ಥಾಯ್ಲೆಂಡಿನ ಹುಲಿ ದೇಗುಲದಲ್ಲಿ 40 ಹುಲಿ ಮರಿಗಳ ಮೃತದೇಹ ಪತ್ತೆ
ಬ್ಯಾಂಕಾಕ್, ಜೂನ್ 01: ಕಾಂಚನ್ಬುರಿಯ ವಾತ್ ಪಾ ಲುಂಗ್ ತ ಬುವಾ ಹುಲಿ ದೇಗುಲದ ಫ್ರೀಜರ್ನಲ್ಲಿ ಬುಧವಾರ(ಜೂನ್ 01) 40 ಹುಲಿ ಮರಿಗಳ ಮೃತದೇಹ ಪತ್ತೆಯಾಗಿದ್ದು, ವಿವಾದಾತ್ಮಕ ದೇಗುಲ ಮುಚ್ಚುವ ಸಾಧ್ಯತೆ ಕಂಡು ಬಂದಿದೆ.
ಹುಲಿಗಳನ್ನು ಅಕ್ರಮ ಸಾಗಾಟ, ಅನೈತಿಕ ವ್ಯವಹಾರದ ಆರೋಪಗಳು ಈ ಹಿಂದೆ ಕೂಡಾ ಕೇಳಿ ಬಂದಿತ್ತು. ಆದರೆ, ಯಾವುದೇ ಬಲವಾದ ಸಾಕ್ಷಿ ಸಿಕ್ಕಿರಲಿಲ್ಲ. ಈಗ ದೇಗುಲದ ವಿರುದ್ಧ ಥಾಯ್ಲೆಂಡ್ ಸರ್ಕಾರ ಕ್ರಮ ತೆಗೆದುಕೊಂಡಿದೆ. [ಅರಣ್ಯದಲ್ಲಿ ಹಸಿವು ತಾಳಲಾರದೆ ಹುಲಿ ಸಾವು]

ಸದ್ಯಕ್ಕೆ 45 ಹುಲಿಗಳನ್ನು ರಕ್ಷಿಸಲಾಗಿದ್ದು, ದೇಗುಲಕ್ಕೆ ಬೀಗ ಮುದ್ರ ಹಾಕಲಾಗಿದೆ. ಬುಧವಾರ ಮತ್ತಷ್ಟು ಶೋಧ ಕಾರ್ಯ ನಡೆಸಿದಾಗ ದೇಗುಲದಲ್ಲಿದ್ದ ಫ್ರೀಜರ್ನಲ್ಲಿ 40 ಹುಲಿ ಮರಿಗಳ ಮೃತದೇಹ ಪತ್ತೆಯಾಗಿದೆ. 137 ಬೆಂಗಾಲ್ ಹುಲಿಗಳನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.

ನವಜಾತ ಹುಲಿ ಮರಿಗಳ ಮೃತದೇಹವನ್ನು ಸಂರಕ್ಷಿಸಿ ಇಡಲಾಗಿದೆ. ಇವುಗಳನ್ನು ಎಷ್ಟು ದಿನದಿಂದ ಸಂರಕ್ಷಿಸಿ ಇಡಲಾಗಿದೆ ಎಂಬುದ ಮಾಹಿತಿ ಇಲ್ಲ.
ಅನುಮತಿಯಿಲ್ಲದೆ ಹುಲಿ ಮರಿಗಳ ಮೃತದೇಹವನ್ನು ಸಂಗ್ರಹಸಿ, ಅಕ್ರಮ ಮಾರಾಟದ ಶಂಕೆ ವ್ಯಕ್ತವಾಗಿದ್ದು ತನಿಖೆ ನಡೆಸಲಾಗುತ್ತಿದೆ, ಆದರೆ, ಮೃತ ಹುಲಿ ಮರಿಗಳ ಅಂತ್ಯಕ್ರಿಯೆಯನ್ನು ನಡೆಸಲು ಸಾಧ್ಯವಾಗದ ಕಾರಣ ಮೃತಪಟ್ಟ ಹುಲಿ ಮರಿಗಳನ್ನು ಸಂರಕ್ಷಿಸಿ ಫ್ರೀಜರ್ಗಳಲ್ಲಿ ಸಂಗ್ರಹಿಸಿಡಲಾಗಿದೆ ಎಂದು ದೇಗುಲದ ಆಡಳಿತ ಮಂಡಳಿ ಹೇಳಿದೆ.
-
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ












Click it and Unblock the Notifications