WHO ಎಚ್ಚರಿಕೆ ನಿರ್ಲಕ್ಷಿಸಿ ಮಿಶ್ರ ಕೊರೊನಾ ಲಸಿಕೆ ನೀಡಲು ಮುಂದಾದ ಥಾಯ್ಲೆಂಡ್
ಬ್ಯಾಂಕಾಕ್, ಜುಲೈ 13: ಕೊರೊನಾ ಸೋಂಕಿನ ವಿರುದ್ಧ ಎರಡು ಕೊರೊನಾ ಲಸಿಕೆಗಳ ಮಿಶ್ರ ಡೋಸ್ ನೀಡುವ ಸಂಬಂಧ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆಯನ್ನು ನಿರ್ಲಕ್ಷಿಸಿರುವ ಥಾಯ್ಲೆಂಡ್, ಕೊರೊನಾ ಸೋಂಕಿನ ನಿಯಂತ್ರಣಕ್ಕೆ ಮಿಶ್ರ ಲಸಿಕೆ ನೀಡುವುದನ್ನು ಸಮರ್ಥಿಸಿಕೊಂಡಿದೆ.
ಡೆಲ್ಟಾ ರೂಪಾಂತರದಿಂದ ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಭಯಂಕರ ರೀತಿಯಲ್ಲಿ ಏರುತ್ತಿದೆ. ಕೊರೊನಾ ಸೋಂಕಿನ ಪ್ರಮಾಣ ಹಾಗೂ ಮರಣ ಪ್ರಮಾಣ ಹೆಚ್ಚಾಗುತ್ತಿದೆ. ಇಂಥ ಹೊತ್ತಿನಲ್ಲಿ ಮಿಶ್ರ ಕೊರೊನಾ ಲಸಿಕೆ ನೀಡುವುದು ಅವಶ್ಯಕವಾಗಿದೆ ಎಂದು ಥಾಯ್ಲೆಂಡ್ ಹೇಳಿದೆ.
ಚೀನಾ ಮೂಲದ ಸಿನೋವ್ಯಾಕ್ ಹಾಗೂ ಆಸ್ಟ್ರಾಜೆನೆಕಾ ಲಸಿಕೆಯನ್ನು ಸಂಯೋಜಿಸಿ ಕೊಡಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 12 ವಾರಗಳ ಬದಲು ಆರು ವಾರಗಳ ಅಂತರದಲ್ಲೇ ಈ ಬೂಸ್ಟರ್ ಡೋಸ್ ನೀಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

ಸಿನೋವ್ಯಾಕ್, ಆಸ್ಟ್ರಾಜೆನೆಕಾ ಲಸಿಕೆಯ ಎರಡು ಡೋಸ್ಗಳ ಮಿಶ್ರಣ ಮಾಡಿ ಲಸಿಕೆ ನೀಡಲಾಗುವುದು. ಕೊರೊನಾ ಸೋಂಕು ವೇಗವಾಗಿ ವ್ಯಾಪಿಸುತ್ತಿರುವ ಈ ಹೊತ್ತಿನಲ್ಲಿ ಬೂಸ್ಟರ್ ಲಸಿಕೆ ನೀಡಲು 12 ವಾರಗಳವರೆಗೆ ಕಾಯುವ ಪರಿಸ್ಥಿತಿ ಸದ್ಯಕ್ಕಿಲ್ಲ. ಭವಿಷ್ಯದಲ್ಲಿ, ಕೊರೊನಾ ಪರಿಸ್ಥಿತಿ ನಿಯಂತ್ರಣಕ್ಕೆ ಉತ್ತಮ ಆಯ್ಕೆ ಕುರಿತು ಯೋಜಿಸುತ್ತೇವೆ" ಎಂದು ಥಾಯ್ಲೆಂಡ್ನ ಮುಖ್ಯ ವೈರಾಣು ತಜ್ಞ ಯೋಂಗ್ ಪೂವೊರವಾನ್ ತಿಳಿಸಿದ್ದಾರೆ.
ಕೊರೊನಾ ಸೋಂಕಿನ ವಿರುದ್ಧ ಹೋರಾಡಲು ಒಬ್ಬರಿಗೆ ಎರಡು ಭಿನ್ನ ಕಂಪನಿಗಳ ಲಸಿಕೆಗಳ ಬಳಕೆಯನ್ನು "ಅಪಾಯಕಾರಿ ಪ್ರವೃತ್ತಿ" ಎಂದು ಸೋಮವಾರ ವಿಶ್ವ ಆರೋಗ್ಯ ಸಂಸ್ಥೆ ಘೋಷಿಸಿತ್ತು. "ಈ ಪ್ರಯೋಗದ ಯಾವುದೇ ಮಾಹಿತಿ ಲಭ್ಯವಿಲ್ಲದ ಕಾರಣ ಆರೋಗ್ಯದ ಮೇಲೆ ಇದರ ಪರಿಣಾಮದ ಬಗ್ಗೆಯೂ ಸೂಕ್ತ ಅರಿವಿಲ್ಲ. ಹೀಗಾಗಿ ಈ ಪ್ರಯೋಗವನ್ನು ಮಾಡದೇ ಇರುವುದು ಒಳಿತು" ಎಂದು ವಿಶ್ವ ಆರೋಗ್ಯ ಸಂಸ್ಥೆಯ ಸೌಮ್ಯಾ ಸ್ವಾಮಿನಾಥನ್ ಹೇಳಿದ್ದರು.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications