ಭಾರತದ ಮೂವರು RAW ಅಧಿಕಾರಿಗಳ ಬಂಧನ:ಪಾಕ್ ಹೇಳಿಕೆ
ಕೆಲ ದಿನಗಳ ಹಿಂದೆಯೇ ಈ ಅಧಿಕಾರಿಗಳನ್ನು ಬಂಧಿಸಲಾಗಿದ್ದು, ಈ ಬಗ್ಗೆ ಈಗ ಅಧಿಕೃತವಾಗಿ ಪ್ರಕಟಿಸುತ್ತಿರುವುದಾಗಿ ಪಾಕಿಸ್ತಾನ ಸರ್ಕಾರ ಹೇಳಿರುವುದು ಭಾರತಕ್ಕೆ ಹೊಸ ತಲೆನೋವಾಗಿ ಪರಿಣಮಿಸಿದೆ.
ಇಸ್ಲಾಮಾಬಾದ್, ಏಪ್ರಿಲ್ 15: ಭಾರತದ ಗುಪ್ತಚರ ದಳಕ್ಕೆ (RAW)ಸೇರಿದ ಮೂವರು ಅಧಿಕಾರಿಗಳನ್ನು ಭಾರತ-ಪಾಕಿಸ್ತಾನ ಗಡಿ ಪ್ರದೇಶದಲ್ಲಿ ಬಂಧಿಸಿರುವುದಾಗಿ ಪಾಕಿಸ್ತಾನ ಸರ್ಕಾರ ಹೇಳಿದೆ. ಕೆಲ ದಿನಗಳ ಹಿಂದೆಯೇ ಈ ಅಧಿಕಾರಿಗಳನ್ನು ಬಂಧಿಸಲಾಗಿದ್ದು, ಈ ಬಗ್ಗೆ ಈಗ ಅಧಿಕೃತವಾಗಿ ಪ್ರಕಟಿಸುತ್ತಿರುವುದಾಗಿ ಅದು ತಿಳಿಸಿದೆ.
ಈಗಾಗಲೇ ಪಾಕಿಸ್ತಾನದಲ್ಲಿ ಬಂಧಿಯಾಗಿ ಮರಣ ದಂಡನೆಗೆ ಗುರಿಯಾಗಿರುವ ಕುಲಭೂಷಣ್ ಜಾಧವ್ ಅವರನ್ನು ಮತ್ತೆ ಭಾರತಕ್ಕೆ ಸುರಕ್ಷಿತವಾಗಿ ಕರೆತರಲು ಹರಸಾಹಸ ಮಾಡುತ್ತಿರುವ ಭಾರತಕ್ಕೆ ಪಾಕಿಸ್ತಾನ ಈಗ ಮತ್ತೊಂದು ಶಾಕ್ ನೀಡಿದೆ.[ಜಾಧವ್ ಪ್ರಕರಣ: ಭಾರತದ 14ನೇ ಮನವಿಯನ್ನೂ ತಳ್ಳಿಹಾಕಿದ ಪಾಕ್]

ಈ ಬಗ್ಗೆ ರಾ (RAW) ಇಲಾಖೆಯನ್ನು ಸಂಪರ್ಕಿಸಲಾಗಿದ್ದು, ಅಧಿಕಾರಿಗಳ ಬಂಧನದ ಬಗ್ಗೆ ಖಚಿತ ಮಾಹಿತಿ ಇಲ್ಲ ಎಂದು ಅಲ್ಲಿನ ಅಧಿಕಾರಿಗಳು ಹೇಳಿರುವುದಾಗಿ ಕೆಲ ಮಾಧ್ಯಮಗಳು ವರದಿ ಮಾಡಿವೆ.[ಪಾಕ್ ಕಪಿಮುಷ್ಠಿಯಿಂದ ಪಾರಾದ ಆ ಮೂವರು ಗೂಢಾಚಾರರ ಗೋಳಿನ ಕಥೆ!]
ಏತನ್ಮಧ್ಯೆ, ಪಾಕಿಸ್ತಾನವು ನೇಪಾಳಕ್ಕೆ ಸರ್ಕಾರಿ ಕೆಲಸದ ನಿಮಿತ್ತ ತೆರಳಿದ್ದ ಪಾಕಿಸ್ತಾನದ ಐಎಸ್ಐ ಅಧಿಕಾರಿಯಾದ ಕರ್ನಲ್ ಜಾಹಿರ್ ಅವರನ್ನು ಭಾರತದ ಅಧಿಕಾರಿಗಳು ಬಂಧಿಸಿದ್ದಾರೆಂದು ಆರೋಪಿಸಿದೆ.
''ಅಧಿಕಾರಿ ಕಾಣೆಯಾಗಿರುವುದು ಪಾಕಿಸ್ತಾನ ಸರ್ಕಾರದ ಗಮನಕ್ಕೆ ಬಂದಿದ್ದು, ಭಾರತೀಯ ಅಧಿಕಾರಿಗಳೇ ಆತನನ್ನು ಬಂಧಿಸಿರುವುದೂ ತಿಳಿದುಬಂದಿದೆ. ಕರ್ನಲ್ ಜಾಹಿರ್ ಅವರ ಕುಟುಂಬವೂ ಭಾರತ ಸರ್ಕಾರದತ್ತಲೇ ಬೊಟ್ಟು ಮಾಡಿ ತೋರಿಸಿದೆ'' ಎಂದು ಹೇಳಿದೆ.
-
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ -
SWR: ಬೆಂಗಳೂರಿನಿಂದ ಇಲ್ಲಿಗೆ ಮಾ.10ರಿಂದ ವಿಶೇಷ ರೈಲುಗಳ ಸಂಚಾರ, ವೇಳಾಪಟ್ಟಿ ಹೀಗಿದೆ












Click it and Unblock the Notifications