ಮತ್ತೆ ಬಂಡವಾಳಶಾಹಿಗೆ ಮಣೆ ಹಾಕಿದ ಇನ್ಫಿ ಮೂರ್ತಿ
ಟೊರಾಂಟೊ, ಏಪ್ರಿಲ್ 28: ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಅನನ್ಯ ಸಾಧನೆ ಮಾಡಿರುವ ದೊಡ್ಡಣ್ಣ ಎನ್ ಆರ್ ನಾರಾಯಣ ಮೂರ್ತಿ ಅವರಿಗೆ 'ವಿಶ್ವ ಭಾರತೀಯ' ಎಂಬ ಬಿರುದನ್ನು ನೀಡಿ ಸನ್ಮಾನಿಸಲಾಗಿದೆ.
ಕನ್ನಡಿಗ, ಇನ್ಫೋಸಿಸ್ ಕಂಪನಿಯ ಸಹ ಸಂಸ್ಥಾಪಕ, ಹಾಲಿ ಕಾರ್ಯಕಾರಿ ಅಧ್ಯಕ್ಷ ನಾರಾಯಣ ಮೂರ್ತಿ ಅವರಿಗೆ Canada India Foundation Chanchalani Global Indian Award ಪ್ರಶಸ್ತಿಯನ್ನು ಭಾನುವಾರ ಟೊರಾಂಟೊದಲ್ಲಿ ನಡೆದ ಸಮಾರಂಭದಲ್ಲಿ ಕೆನಡಾದ ಹಣಕಾಸು ಸಚೊವ ಜೋ ಒಲಿವರ್ ಅವರು ಪ್ರದಾನ ಮಾಡಲಾಯಿತು.

2014ನೇ ಸಾಲಿನ ಈ ಪ್ರಶಸ್ತಿಯು ಟ್ರೋಫಿ ಮತ್ತು 50 ಸಾವಿರ ಡಾಲರ್ ನಗದು ಒಳಗೊಂಡಿರುತ್ತದೆ. ಈ ಸಂದರ್ಭದಲ್ಲಿ ಗವರ್ನರ್ ಜನರಲ್ ಡೇವಿಡ್ ಜಾನ್ಸ್ ಟನ್, ಪ್ರಧಾನಿ ಸ್ಟೀಫನ್ ಹಾರ್ಪರ್, ಕೆನಡಾದ ವಲಸೆ ಸಚಿವ, ಕ್ರೀಡಾ ಸಚಿವ, ಭಾರತದ ಹೈಕಮೀಷನರ್ ನಿರ್ಮಲ್ ವರ್ಮಾ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ನಾರಾಯಣ ಮೂರ್ತಿ ಅವರು ಜಗತ್ತು ಮತ್ತೆ ಬಂಡವಾಳಶಾಹಿಯತ್ತ ಹೊರಳುವುದು ಅತ್ಯಗತ್ಯವಾಗಿದೆ ಎಂದು ಪ್ರತಿಪಾದಿಸಿದರು. ಬಂಡವಾಳಶಾಹಿ ಇತ್ತೀಚೆಗೆ ಕಾರ್ಯಗತವಾಗುಗುತ್ತಿಲ್ಲ; ಉದ್ಯಮರಂಗದಿಂದ ದೂರ ಉಳಿಯುತ್ತಿದೆ. ಇದನ್ನು ಸರಿಪಡಿಸುವ ತುರ್ತು ಅಗತ್ಯವಿದೆ ಎಂದು ಪ್ರತಿಪಾದಿಸಿದರು.
'ನಮ್ಮಂತಹ ಬಹುರಾಷ್ಟ್ರೀಯ ಕಂಪನಿಗಳೇ ಸಾಮಾಜಿಕ ಬಂಡವಾಳ ಹೆಚ್ಚಿಸುವಲ್ಲಿ ಉತ್ತಮ ಪಾತ್ರ ನಿಭಾಯಿಸುತ್ತಿವೆ. ಮಾನವ ಗೌರವನ್ನು ವೃದ್ಧಿಸಿಕೊಂಡು ಹೆಚ್ಚು ಹೆಚ್ಚು ಬಂಡವಾಳ ಹೂಡುವ ಅಗತ್ಯವಿದೆ. ಈ ಬಂಡವಾಳವು ಅಂತಿಮವಾಗಿ ಸಮಾಜದ ಒಳಿತಿಗಾಗಿ ಸದ್ವಿನಿಯೋಗವಾಗಬೇಕು' ಎಂದು ಅವರು ಕರೆ ನೀಡಿದರು.
ಈ ಸಂದರ್ಭದಲ್ಲಿ ಭಾರತದಲ್ಲಿ ಹೆಚ್ಚು ಹೆಚ್ಚು ಬಂಡವಾಳ ಹೂಡುವಂತೆ ಕೆನಡಾದಲ್ಲಿರುವ ಭಾರತದ ಹೈಕಮೀಷನರ್ ನಿರ್ಮಲ್ ವರ್ಮಾ ಅವರು ಉದ್ಯಮಿಗಳಿಗೆ ಕರೆಕೊಟ್ಟರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications