ಕೈ ಮೀರುತ್ತಿರುವ ಪ್ರತಿಭಟನೆಯ ಬಿಸಿ: ಒಬ್ಬ ಪೊಲೀಸ್ ಅಧಿಕಾರಿ ಸಾವು
ಕಾಶ್ಮೀರದ ಪಾಕ್ ಆಕ್ರಮಿತ ಭಾಗ ಪಿಒಕೆಯಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಬರುತ್ತಿಲ್ಲ. ಕಾಶ್ಮೀರಿ ಜನರ ಪ್ರತಿಭಟನೆಯು ಹಿಂಸಾತ್ಮಕ ರೂಪ ಪಡೆದುಕೊಂಡಿದೆ. ಇದರಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೆಲವರು ಪ್ರಾಣ ಕಳೆದುಕೊಂಡ ಬಗ್ಗೆ ತಿಳಿದು ಬಂದಿದೆ.
ಇದೇ ವೇಳೆ ರಾವಲಕೋಟ್ನಲ್ಲಿ ಕಾಶ್ಮೀರಿಗಳು ತ್ರಿವರ್ಣ ಧ್ವಜವನ್ನು ಹಾರಿಸುವ ಮೂಲಕ ಪ್ರದರ್ಶನ ನೀಡಿದ್ದಾರೆ. ಅವರು ಪಾಕಿಸ್ತಾನದಿಂದ ಪ್ರತ್ಯೇಕತೆಯ ಬೇಡಿಕೆಯನ್ನು ಒತ್ತಾಯಿಸುತ್ತಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಪ್ರಕ್ಷುಬ್ಧ ವಾತಾವರಣವಿದೆ. ಕಾಶ್ಮೀರಿಗಳು ಪಾಕಿಸ್ತಾನ ಸರ್ಕಾರ ಮತ್ತು ಸೇನೆಯ ವಿರುದ್ಧ ಅಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಪಡಿತರ ಕೊರತೆಯಿಂದ ಜನರು ಆಕ್ರೋಶ
ಪಾಕ್ ಆಕ್ರಮಿತ ಕಾಶ್ಮೀರದ ಜನರು ಪಡಿತರ ಕೊರತೆ ಎದುರಿಸುತ್ತಿದ್ದಾರೆ. ಪ್ರತಿಭಟನಾಕಾರರು ಪೊಲೀಸರು ಮತ್ತು ಸೇನೆಯೊಂದಿಗೆ ನಿರಂತರವಾಗಿ ಜನರು ಘರ್ಷಣೆ ನಡೆಸುತ್ತಿದ್ದಾರೆ. ಘರ್ಷಣೆಯಲ್ಲಿ ಒಬ್ಬ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಅದೇ ವೇಳೆ 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಪಿಒಕೆ ರಾಜಧಾನಿ ಮುಜಫರಾಬಾದ್ನಲ್ಲಿ ಶುಕ್ರವಾರವೂ ಮುಷ್ಕರ ಮುಂದುವರಿದಿದೆ. ನಂತರ ಪೊಲೀಸರು ಮತ್ತು ಸೇನೆಯ ಮೇಲೆ ಜನರು ಕಲ್ಲು ತೂರಾಟ ನಡೆಸಿದರು. ರಾಜಧಾನಿಗೆ ಹೋಗುವ ಎಲ್ಲಾ ರಸ್ತೆಗಳನ್ನು ಅಧಿಕಾರಿಗಳು ಮುಚ್ಚಿದ್ದಾರೆ. ರಾಶಿ ರಾಶಿ ಮಣ್ಣಿನಿಂದ ವಾಹನಗಳು ಸಂಚರಿಸದಂತೆ ತಡೆಯಲಾಗುತ್ತಿದೆ. ಹಲವರನ್ನು ಬಂಧಿಸಲಾಗಿದೆ. ಪೊಲೀಸ್ ಫೈರಿಂಗ್ ನಡೆಸಲಾಗಿದೆ.
ಪ್ರತಿಭಟನೆ ಹತ್ತಿಕ್ಕಲು ಸೇನೆ ನಿಯೋಜನೆ
ಈ ಪ್ರದೇಶದಲ್ಲಿ ಸೇನೆಯನ್ನು ನಿಯೋಜಿಸಲಾಗಿದೆ. ಆಹಾರದ ಕೊರತೆ, ಬೆಲೆ ಏರಿಕೆ, ವಿದ್ಯುತ್ ಅಭಾವದ ವಿರುದ್ಧ ಜನರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ವರದಿ ಪ್ರಕಾರ ಇಲ್ಲಿ ಅಂಗಡಿ ಮುಂಗಟ್ಟುಗಳು ಮುಚ್ಚಿದ್ದು, ರಸ್ತೆಗಳಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದೆ. ಜನರು ಪೊಲೀಸರತ್ತ ಗುಂಡು ಹಾರಿಸಿದ್ದು, ಈ ಕಾರಣದಿಂದಾಗಿ ಒಬ್ಬ ಕಾನ್ಸ್ಟೆಬಲ್ ಗುಂಡು ಹಾರಿಸಿದ್ದಾರೆ. ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದರು, ಇದಕ್ಕೆ ಪ್ರತಿಯಾಗಿ ಅಶ್ರುವಾಯು ಶೆಲ್ಗಳನ್ನು ಪ್ರಯೋಸಿಲಾಗಿದೆ. ದಾಳಿಯಲ್ಲಿ ಇದುವರೆಗೆ 78ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. 59 ಪೊಲೀಸ್ ಸಿಬ್ಬಂದಿ ಮತ್ತು 9 ನಾಗರಿಕರು ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
भारत का एक हिस्सा जल रहा है !
— Panchjanya (@epanchjanya) May 12, 2024
भारत के PoK की घाटियां गोलियां की तड़तड़ाहट से गूंज रही है।
PoK के लोगों ने पाकिस्तानी सरकार और सेना के खिलाफ युद्ध छेड़ दिया है।
PoK में "पाकिस्तान से आजादी" के नारे लग रहे हैं।
पाकिस्तानी सेना के जवानों को लोग दौड़ा-दौड़ाकर पीट रहे हैं। pic.twitter.com/kBU50kgDJY
ಪ್ರಯೋಜಕ್ಕೆ ಬಾರದ ಸೆಕ್ಷನ್ 144
ಪ್ರತಿಭಟನಾಕಾರರನ್ನು ಹತ್ತಿಕ್ಕಲು ಆಜಾದ್ ಕಾಶ್ಮೀರ ಸರ್ಕಾರ ಸೆಕ್ಷನ್ 144 ವಿಧಿಸಿತ್ತು. ಆದರೆ, ಯಾವುದೇ ಪರಿಣಾಮ ಬೀರಲಿಲ್ಲ. ಮುಜಫರಾಬಾದ್ನಲ್ಲಿ ಸಾವಿರಾರು ಕಾಶ್ಮೀರಿ ಪ್ರತಿಭಟನಾಕಾರರು ಬೀದಿಗಿಳಿದಿದ್ದರು. ಈ ಸಮಯದಲ್ಲಿ, ಪ್ರತಿಭಟನಾಕಾರರ ಮನವಿಯ ಮೇರೆಗೆ ಕಾಶ್ಮೀರದಾದ್ಯಂತ ಶಾಲೆಗಳು, ಕಾಲೇಜುಗಳು, ಅಂಗಡಿಗಳನ್ನು ಸಂಪೂರ್ಣವಾಗಿ ಮುಚ್ಚಲಾಗಿದೆ.
ಕೆಲ ದಿನಗಳಿಂದ ಹದಗೆಟ್ಟಿರುವ ಆರ್ಥಿಕ ಪರಿಸ್ಥಿತಿಯಿಂದಾಗಿ ಪಾಕ್ ಆಕ್ರಮಿತ ಕಾಶ್ಮೀರದ ಜನತೆ ಕಂಗೆಟ್ಟಿದ್ದಾರೆ. ಮಿತಿಮೀರಿದ ತೆರಿಗೆ ಸಂಗ್ರಹ ಮತ್ತು ನಿರಂತರವಾಗಿ ಹೆಚ್ಚುತ್ತಿರುವ ಹಣದುಬ್ಬರವು ಅವರ ಜೀವನವನ್ನು ಕಷ್ಟಕರವಾಗಿಸಿದೆ. ಇದಲ್ಲದೇ ಅವರ ಕಾರ್ಯವೈಖರಿಗೆ ವಿದ್ಯುತ್ ಬಿಕ್ಕಟ್ಟು ಕೂಡ ಪ್ರಮುಖ ಕಾರಣವಾಗಿದ್ದು, ಪ್ರತಿಭಟನೆ ತೀವ್ರವಾಗಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications