ಬರ್ಲಿನ್ ನಲ್ಲಿ ಜನರ ಮೇಲೆ ಟ್ರಕ್ ಹರಿಸಿ ಐಸಿಸ್ ಭೀಕರ ಹತ್ಯಾಕಾಂಡ
ಕ್ರಿಸ್ಮಸ್ ರಜಾ ದಿನಗಳಲ್ಲಿ ಜನನಿಬಿಡ ಪ್ರದೇಶಗಳಲ್ಲಿ ಐಎಸ್ಐಎಸ್ ಅಥವಾ ಅಲ್ ಕೈದಾ ಸಂಘಟನೆಗಳು ಇಂಥ ಕೃತ್ಯ ಎಸಗಬಹುದು, ಜನರು ಎಚ್ಚರಿಕೆಯಿಂದ ಇರಬೇಕು ಎಂದು ಅಮೆರಿಕ ಎಚ್ಚರಿಕೆ ನೀಡಿತ್ತು.
ಬರ್ಲಿನ್, ಡಿಸೆಂಬರ್ 20 : ಜನನಿಬಿಡ ಕ್ರಿಸ್ಮಸ್ ಮಾರುಕಟ್ಟೆಯಲ್ಲಿ ಟ್ರಕ್ ಹರಿಸಿ ಐಸಿಸ್ ಭೀಕರ ಹತ್ಯಾಕಾಂಡ ನಡೆಸಿದ್ದು, ಕನಿಷ್ಠ 9 ಜನರು ಸಾವಿಗೀಡಾಗಿದ್ದು, ಹಲವಾರು ಜನರು ಗಾಯಗೊಂಡ ಘಟನೆ ಸೋಮವಾರ ಸಂಜೆ ನಡೆದಿದೆ.
ಬರ್ಲಿನ್ ನ ಜನಪ್ರಿಯ ಕ್ರಿಸ್ಮಸ್ ಮಾರುಕಟ್ಟೆಯ ಹೊರಭಾಗದಲ್ಲಿರುವ ಕೈಸರ್ ವಿಲ್ಹೆಮ್ ಚರ್ಚ್ ಬಳಿ ಬೃಹತ್ ಸ್ಕಾನಿಯಾ ಟ್ರಕ್ ಜನರ ಮೇಲೆ ನುಗ್ಗಿದೆ. ಈ ಘಟನೆಗೆ ಕಾರಣಕರ್ತನಾದ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ. [ಯಾಸಿನ್ ಭಟ್ಕಳ ಹಾಗೂ ನಾಲ್ವರು ಉಗ್ರರಿಗೆ ಗಲ್ಲು ಶಿಕ್ಷೆ]

ಉಗ್ರ ಸಂಘಟನೆಯಾದ ಇಸ್ಲಾ ಸ್ಟೇಟ್ ಆಫ್ ಇರಾಕ್ ಅಂಡ್ ಸಿರಿಯಾ (ಐಎಸ್ಐಎಸ್) ಈ ಭಯೋತ್ಪಾದಕ ಕೃತ್ಯದ ಹೊಣೆ ಹೊತ್ತುಕೊಂಡಿದೆ. ಕೆಲ ತಿಂಗಳ ಹಿಂದೆ ಫ್ರಾನ್ಸ್ ನಲ್ಲಿ ಕೂಡ ಐಸಿಸ್ ಟ್ರಕ್ ಹರಿಸಿ 86 ಜನರನ್ನು ಹತ್ಯೆ ಮಾಡಿತ್ತು. [ಫ್ರಾನ್ಸ್ ನಲ್ಲಿ ಲಾರಿ ಹರಿಸಿ 77 ಜನರ ಭೀಕರ ಹತ್ಯೆ]
ಕ್ರಿಸ್ಮಸ್ ರಜಾ ದಿನಗಳಲ್ಲಿ ಜನನಿಬಿಡ ಪ್ರದೇಶಗಳಲ್ಲಿ ಐಎಸ್ಐಎಸ್ ಅಥವಾ ಅಲ್ ಕೈದಾ ಸಂಘಟನೆಗಳು ಇಂಥ ಕೃತ್ಯ ಎಸಗಬಹುದು, ಜನರು ಎಚ್ಚರಿಕೆಯಿಂದ ಇರಬೇಕು ಎಂದು ಅಮೆರಿಕ ಎಚ್ಚರಿಕೆ ನೀಡಿತ್ತು.
ಕೆಲ ಪ್ರತ್ಯಕ್ಷದರ್ಶಿಗಳ ಪ್ರಕಾರ, ಉದ್ದೇಶಪೂರ್ವಕವಾಗಿಯೇ ಟ್ರಕ್ಕನ್ನು ಜನರ ಮೇಲೆ ಹಾಯಿಸಲಾಗಿದೆ. ಸುಮಾರು 50ರಿಂದ 80 ಮೀಟರ್ ಉದ್ದಕ್ಕೂ ಟ್ರಕ್ ಚಲಿಸಿ ಜನರ ಮೇಲೆ ನುಗ್ಗಿದೆ ಎಂದು ಅವರು ತಿಳಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications