ಕತಾರ್ನಲ್ಲಿ ಭಾರತೀಯ ನೌಕಾಪಡೆಯ 8 ಮಾಜಿ ಅಧಿಕಾರಿಗಳ ಬಂಧನ ಯಾಕೆ?
ನವದೆಹಲಿ, ನವೆಂಬರ್ 10: ಕತಾರ್ನ ರಾಜಧಾನಿ ದೋಹಾದಲ್ಲಿ 8 ಜನ ಮಾಜಿ ಭಾರತೀಯ ನೌಕಾಪಡೆ ಸಿಬ್ಬಂದಿಯನ್ನು ಏಕೆ ಬಂಧಿಸಲಾಗಿದೆ? ಈ ಬಗ್ಗೆ ಕತಾರ್ ಪ್ರಾಧಿಕಾರದಿಂದ ಇದುವರೆಗೆ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ ಕುಟುಂಬ ಸದಸ್ಯರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ಬಂಧಿತರಲ್ಲಿ ಒಬ್ಬರಾಗಿರುವ ಕಮಾಂಡರ್ (ನಿವೃತ್ತ) ಪೂರ್ಣೇಂದು ತಿವಾರಿ ಅವರು 2019ರಲ್ಲಿ 'ಪ್ರವಾಸಿ ಭಾರತಿ ಸಮ್ಮಾನ್' ಪ್ರಶಸ್ತಿ ಪಡೆದಿದ್ದಾರೆ. ಕಂಪನಿಯ ವೆಬ್ಸೈಟ್ನಲ್ಲಿ ಲಭ್ಯವಿರುವ ಮಾಹಿತಿಯ ಪ್ರಕಾರ, ಪೂರ್ಣೇಂದು ತಿವಾರಿ ಅವರು ಭಾರತೀಯ ನೌಕಾಪಡೆಯಲ್ಲಿ ಅನೇಕ ದೊಡ್ಡ ಹಡಗುಗಳಿಗೆ ಕಮಾಂಡರ್ ಆಗಿದ್ದರು.
ತಿವಾರಿ ಬಂಧನದ ಕುರಿತು ಪ್ರತಿಕ್ರಿಯಿಸಿರುವ ಸಹೋದರಿ ಡಾ. ಮಿತು ಭಾರ್ಗವ್, ನಮಗೆ ತುಂಬಾ ಚಿಂತೆಯಾಗಿದೆ ಎಂದು ಹೇಳಿಕೊಂಡಿದ್ದಾರೆ.
'ನನ್ನ ಸಹೋದರನನ್ನು ಯಾವ ಆರೋಪದ ಅಡಿಯಲ್ಲಿ ಬಂಧಿಸಲಾಗಿದೆ ಎಂಬ ಉತ್ತರವನ್ನು ಪಡೆಯಲು ನಮಗೆ ಸಾಧ್ಯವಾಗುತ್ತಿಲ್ಲ. ಮಾಜಿ ಅಧಿಕಾರಿಯನ್ನು ಬಂಧಿಸಿ 70 ದಿನಗಳು ಕಳೆದಿವೆ. ಅವರನ್ನು ಆದಷ್ಟು ಬೇಗ ಬಿಡುಗಡೆ ಮಾಡುವಂತೆ ಭಾರತ ಸರ್ಕಾರ ಒತ್ತಾಯಿಸಬೇಕು' ಎಂದು ಕೇಂದ್ರ ರಕ್ಷಣಾ ಸಚಿವಾಲಯಕ್ಕೆ ಮನವಿ ಮಾಡಿದ್ದಾರೆ.

ವಿದೇಶಾಂಗ ಸಚಿವಾಲಯದಿಂದ ಕರೆತರುವ ಯತ್ನ
ಕತಾರ್ನಲ್ಲಿ ಬಂಧಿತರಾದ ಮಾಜಿ ನೌಕಾ ಪಡೆಯ ಅಧಿಕಾರಿಗಳನ್ನು ಭಾರತಕ್ಕೆ ಮರಳಿ ಕರೆತರುವ ಭರವಸೆಯನ್ನು ದೋಹಾದಲ್ಲಿರುವ ಭಾರತೀಯ ರಾಯಭಾರ ಕಚೇರಿ ನೀಡಿದೆ. ಕತಾರ್ ಸರ್ಕಾರದಿಂದ ಕಾನ್ಸುಲರ್ ಪ್ರವೇಶವನ್ನು ಪಡೆದ ನಂತರ ಅವರ ಸ್ಥಿತಿಯನ್ನು ನಾವು ತಿಳಿದುಕೊಳ್ಳಬೇಕಾಗಿದೆ. ಆದರೆ ಯಾವ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂಬುದರ ಕುರಿತು ಸರ್ಕಾರವು ಇನ್ನೂ ಮಾಹಿತಿಯನ್ನು ಪಡೆಯಬೇಕಾಗಿದೆ ಎಂದು ವಿದೇಶಾಂಗ ಸಚಿವಾಲಯ ಹೇಳಿದೆ.

ಕತಾರ್ನ ದೋಹಾದಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ
ಮಾಧ್ಯಮ ವರದಿಗಳ ಪ್ರಕಾರ, ನಿವೃತ್ತಿಯ ನಂತರ ಈ ಎಲ್ಲಾ ನೌಕಾಪಡೆಯ ಮಾಜಿ ಸಿಬ್ಬಂದಿ ಕತಾರ್ನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಕಂಪನಿಯು ಕತಾರಿ ಎಮಿರಿ ನೌಕಾಪಡೆಗೆ ತರಬೇತಿ ಮತ್ತು ಇತರ ಸೇವೆಗಳನ್ನು ಒದಗಿಸುತ್ತದೆ. ಕಂಪನಿಯ ಹೆಸರು ಡಹ್ರಾ ಗ್ಲೋಬಲ್ ಟೆಕ್ನಾಲಜಿ ಮತ್ತು ಕನ್ಸಲ್ಟೆನ್ಸಿ ಸರ್ವಿಸಸ್. ಕಂಪನಿಯು ತನ್ನನ್ನು ಕತಾರ್ನ ರಕ್ಷಣೆ, ಭದ್ರತೆ ಮತ್ತು ಇತರ ಸರ್ಕಾರಿ ಏಜೆನ್ಸಿಗಳ ಸ್ಥಳೀಯ ಪಾಲುದಾರ ಎಂದು ವಿವರಿಸುತ್ತದೆ.

ಮಾಜಿ ಅಧಿಕಾರಿಗಳ ಮೇಲೆ ಆರೋಪ
ಎಲ್ಲಾ 8 ಜನ ಮಾಜಿ ನೌಕಾಪಡೆಯ ಸಿಬ್ಬಂದಿಗಳು ಕತಾರ್ನ ಸಶಸ್ತ್ರ ಪಡೆಗಳು ಮತ್ತು ಭದ್ರತಾ ಏಜೆನ್ಸಿಗಳಿಗೆ ತರಬೇತಿ ಮತ್ತು ಇತರ ಸೇವೆಗಳನ್ನು ಒದಗಿಸುವ ಒಮಾನ್ ಏರ್ ಫೋರ್ಸ್ ಅಧಿಕಾರಿಯ ಒಡೆತನದ ಖಾಸಗಿ ಸಂಸ್ಥೆಯಾದ ದಾಹ್ರಾ ಗ್ಲೋಬಲ್ ಟೆಕ್ನಾಲಜೀಸ್ ಮತ್ತು ಕನ್ಸಲ್ಟೆನ್ಸಿ ಸರ್ವಿಸಸ್ಗಾಗಿ ಕೆಲಸ ಮಾಡುತ್ತಿದ್ದರು. 70 ದಿನಗಳಿಗಿಂತ ಹೆಚ್ಚು ಕಾಲ ಬಂಧನದಲ್ಲಿರುವ ಮಾಜಿ ಭಾರತೀಯ ನೌಕಾಪಡೆ ಸಿಬ್ಬಂದಿಯ ವಿರುದ್ಧ ಆರೋಪಗಳನ್ನು ದಾಖಲಿಸಲಾಗಿದೆ ಎಂದು ಕತಾರ್ ಅಧಿಕಾರಿಗಳು ಔಪಚಾರಿಕವಾಗಿ ಭಾರತದ ಕಡೆಯವರು ತಿಳಿಸಿಲ್ಲ ಎಂದು ತಿಳಿದುಬಂದಿದೆ.
ಭಾರತೀಯ ಅಧಿಕಾರಿಗಳಿಗೆ ಇಲ್ಲಿಯವರೆಗೆ ಎರಡು ಸಂದರ್ಭಗಳಲ್ಲಿ ಬಂಧಿತ ನೌಕಾಪಡೆಯ ಮಾಜಿ ಅಧಿಕಾರಿಗಳಿಗೆ ಕಾನ್ಸುಲರ್ ಪ್ರವೇಶವನ್ನು ನೀಡಲಾಗಿದೆ. ಅಕ್ಟೋಬರ್ ಆರಂಭದಲ್ಲಿ ಮತ್ತು ಈ ನವೆಂಬರ್ ತಿಂಗಳು. ಕ್ಯಾಪ್ಟನ್ ಅಥವಾ ಕಮಾಂಡರ್ ಶ್ರೇಣಿಯಲ್ಲಿ ನಿವೃತ್ತರಾದ ನೌಕಾ ಅಧಿಕಾರಿಗಳು ಸೇರಿದಂತೆ ಪುರುಷರು ತಮ್ಮ ಕುಟುಂಬಗಳೊಂದಿಗೆ ಮಾತನಾಡಲು ರಕ್ಷಣಾ ಇಲಾಖೆಗಳು ಅವಕಾಶ ನೀಡುತ್ತವೆ ಎಂದು ವರದಿಯಾಗಿದೆ.

57 ದಿನಗಳವರೆಗೆ ಅಕ್ರಮ ಬಂಧನದಲ್ಲಿದ್ದಾರೆ
ಕತಾರ್ ಪೊಲೀಸರು ಬಂಧಿಸಿದವರಲ್ಲಿ ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಅಧಿಕಾರಿಯೂ ಸೇರಿದ್ದಾರೆ. ಅವರ ಹೆಸರು ಕಮಾಂಡರ್ ಪೂರ್ಣಂದು ತಿವಾರಿ. ಎಲ್ಲಾ ಅಧಿಕಾರಿಗಳು ಕತಾರಿ ಎಮಿರಿ ನೌಕಾಪಡೆಗೆ ತರಬೇತಿ ನೀಡುವ ಮತ್ತು ಇತರ ಸೇವೆಗಳನ್ನು ಒದಗಿಸುವ ಕಂಪನಿಯಲ್ಲಿ ಕೆಲಸ ಮಾಡಿದ್ದರು.
ಟ್ವಿಟ್ಟರ್ನಲ್ಲಿ ತಿವಾರಿ ಅವರ ಸಹೋದರಿ ಡಾ. ಮಿತು ಭಾರ್ಗವ ಅವರ ಬಗ್ಗೆ ಬರೆದಾಗ, ಅಧಿಕಾರಿಗಳನ್ನು ಬಂಧಿಸಿರುವ ವಿಷಯ ಬೆಂಕಿ ಹೊತ್ತಿಕೊಂಡಿದೆ "ಎಲ್ಲರೂ 57 ದಿನಗಳವರೆಗೆ ದೋಹಾದಲ್ಲಿ ಅಕ್ರಮ ಬಂಧನದಲ್ಲಿದ್ದಾರೆ" ಎಂದು ಡಾ. ಮಿಟು ಭಾರ್ಗವ ಬರೆದಿದ್ದಾರೆ. ಈ ಟ್ವೀಟ್ನಲ್ಲಿ ಪ್ರಧಾನಿ ಮೋದಿ, ವಿದೇಶಾಂಗ ಸಚಿವ ಎಸ್ ಜೈಶಂಕರ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಪೆಟ್ರೋಲಿಯಂ
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications