Donald Trump: 1,600 ಉದ್ಯೋಗಿಗಳಿಗೆ ದಿಢೀರ್ ಮನೆ ದಾರಿ ತೋರಿಸಿದ ಟ್ರಂಪ್!
ಡೊನಾಲ್ಡ್ ಟ್ರಂಪ್ ಕೈಗೊಳ್ಳುತ್ತಿರುವ ಪ್ರತಿಯೊಂದು ಕ್ರಮ ಕೂಡ ಇದೀಗ ಟೀಕೆಗೆ ಗುರಿಯಾಗಿ ದೊಡ್ಡ ಸಂಚಲನ ಸೃಷ್ಟಿ ಮಾಡುತ್ತಿದೆ. ಯಾಕಂದ್ರೆ ಡೊನಾಲ್ಡ್ ಟ್ರಂಪ್ ಅವರ ಎಡವಟ್ಟು ಒಂದೆರಡಲ್ಲ ಬಿಡಿ. ಅದರಲ್ಲೂ ಉದ್ಯೋಗಿಗಳನ್ನು ಮನೆಗೆ ಕಳುಹಿಸುವ ವಿಚಾರದಲ್ಲಿ ಇದೇ ಟ್ರಂಪ್ ದೊಡ್ಡ ವಿವಾದ ಸೃಷ್ಟಿ ಮಾಡುತ್ತಿದ್ದಾರೆ. ಡೊನಾಲ್ಡ್ ಟ್ರಂಪ್ ಅಧಿಕಾರಕ್ಕೆ ಬಂದ ನಂತರ ಅಮೆರಿಕದ ಸರ್ಕಾರಿ ನೌಕರರಿಗೆ ಭಯ ಶುರುವಾಗಿದ್ದು, ಹೀಗಿದ್ದಾಗಲೇ ಮತ್ತೆ 1,600 ಉದ್ಯೋಗಿಗಳಿಗೆ ದಿಢೀರ್ ಮನೆ ದಾರಿ ತೋರಿಸಲಾಗಿದೆ.
ಅಂತಾರಾಷ್ಟ್ರೀಯ ಅಭಿವೃದ್ಧಿಗಾಗಿ, ಅಂದರೆ ಅಮೆರಿಕದ ಹೊರಗಡೆ ಬೇರೆ ದೇಶಗಳಿಗೆ ಸಹಾಯ ಮಾಡಲು ಸೃಷ್ಟಿಯಾಗಿರುವ ಸಂಸ್ಥೆ USAID ಆಗಿದೆ. ಆದರೆ ಇದೇ ಸಂಸ್ಥೆ ಮೇಲೆ ಟ್ರಂಪ್ & ಜೊತೆಗಾರರ ಕಣ್ಣು ಬಿದ್ದಿದೆ ಎಂಬ ಆರೋಪ ಕೇಳಿಬಂದಿದೆ. ಅಮೆರಿಕ ಸರ್ಕಾರದ ಅಡಿಯಲ್ಲಿ ಕೆಲಸ ಮಾಡುವ ಈ ಸಂಸ್ಥೆಯಿಂದ ನೌಕರರನ್ನು ಮನೆಗೆ ಕಳುಹಿಸುವ ಕೆಲಸ ಭರ್ಜರಿಯಾಗಿ ಸಾಗಿದೆ. ಸಂಸ್ಥೆಯಲ್ಲಿ ಸಾವಿರಾರು ಜನರು ಕೆಲಸ ಮಾಡುತ್ತಿದ್ದರು, ಆದರೆ ಈ ಪೈಕಿ ಕೆಲವೇ ಕೆಲವು ನೌಕರರನ್ನು ಉಳಿಸಿಕೊಂಡು 1,600 ಜನರನ್ನು ದಿಢೀರ್ ವಜಾ ಮಾಡಿರುವ ಆರೋಪ ಕೇಳಿಬಂದಿದೆ.

ವಜಾ ಜೊತೆಗೆ ರಜೆ ಅಸ್ತ್ರ ಪ್ರಯೋಗ!
ದಿಢೀರ್ ಸಾವಿರಾರು ಉದ್ಯೋಗಿಗಳನ್ನು ಕೆಲಸದಿಂದ ತೆಗೆಯುವ ಜೊತೆಗೆ ಇನ್ನೂ ನೂರಾರು ನೌಕರರಿಗೆ ಕಡ್ಡಾಯ ರಜೆ ನೀಡಿದೆ ಡೊನಾಲ್ಡ್ ಟ್ರಂಪ್ ಆಡಳಿತ. ಈ ಮೂಲಕ, ದಿಢೀರ್ ಅಮೆರಿಕದಲ್ಲಿ ಸರ್ಕಾರಿ ನೌಕರರಿಗೆ ತಮ್ಮ ಕೆಲಸದ ಭದ್ರತೆ ಬಗ್ಗೆ ಭಯ ಶುರುವಾಗಿದೆ. ಇದೇ ರೀತಿ ಕೆಲಸದಿಂದ ತೆಗೆಯುತ್ತಿದ್ದರೆ ಮುಂದಿನ ಕಥೆ ಏನು? ಎನ್ನುವ ಪ್ರಶ್ನೆ ಕೂಡ ಅವರಲ್ಲಿ ಮೂಡಿದೆ. ಮತ್ತೊಂದು ಕಡೆ ಸರ್ಕಾರದ ಮೇಲೆ ಹೆಚ್ಚುವರಿ ಹೊರೆ ಇರುವ ಕಾರಣಕ್ಕೆ ಹೀಗೆ ಉದ್ಯೋಗ ಕಡಿತ ಅನಿವಾರ್ಯ ಎಂದು ಟ್ರಂಪ್ ಆಡಳಿತ ತನ್ನ ಕ್ರಮ ಸಮರ್ಥಿಸಿಕೊಳ್ಳುತ್ತಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications