'ರಾಜಕೀಯ ಪ್ರೇರಿತ ಪ್ರಕರಣ' ಎಂಬ ಗುರಾಣಿ ಬಳಸಲು ಮಲ್ಯ ಸಿದ್ಧತೆ!
ವಿಜಯ್ ಮಲ್ಯ ಹಸ್ತಾಂತರ ಆಗಬೇಕಾದರೆ ಭಾರತವು ಆರ್ಥಿಕ ಅಪರಾಧಗಳು ಸಾಬೀತಾದರಷ್ಟೇ ಸಾಲದು. ಈ ಪ್ರಕರಣವು ರಾಜಕೀಯ ಪ್ರೇರಿತವಲ್ಲ ಎಂದು ಕೂಡ ರುಜುವಾತು ಪಡಿಸಬೇಕಾಗುತ್ತದೆ. ಆದರೆ ಅದೇ ಅಂಶವನ್ನು ಮಲ್ಯ ಪರ ವಕೀಲರು ಗುರಾಣಿಯಾಗಿ ಬಳಸುವ ಸಾಧ್ಯತೆ ಇದೆ
ನವದೆಹಲಿ, ಏಪ್ರಿಲ್ 20: ಯಾವುದೇ ವ್ಯಕ್ತಿಯ ಹಸ್ತಾಂತರ ಪ್ರಕ್ರಿಯೆಯಲ್ಲಿ ಅದು ರಾಜಕೀಯ ಪ್ರೇರಿತವಲ್ಲ ಎಂಬ ಮುಖ್ಯ ಅಂಶ ಸಾಬೀತಾಗಬೇಕು. ವಿಜಯ್ ಮಲ್ಯ ಹಸ್ತಾಂತರಕ್ಕೆ ಸಂಬಂಧಿಸಿದಂತೆ ಯುಕೆ ಕೋರ್ಟ್ ಕಲಾಪಗಳು ಮೇ 17ರಂದು ಆರಂಭವಾಗುತ್ತವೆ. ಮಲ್ಯ ಪರ ವಕೀಲರು ತನ್ನ ಕಕ್ಷೀದಾರ ರಾಜಕೀಯ ಉದ್ದೇಶದ ಬಲಿಪಶು ಎಂದು ವಾದ ಹೂಡುವ ಸಾಧ್ಯತೆಯಿದೆ.
ಭಾರತದ ಪರವಾಗಿ ವಾದ ಮಂಡಿಸುವಾಗ ವಿಜಯ್ ಮಲ್ಯ ವಿರುದ್ಧ ಇರುವ ಆರೋಪಗಳನ್ನು ಸಾಬೀತು ಮಾಡಿದರಷ್ಟೇ ಸಾಲದು. ಈ ಪ್ರಕರಣ ರಾಜಕೀಯ ಪ್ರೇರಿತವಲ್ಲ ಅಂತಲೂ ರುಜುವಾತು ಮಾಡಬೇಕು. ಇನ್ನೊಂದು ಕಡೆ ಮಲ್ಯ ಪರ ವಕೀಲರು ಇಡೀ ಪ್ರಕರಣವು ರಾಜಕೀಯ ಪ್ರೇರಿತವಾದದ್ದು ಎಂದು ಬಿಂಬಿಸಿಯೇ ಬಿಂಬಿಸುತ್ತಾರೆ.[ಜಾಮೀನು ಸಿಕ್ಕಿರಬಹುದು, ಆದ್ರೆ ಮಲ್ಯ ಪರಿಸ್ಥಿತಿ ದೇವ್ರಿಗೇ ಪ್ರೀತಿ!]

ಒಂದು ವೇಳೆ ವಿಜಯ್ ಮಲ್ಯ ಹಸ್ತಾಂತರಕ್ಕೆ ಒಪ್ಪಿದ್ದೇ ಆದರೆ ಅದು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಭಾರತದಲ್ಲಿ ಮಲ್ಯ ವಿಚಾರಣೆ ಎದುರಿಸಿದರೆ ಅವರಿಗೆ ನ್ಯಾಯ ಸಿಗುವುದಿಲ್ಲ. ಏಕೆಂದರೆ ಭಾರತದ ನ್ಯಾಯಾಂಗ ವ್ಯವಸ್ಥೆ ಮೇಲೆ ವಿಶ್ವಾಸವಿಲ್ಲ. ಈ ಪ್ರಕರಣವೇ ರಾಜಕೀಯ ಪ್ರೇರಿತ ಹಾಗೂ ಉದ್ದೇಶದಿಂದ ಕೂಡಿದೆ ಎಂದು ಮಲ್ಯ ಪರ ವಾದಿಸುವ ಕಾನೂನು ತಂಡ ಕೋರ್ಟ್ ಗೆ ಹೇಳುವ ಸಾಧ್ಯತೆಯಿದೆ.[ಮಲ್ಯ ಭಾರತಕ್ಕೆ ಬರಲು ಕನಿಷ್ಠ 10 ವರ್ಷವಾದರೂ ಬೇಕು!]
ಭಾರತವು ತುಂಬ ಪ್ರಬಲವಾದ ವಾದ ಮಂಡಿಸಬೇಕು. ಕಾನೂನು ಸಾಧ್ಯತೆ ಜತೆಗೆ ಎಲ್ಲ ರಾಜತಾಂತ್ರಿಕ ಮಾರ್ಗಗಳ ಮೂಲಕ ವಿಜಯ್ ಮಲ್ಯ ಹಸ್ತಾಂತರಕ್ಕೆ ಪ್ರಯತ್ನಿಸಬೇಕಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications