Breaking news: ಟಿಬೇಟ್ ಏರ್ಲೈನ್ಸ್ ವಿಮಾನಕ್ಕೆ ಬೆಂಕಿ
ಲ್ಹಾಸಾ, ಮೇ 12: ಟಿಬೇಟ್ ಏರ್ಲೈನ್ಸ್ ವಿಮಾನವೊಂದಕ್ಕೆ ಬೆಂಕಿ ತಗುಲಿದ ಘಟನೆ ನಡೆದಿದೆ. ಗುರುವಾರ ಬೆಳಗ್ಗೆ ಚೀನಾದ ಚಾಂಗ್ಕಿಂಗ್ ವಿಮಾನ ನಿಲ್ದಾಣದ ರನ್ ವೇನಲ್ಲಿ ಸಾಗುತ್ತಿದ್ದ ವಿಮಾನದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ.
ರನ್ವೇಯಿಂದ ಹೊರಟ ವಿಮಾನದಲ್ಲಿ ಬೆಂಕಿ ಹೊತ್ತಿಕೊಂಡಿದೆ ಎಂದು ಸರ್ಕಾರಿ ಮಾಧ್ಯಮ ಸಂಸ್ಥೆಗಳು ವರದಿ ಮಾಡಿದೆ. ವಿಮಾನದಲ್ಲಿದ ಪ್ರಯಾಣಿಕರಲ್ಲಿ ಕೆಲವು ಗಾಯಗಳಾಗಿವೆ.
"ಚಾಂಗ್ಕಿಂಗ್ ಜಿಯಾಂಗ್ಬೀ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಾಂಗ್ಕಿಂಗ್ನಿಂದ ಲಾಸಾಗೆ ವಿಮಾನವು ರನ್ವೇಯನ್ನು ಅತಿಕ್ರಮಿಸಿತು, ಇದರಿಂದಾಗಿ ವಿಮಾನವು ಬೆಂಕಿಗೆ ಆಹುತಿಯಾಗಿದೆ" ಎಂದು ಸರ್ಕಾರ ಪ್ರಸಾರಕ ಸಿಸಿಟಿವಿ ಹೇಳಿದೆ.

ಸ್ಕಿಡ್ ಆಗಿ ಬೆಂಕಿ ಹೊತ್ತಿಕೊಂಡಿದೆ.
ಗುರುವಾರ ಚೀನಾದ ಚಾಂಗ್ಕಿಂಗ್ ವಿಮಾನ ನಿಲ್ದಾಣದಲ್ಲಿ ಟಿಬೆಟ್ ಏರ್ಲೈನ್ಸ್ನ ವಿಮಾನವೊಂದು ರನ್ವೇಯಲ್ಲಿ ಸ್ಕಿಡ್ ಆಗಿ ಬೆಂಕಿ ಹೊತ್ತಿಕೊಂಡಿದೆ. ಏರ್ಲೈನ್ಸ್ನ ಒಂಬತ್ತು ಸಿಬ್ಬಂದಿ ಮತ್ತು ವಿಮಾನದಲ್ಲಿದ್ದ 113 ಪ್ರಯಾಣಿಕರನ್ನು ಈಗ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ಟಿಬೆಟ್ ಏರ್ಲೈನ್ಸ್ ಹೇಳಿಕೆಯಲ್ಲಿ ಘಟನೆಯನ್ನು ದೃಢಪಡಿಸಿದೆ.
Tibet Airlines TV9833/A319/B-6425 from Chongqing to Nyingchi was on fire during take-off this morning, details still not known. CKG/ZUCK closed for now. pic.twitter.com/CPL47fmfVk
— FATIII Aviation (@FATIIIAviation) May 12, 2022
ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾದ ಘಟನೆಯ ವಿಡಿಯೊ ತುಣುಕನ್ನು ಟಿಬೆಟ್ ಏರ್ಲೈನ್ಸ್ ವಿಮಾನ ನಿಲ್ದಾಣದಲ್ಲಿ ಬೆಂಕಿ ಮತ್ತು ಕಪ್ಪು ಹೊಗೆ ಹೊರಹೊಮ್ಮುವುದನ್ನು ತೋರಿಸಿದೆ. ಉರಿಯುತ್ತಿರುವ ವಿಮಾನದಿಂದ ಪ್ರಯಾಣಿಕರನ್ನು ಹೊರತೆಗೆಯುತ್ತಿದ್ದಂತೆ ಜನರು ಓಡಿಹೋಗುತ್ತಿರುವುದು ವಿಡಿಯೋದಲ್ಲಿ ಕಂಡುಬಂದಿದೆ. ಪ್ರಯಾಣಿಕರಲ್ಲಿ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏರ್ಬಸ್ A319-115 ಜೆಟ್ನಲ್ಲಿ 113 ಪ್ರಯಾಣಿಕರು ಮತ್ತು ಒಂಬತ್ತು ವಿಮಾನ ಸಿಬ್ಬಂದಿ ಇದ್ದರು, ಅವರೆಲ್ಲರನ್ನೂ ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು ಮತ್ತು ಕೆಲವರಿಗೆ ಸಣ್ಣಪುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಏರ್ಲೈನ್ ಹೇಳಿಕೆಯಲ್ಲಿ ತಿಳಿಸಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications