ಬರ್ಲಿನ್ ನಲ್ಲಿ ಜನರ ಮೇಲೆ ಟ್ರಕ್ ಹರಿಸಿ ಐಸಿಸ್ ಭೀಕರ ಹತ್ಯಾಕಾಂಡ
ಕ್ರಿಸ್ಮಸ್ ರಜಾ ದಿನಗಳಲ್ಲಿ ಜನನಿಬಿಡ ಪ್ರದೇಶಗಳಲ್ಲಿ ಐಎಸ್ಐಎಸ್ ಅಥವಾ ಅಲ್ ಕೈದಾ ಸಂಘಟನೆಗಳು ಇಂಥ ಕೃತ್ಯ ಎಸಗಬಹುದು, ಜನರು ಎಚ್ಚರಿಕೆಯಿಂದ ಇರಬೇಕು ಎಂದು ಅಮೆರಿಕ ಎಚ್ಚರಿಕೆ ನೀಡಿತ್ತು.
ಬರ್ಲಿನ್, ಡಿಸೆಂಬರ್ 20 : ಜನನಿಬಿಡ ಕ್ರಿಸ್ಮಸ್ ಮಾರುಕಟ್ಟೆಯಲ್ಲಿ ಟ್ರಕ್ ಹರಿಸಿ ಐಸಿಸ್ ಭೀಕರ ಹತ್ಯಾಕಾಂಡ ನಡೆಸಿದ್ದು, ಕನಿಷ್ಠ 9 ಜನರು ಸಾವಿಗೀಡಾಗಿದ್ದು, ಹಲವಾರು ಜನರು ಗಾಯಗೊಂಡ ಘಟನೆ ಸೋಮವಾರ ಸಂಜೆ ನಡೆದಿದೆ.
ಬರ್ಲಿನ್ ನ ಜನಪ್ರಿಯ ಕ್ರಿಸ್ಮಸ್ ಮಾರುಕಟ್ಟೆಯ ಹೊರಭಾಗದಲ್ಲಿರುವ ಕೈಸರ್ ವಿಲ್ಹೆಮ್ ಚರ್ಚ್ ಬಳಿ ಬೃಹತ್ ಸ್ಕಾನಿಯಾ ಟ್ರಕ್ ಜನರ ಮೇಲೆ ನುಗ್ಗಿದೆ. ಈ ಘಟನೆಗೆ ಕಾರಣಕರ್ತನಾದ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ. [ಯಾಸಿನ್ ಭಟ್ಕಳ ಹಾಗೂ ನಾಲ್ವರು ಉಗ್ರರಿಗೆ ಗಲ್ಲು ಶಿಕ್ಷೆ]

ಉಗ್ರ ಸಂಘಟನೆಯಾದ ಇಸ್ಲಾ ಸ್ಟೇಟ್ ಆಫ್ ಇರಾಕ್ ಅಂಡ್ ಸಿರಿಯಾ (ಐಎಸ್ಐಎಸ್) ಈ ಭಯೋತ್ಪಾದಕ ಕೃತ್ಯದ ಹೊಣೆ ಹೊತ್ತುಕೊಂಡಿದೆ. ಕೆಲ ತಿಂಗಳ ಹಿಂದೆ ಫ್ರಾನ್ಸ್ ನಲ್ಲಿ ಕೂಡ ಐಸಿಸ್ ಟ್ರಕ್ ಹರಿಸಿ 86 ಜನರನ್ನು ಹತ್ಯೆ ಮಾಡಿತ್ತು. [ಫ್ರಾನ್ಸ್ ನಲ್ಲಿ ಲಾರಿ ಹರಿಸಿ 77 ಜನರ ಭೀಕರ ಹತ್ಯೆ]
ಕ್ರಿಸ್ಮಸ್ ರಜಾ ದಿನಗಳಲ್ಲಿ ಜನನಿಬಿಡ ಪ್ರದೇಶಗಳಲ್ಲಿ ಐಎಸ್ಐಎಸ್ ಅಥವಾ ಅಲ್ ಕೈದಾ ಸಂಘಟನೆಗಳು ಇಂಥ ಕೃತ್ಯ ಎಸಗಬಹುದು, ಜನರು ಎಚ್ಚರಿಕೆಯಿಂದ ಇರಬೇಕು ಎಂದು ಅಮೆರಿಕ ಎಚ್ಚರಿಕೆ ನೀಡಿತ್ತು.
ಕೆಲ ಪ್ರತ್ಯಕ್ಷದರ್ಶಿಗಳ ಪ್ರಕಾರ, ಉದ್ದೇಶಪೂರ್ವಕವಾಗಿಯೇ ಟ್ರಕ್ಕನ್ನು ಜನರ ಮೇಲೆ ಹಾಯಿಸಲಾಗಿದೆ. ಸುಮಾರು 50ರಿಂದ 80 ಮೀಟರ್ ಉದ್ದಕ್ಕೂ ಟ್ರಕ್ ಚಲಿಸಿ ಜನರ ಮೇಲೆ ನುಗ್ಗಿದೆ ಎಂದು ಅವರು ತಿಳಿಸಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications