ಈ ಕೂಡಲೇ ನಗುವುದನ್ನು ನಿಲ್ಲಿಸುವಂತೆ ಆಗ್ರಹ
ಟರ್ಕಿ, ಆ.4:ನಗುವುದು, ಅಳುವುದು ಮಾನವನಿಗೆ ಅತ್ಯಂತ ಸಹಜವಾದ ಕ್ರಿಯೆ. ಅದರಲ್ಲೂ ಮಹಿಳೆಯರಿಗೆ ಇದನ್ನು ಹೇಳಿಕೊಡಬೇಕಾಗಿಯೇ ಇಲ್ಲ. ನಗುವು ಮಹಿಳೆಯರ ಅಂದವನ್ನು ಮಾತ್ರವಲ್ಲ ಆರೋಗ್ಯವನ್ನು ಕೂಡ ಹೆಚ್ಚಿಸುತ್ತದೆ. ಸುತ್ತಲೂ ಕಿಲಕಿಲ ನಗುವಿದ್ದಕ್ಕೆ ಮುದುಡಿಕೊಂಡ ಮನವು ಕೂಡ ಅರಳುತ್ತದೆ. ಅಂಥದ್ದರಲ್ಲಿ 'ಮಹಿಳೆಯರೇ, ನಕ್ಕೀರಿ ಜೊಕೆ!' ಅಂತ ಯಾರಾದರೂ ಫರ್ಮಾನು ಹೊರಡಿಸಿದರೆ?
ಈ ರೀತಿಯ ವಿವಾದಾತ್ಮಕ ಹೇಳಿಕೆಯನ್ನು ಟರ್ಕಿಯ ಉಪಪ್ರಧಾನಿಯೊಬ್ಬರು ನೀಡಿದ್ದಾರೆ. ಮಹಿಳೆಯರು ಸಾರ್ವಜನಿಕ ಸ್ಥಳದಲ್ಲಿ ನಗುವುದರಿಂದಲೇ ಅವರ ಮೇಲೆ ಹೆಚ್ಚಿನ ದೌರ್ಜನ್ಯವಾಗುತ್ತಿದ್ದು, ಮಹಿಳೆಯರು ಕೂಡಲೇ ಸಾರ್ವಜನಿಕ ಸ್ಥಳದಲ್ಲಿ ನಗುವುದನ್ನು ನಿಲ್ಲಿಸಬೇಕೆಂದು ಅವರು ಹೇಳಿದ್ದಾರೆ.
ನೈತಿಕ ಭ್ರಷ್ಟಾಚಾರ ವಿಷಯಕ್ಕೆ ಸಂಬಂಧಿಸಿ ಉಪಪ್ರಧಾನಿ ಬುಲೆಂಟ್ ಎರ್ನಿಕ್ ಭಾಷಣ ಮಾಡುತ್ತಾ,"ಮಹಿಳೆಯ ವರ್ತನೆಯೇ ಅವಳ ಮೇಲೆ ಕೃತ್ಯ ನಡೆಸಲು ಪ್ರಚೋದನೆ ನೀಡುತ್ತದೆ. ಈ ಪ್ರಚೋದನೆ ತಡೆಯಲು ಅವಳಿಂದ ಸಾಧ್ಯವಿದೆ. ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯರು ನಗುವುದನ್ನು ನಿಲ್ಲಿಸಿದರೆ, ಅವಳ ಮೇಲೆ ಆಗುವ ಅಪಾಯವನ್ನು ತಡೆಯಬಹುದು" ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.[ಬೀದಿ ಕಾಮಣ್ಣರಿಗೆ ಬಿಸಿ ಮುಟ್ಟಿಸಿದ ಪೊಲೀಸರು]

ಉಪಪ್ರಧಾನಿ ಹೇಳಿಕೆ ನೀಡಿದ್ದೆ ತಡ ಟರ್ಕಿ ಮಹಿಳೆಯರು ಆಕ್ರೋಶಗೊಂಡಿದ್ದು ಉಪಪ್ರಧಾನಿ ಹೇಳಿಕೆಯನ್ನು ಖಂಡಿಸಿ ಸಾರ್ವಜನಿಕ ಸ್ಥಳಗಳಲ್ಲಿ ಗುಂಪುಗುಂಪಾಗಿ ನಗಲು ಆರಂಭಿಸಿದ್ದಾರೆ. ನಗೆಯ ಜೊತೆಗೆ ತಾವು ನಗಾಡಿದ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲು ಆರಂಭಿಸಿದ್ದಾರೆ.
ತುರ್ಕಿಶ್ ಭಾಷೆಯಲ್ಲಿ "kahkaha" ಅಂದರೆ ನಗು ಎಂದರ್ಥ. ಈ "kahkaha" ಪದವನ್ನು ಹ್ಯಾಶ್ ಟ್ಯಾಗ್ ಆಗಿ ಬಳಸಿ ತಮ್ಮ ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿದ್ದಾರೆ.
ಮಹಿಳೆಯ ರಕ್ಷಣೆಗೆ ಸಂಬಂಧಿಸಿದಂತೆ ಸರಿಯಾದ ಕಾನೂನು ರೂಪಿಸಲು ಆಗದ ಸರ್ಕಾರ, ಈ ರೀತಿಯ ಹೇಳಿಕೆ ನೀಡಿ ಮಹಿಳೆಯರಿಗೆ ಅವಮಾನ ಮಾಡುತ್ತಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟರ್ಕಿ ಮಹಿಳೆಯರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
Turkish women should be able to laugh if they want to! #direnkahkaha #kahkaha pic.twitter.com/TrTx8zKXdW
— Jade Worsley (@JadeWorsley) July 31, 2014 -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications