ಮೆಲ್ಬೋರ್ನ್ ನಲ್ಲಿ ಮೂವರಿಗೆ ಚೂರಿ ಇರಿತ, ಗಾಯಗೊಂಡಿದ್ದ ಓರ್ವನ ಸಾವು
ಮೆಲ್ಬೋರ್ನ್, ನವೆಂಬರ್ 09 : ಅಜಾನುಬಾಹು ವ್ಯಕ್ತಿಯಿಂದ ಮೆಲ್ಬೋರ್ನ್ ನ ಸಿಟಿ ಸೆಂಟರ್ ನಲ್ಲಿ ಚಾಕುವಿನಿಂದ ಇರಿತಕ್ಕೊಳಗಾಗಿದ್ದ ಮೂವರಲ್ಲಿ ಒಬ್ಬರು ಸಾವಿಗೀಡಾಗಿದ್ದಾರೆ. ಪೊಲೀಸರ ಮೇಲೆಯೂ ದಾಳಿ ಮಾಡಲು ಯತ್ನಿಸಿದಾಗ ಆತನಿಗೆ ಗುಂಡು ಹಾರಿಸಲಾಗಿದೆ.
ಈ ಘಟನೆ ಶುಕ್ರವಾರ ಸ್ಥಳೀಯ ಕಾಲಮಾನ 4.20ರ ಸುಮಾರಿಗೆ ನಡೆದಿದ್ದು, ಮೂವರಿಗೆ ತೀವ್ರವಾದ ಗಾಯಗಳಾಗಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಒಬ್ಬರಿಗೆ ಕುತ್ತಿಗೆಯಲ್ಲಿ ಗಂಭೀರ ಗಾಯವಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಎರಡನೇಯವರಿಗೆ ತಲೆಗೆ ಗಾಯವಾಗಿದ್ದು, ಅವರ ಆರೋಗ್ಯ ಸ್ಥಿತಿ ತಿಳಿದುಬಂದಿಲ್ಲ. ಮೂರನೇಯವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ ಸಾವಿಗೀಡಾದವರು ಯಾರು ಎಂದು ಇನ್ನೂ ತಿಳಿದುಬಂದಿಲ್ಲ.
ತನಿಖೆ ಆರಂಭಿಕ ಹಂತದಲ್ಲಿರುವುದರಿಂದ ಈ ಘಟನೆಯ ಹಿಂದೆ ಭಯೋತ್ಪಾದಕರ ಕೈವಾಡ ಇದೆ ಎಂದು ಈಗಲೇ ಹೇಳಲು ಸಾಧ್ಯವಿಲ್ಲ ಎಂದು ವಿಕ್ಟೋರಿಯಾ ಪೊಲೀಸರು ತಿಳಿಸಿದ್ದಾರೆ. ಚಾಕುವಿನಿಂದ ಆತ ಸಾರ್ವಜನಿಕರನ್ನು ಇರಿಯಲು ಕಾರಣವೇನೆಂದು ಕೂಡ ಇನ್ನೂ ತಿಳಿದುಬಂದಿಲ್ಲ.

ನಂತರ ಆ ವ್ಯಕ್ತಿ ಪೊಲೀಸರೊಬ್ಬರ ಮೇಲೆ ದಾಳಿಗೆ ಯತ್ನಿಸಿದಾಗ ಅವರಿಗೆ ಗುಂಡಿಕ್ಕಲಾಗಿದೆ ಎಂದು ವಿಕ್ಟೋರಿಯಾ ಪೊಲೀಸರು ತಿಳಿಸಿದ್ದಾರೆ. ಇದಕ್ಕೂ ಮುನ್ನ ಆತ ತನ್ನ ಕಾರಿಗೆ ಬೆಂಕಿ ಹಚ್ಚಿದ್ದಾನೆ. ಆತನ ಸ್ಥಿತಿ ಕೂಡ ಚಿಂತಾಜನಕವಾಗಿದೆ ಎಂದು ವಿಕ್ಟೋರಿಯಾ ಪೊಲೀಸರು ವಿವರ ನೀಡಿದ್ದಾರೆ.
On Bourke St. Roads blocked. pic.twitter.com/wimeJLNXWy
— mike yang (@fayfayang) November 9, 2018
ಮಧ್ಯಾಹ್ನದ ಹೊತ್ತಿನಲ್ಲಿ ಕೆಲಸ ಮುಗಿಸಿ ಜನರು ಹೊರಬರುತ್ತಿರುವಾಗ ಈ ಘಟನೆ ನಡೆದಿದೆ. ಮೊದಲಿಗೆ ಜೋರಾದ ಶಬ್ದ ಕೇಳಿಬಂದಿದೆ, ನಂತರ ಕಾರು ಹೊತ್ತಿ ಉರಿಯುತ್ತಿರುವುದನ್ನು ಗಮನಿಸಿದ್ದಾರೆ. ಇದೇ ಸಮಯದಲ್ಲಿ ಆತ ಕೆಲ ಜನರ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದಾನೆ. ಈ ಪ್ರದೇಶಕ್ಕೆ ಬರದಿರುವಂತೆ ಜನರಿಗೆ ಪೊಲೀಸರು ತಾಕೀತು ಮಾಡಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications