರ ನಾಯಕತ್ವದ ಶೈಲಿ ಮತ್ತು ಹೋರಾಟವು ತಾಂಜೇನಿಯಾ ಜನರನ್ನು ಆಕರ್ಷಿಸಿತ್ತು. ಅದಕ್ಕೆ ಅವರನ್ನು ಬುಲ್ಡೋಜರ್ ಎಂದು ಕರೆಯಲಾಗುತ್ತಿತ್ತು.
ಪ್ರತಿ ಭಾನುವಾರ ಸಾರ್ವಜನಿಕವಾಗಿ ಚರ್ಚ್ ಆಗಮಿಸುತ್ತಿದ್ದ ದಿವಂಗತ ಮಗುಫುಲಿ, ಫೆಬ್ರವರಿ 27ರಿಂದ ಅನಾರೋಗ್ಯದ ಕಾರಣ ಎಲ್ಲೂ ಕಾಣಿಸಿಕೊಳ್ಳುತ್ತಿರಲಿಲ್ಲ. 2015 ರಲ್ಲಿ ಅಧ್ಯಕ್ಷರಾಗಿದ್ದ ಅವರು ಮತ್ತೆ 2020 ರಲ್ಲಿ ನಡೆದ ಚುನಾವಣೆಯಲ್ಲೂ ಗೆದ್ದು ಆಯ್ಕೆಯಾಗಿದ್ದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications