ಶ್ರೀಲಂಕಾ ಸರ್ವಪಕ್ಷ ಸಭೆಯಲ್ಲಿ ಆಗಿದ್ದೇನು; 10 ಅಂಶಗಳನ್ನು ಓದಿ ತಿಳಿಯಿರಿ
ಸಿಂಗಾಪುರ್, ಜುಲೈ 14: ದ್ವೀಪರಾಷ್ಟ್ರದಲ್ಲಿ ಸೃಷ್ಟಿಯಾಗಿರುವ ಆರ್ಥಿಕ ಬಿಕ್ಕಟ್ಟು ಮತ್ತು ಸರ್ಕಾರ ಪತನದ ಬೆನ್ನಲ್ಲೇ ಬುಧವಾರ ನಡೆಸಿದ ಸರ್ವಪಕ್ಷಗಳ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ.
ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸೆ ನಿವಾಸಕ್ಕೆ ಪ್ರತಿಭಟನಾಕಾರರು ಮುತ್ತಿಗೆ ಹಾಕಿದ ನಂತರದಲ್ಲಿ ಅಚ್ಚರಿಯ ರಾಜಕೀಯ ಬೆಳವಣಿಗೆಗಳು ನಡೆಯುತ್ತಿದೆ. ಇದರ ಹಿನ್ನೆಲೆ ಭವಿಷ್ಯದ ಆಡಳಿತ ದೃಷ್ಟಿಯಿಂದ ಸರ್ವ ಪಕ್ಷಗಳ ಸಭೆಯನ್ನು ಕರೆಯಲಾಗಿತ್ತು.
ದ್ವೀಪರಾಷ್ಟ್ರದಲ್ಲಿ ಎಲ್ಲಾ ಪಕ್ಷಗಳು ಸೇರಿಕೊಂಡು ಒಬ್ಬ ಅಧ್ಯಕ್ಷನನ್ನು ಆಯ್ಕೆ ಮಾಡುವ ಪ್ರಕ್ರಿಯೆ ಕುರಿತು ಸಭೆಯಲ್ಲಿ ಚರ್ಚಿಸಿದ್ದಾರೆ. ಶ್ರೀಲಂಕಾದ ಆಡಳಿತದ ಚುಕ್ಕಾಣಿಯನ್ನು ಯಾರ ಕೈಗೆ ನೀಡಬೇಕು. ವಾಸ್ತವದ ಪರಿಸ್ಥಿತಿಯನ್ನು ಯಾವ ರೀತಿ ನಿಭಾಯಿಸಬೇಕು ಎಂಬುದರ ಕುರಿತು ನಡೆದ ಚರ್ಚೆ ಮತ್ತು ಬೆಳವಣಿಗೆಳನ್ನು ಮುಂದೆ ಓದಿ ತಿಳಿಯಿರಿ.

ಶ್ರೀಲಂಕಾದಲ್ಲಿ ಸರ್ವಪಕ್ಷ ಸಭೆ ಮತ್ತು ರಾಜಕೀಯ ಬೆಳವಣಿಗೆ:
* ನಾಗರಿಕರ ಪ್ರತಿಭಟನೆಗೆ ಬೆದರಿದ ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸೆ ತಮ್ಮನ್ನು ಸಿಂಗಾಪುರಕ್ಕೆ ಕಳುಹಿಸಲು ಖಾಸಗಿ ಜೆಟ್ ವ್ಯವಸ್ಥೆಗಾಗಿ ಮಾಲ್ಡೀವ್ಸ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ ಎಂದು ಮಾಲ್ಡೀವ್ಸ್ನ ಸರ್ಕಾರಿ ಮೂಲಗಳು ತಿಳಿಸಿವೆ. ಬುಧವಾರವಷ್ಟೇ ರಾಜೀನಾಮೆ ಸಲ್ಲಿಸಿದ್ದ ರಾಜಪಕ್ಸೆ ಸಂಜೆ ಮಾಲ್ಡೀವ್ಸ್ಗೆ ಪಲಾಯನ ಮಾಡಿದ್ದರು.
* ಬುಧವಾರ ಲಂಕಾ ರಾಜಕೀಯ ನಾಯಕರು ಸರ್ವಪಕ್ಷ ಸಭೆಯನ್ನು ನಡೆಸಿದ್ದು, ಸಂಸತ್ತಿನ ಸ್ಪೀಕರ್ ಅನ್ನು ಹಂಗಾಮಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲು ನಿರ್ಧರಿಸಲಾಯಿತು. ಅಲ್ಲದೇ ರಾನಿಲ್ ವಿಕ್ರಮಸಿಂಘೆ ಕೂಡ ಅಧಿಕಾರದಿಂದ ಕೆಳಗಿಳಿಯಬೇಕು ಹಾಗೂ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳು ಕೂಡಿಕೊಂಡು ಸರ್ವಪಕ್ಷಗಳ ಸರ್ಕಾರವನ್ನು ರಚಿಸಬೇಕು ಎಂದು ಹೇಳಲಾಗಿದೆ.
* ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಸರ್ಕಾರ ಮತ್ತು ಪ್ರತಿಪಕ್ಷ ಎರಡಕ್ಕೂ ಒಪ್ಪಿಗೆಯಾಗುವ ಪ್ರಧಾನಿಯನ್ನು ನಾಮನಿರ್ದೇಶನ ಮಾಡುವಂತೆ ಸ್ಪೀಕರ್ ಮಹಿಂದ ಯಾಪಾ ಅಬೇವರ್ಧನಗೆ ಸೂಚನೆ ನೀಡಲಾಗಿದೆ.
* ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸೆ ಮಾಲ್ಡೀವ್ಸ್ಗೆ ಹಾರಿದ ನಂತರ ಕೊಲಂಬೊದಲ್ಲಿ ಭಾರಿ ಪ್ರತಿಭಟನೆಗಳು ನಡೆದಿದ್ದು, ಶ್ರೀಲಂಕಾದಲ್ಲಿ ಗುರುವಾರ ಬೆಳಗ್ಗೆವರೆಗೂ ತುರ್ತು ಪರಿಸ್ಥಿತಿ ಘೋಷಿಸಲಾಗಿತ್ತು. ಇದರ ಮಧ್ಯೆ ಹೆಚ್ಚುತ್ತಿರುವ ಪ್ರತಿಭಟನೆಯನ್ನು ನಿಯಂತ್ರಿಸಲು ಕೊಲಂಬೊ ಸೇರಿದಂತೆ ಪಶ್ಚಿಮ ಪ್ರಾಂತ್ಯದಾದ್ಯಂತ ಅನಿರ್ದಿಷ್ಟ ಕರ್ಫ್ಯೂ ವಿಧಿಸಲಾಗಿದೆ.

* ಸಾವಿರಾರು ಜನರು ಪ್ರಧಾನಿ ರಾನಿಲ್ ವಿಕ್ರಮಸಿಂಘೆ ಅವರ ಕಚೇರಿಗೆ ನುಗ್ಗಿ, ಅವರ ನಿವಾಸವನ್ನು ವಶಪಡಿಸಿಕೊಂಡಾಗ ಮತ್ತು ಲಂಕಾ ಸಂಸತ್ತಿನ ಗೇಟ್ಗಳನ್ನು ಮುರಿಯುವುದಕ್ಕೆ ಯತ್ನಿಸಿದ ಸಂದರ್ಭದಲ್ಲಿ ಪರಿಸ್ಥಿತಿಯನ್ನು ತಿಳಿಗೊಳಿಸುವುದಕ್ಕಾಗಿ ಅಶ್ರುವಾಯು ಶೆಲ್ಗಳನ್ನು ಸಿಡಿಸಲಾಯಿತು.
* ಅಧ್ಯಕ್ಷ ಗೋಟಬಯ ರಾಜಪಕ್ಸೆ ಭರವಸೆ ನೀಡಿದಂತೆ ರಾಜೀನಾಮೆ ಕಳುಹಿಸಲಿದ್ದಾರೆ ಎಂದು ಸಂಸತ್ತಿನ ಸ್ಪೀಕರ್ ಮಹಿಂದ ಯಾಪಾ ಅಬೇವರ್ಧನ ಹೇಳಿದ್ದಾರೆ. ಪ್ರಧಾನಿ ವಿಕ್ರಮಸಿಂಘೆ ಅನ್ನು ದೇಶದ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.
* ಶ್ರೀಲಂಕಾದ ಸರ್ಕಾರಿ ಟಿವಿ ನೆಟ್ವರ್ಕ್, ರೂಪವಾಹಿನಿ ಕಾರ್ಪೊರೇಷನ್, ಪ್ರತಿಭಟನಾಕಾರರು ಟಿವಿ ಸ್ಟೇಷನ್ಗೆ ನುಗ್ಗಿದ ಹಿನ್ನೆಲೆ ಪ್ರಸಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಯಿತು. ಆದರೆ ಚಾನೆಲ್ ನಂತರ ಪ್ರಸಾರವನ್ನು ಪುನರಾರಂಭಿಸಿತು.
* ಕಳೆದ ರಾತ್ರಿ ಗೋಟಬಯ ರಾಜಪಕ್ಸೆ ಖಾಸಗಿ ವಿಮಾನಕ್ಕಾಗಿ ವಿನಂತಿಸಿದ್ದಾರೆ ಎಂದು ದ್ವೀಪ ರಾಷ್ಟ್ರದ ರಕ್ಷಣಾ ಅಧಿಕಾರಿಗಳು ತಿಳಿಸಿದ್ದರು. ಅಧ್ಯಕ್ಷರಾಗಿದ್ದ ರಾಜಪಕ್ಸೆ ರಕ್ಷಣಾ ಪಡೆಗಳ ಸರ್ವೋಚ್ಚ ಕಮಾಂಡರ್ ಆಗಿ ಮುಂದುವರಿದಿದ್ದಾರೆ.
* ಮಾಲ್ಡೀವ್ಸ್ಗೆ ಆಗಮಿಸಿದ ನಂತರ, ಅಧ್ಯಕ್ಷ ರಾಜಪಕ್ಸೆ, ಅವರ ಪತ್ನಿ ಮತ್ತು ಅಂಗರಕ್ಷಕರನ್ನು ಪೊಲೀಸ್ ಬೆಂಗಾವಲು ಅಡಿಯಲ್ಲಿ ಅಜ್ಞಾತ ಸ್ಥಳಕ್ಕೆ ಕರೆದೊಯ್ಯಲಾಯಿತು ಎಂದು ಮಾಲೆಯ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇನ್ನು ಅಧ್ಯಕ್ಷರ ಕಿರಿಯ ಸಹೋದರ ಮತ್ತು ಮಾಜಿ ಹಣಕಾಸು ಸಚಿವ ಬಸಿಲ್ ರಾಜಪಕ್ಸೆ ಕೂಡ ದೇಶವನ್ನು ತೊರೆದಿದ್ದಾರೆ ಎಂದು ಹೇಳಲಾಗುತ್ತಿದೆ.
* ಅಧ್ಯಕ್ಷ ರಾಜಪಕ್ಸೆ ಮತ್ತು ಅವರ ಸಹೋದರ ಬೆಸಿಲ್ ಪಲಾಯನ ಮಾಡಲು ಭಾರತ ಸಹಾಯ ಮಾಡಿದೆ ಎಂಬ ವರದಿಗಳನ್ನು ಶ್ರೀಲಂಕಾದಲ್ಲಿರುವ ಭಾರತೀಯ ಹೈಕಮಿಷನ್ ತಳ್ಳಿಹಾಕಿದೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications