ಅಮೆರಿಕದಲ್ಲಿ ಉದ್ಯೋಗ ಕಳೆದುಕೊಳ್ಳಲಿದ್ದಾರಾ ಐದು ಲಕ್ಷ ಭಾರತೀಯರು?!
Recommended Video

ವಾಷಿಂಗ್ಟನ್, ಜನವರಿ 03: ಅಮೆರಿಕದಲ್ಲಿರುವ ಭಾರತೀಯರ ಪಾಲಿಗೆ ಡೊನಾಲ್ಡ್ ಟ್ರಂಪ್ ವಿಲನ್ ಆಗಿಬಿಡುತ್ತಿದ್ದಾರಾ..? ಒಂದೊಮ್ಮೆ ಅವರ ಆಡಳಿತದ ಬಹು ನಿರೀಕ್ಷಿತ ಯೋಜನೆಯೊಂದು ಜಾರಿಗೆ ಬಂದಿದ್ದೇ ಆದಲ್ಲಿ ಅಮೆರಿಕದಲ್ಲಿರುವ 5 ಲಕ್ಷಕ್ಕೂ ಹೆಚ್ಚು ಭಾರತೀಯರು ತಮ್ಮ ಉದ್ಯೋಗ ಕಳೆದುಕೊಳ್ಳೋದು ಗ್ಯಾರಂಟಿ!
ಅಮೆರಿಕದಲ್ಲಿ ಶಾಶ್ವತವಾಗಿ ನೆಲೆಸುವುದಕ್ಕೆ ಅಗತ್ಯವಿರುವ ಗ್ರೀನ್ ಕಾರ್ಡ್ ಪಡೆಯಲು ಪ್ರಯತ್ನಿಸುತ್ತಿರುವವರ H-1B ವೀಸಾ ಅವಧಿಯನ್ನು ವಿಸ್ತರಿಸದಿರಲು ಡೊನಾಲ್ಡ್ ಟ್ರಂಪ್ ಆಡಳಿತ ತೀರ್ಮಾನಿಸಿದ್ದೇ ಆದಲ್ಲಿ ಇಲ್ಲಿರುವ ಐದು ಲಕ್ಷಕ್ಕೂ ಹೆಚ್ಚು ಭಾರತೀಯರು ಉದ್ಯೋಗ ಕಳೆದುಕೊಳ್ಳಬೇಕಾಗುತ್ತದೆ.

ಅಮೆರಿಕದ ಹೋಮ್ ಲ್ಯಾಂಡ್ ಸೆಕ್ಯುರಿಟಿ ವಿಭಾಗ ಹೇಳುವ ಪ್ರಕಾರ, 'ಈ ಹೊಸ ನಿಯಮ ಜಾರಿಗೆ ಬಂದರೆ ಭಾರತೀಯರಿಗೆ ಅಮೆರಿಕದಲ್ಲಿ ಉದ್ಯೋಗ ಪಡೆಯಲು ಅಗತ್ಯವಾದ H-1B ವೀಸಾ ಅವಧಿಯನ್ನು ವಿಸ್ತರಿಸಲು ಸಾಧ್ಯವಾಗುವುದಿಲ್ಲ. ಡೊನಾಲ್ಡ್ ಟ್ರಂಪ್ ಅವರು ಅಮೆರಿಕನ್ನರಿಗೇ ಹೆಚ್ಚು ಉದ್ಯೋಗ ನೀಡುವ, ಅಮೆರಿಕ ಪ್ರಜೆಗಳನ್ನು ಹೆಚ್ಚು ಆರ್ಥಿಕವಾಗಿ ಭದ್ರಗೊಳಿಸುವ ಉದ್ದೇಶ ಹೊಂದಿರುವುದರಿಂದ ಈ ನಿಯಮ ಜಾರಿಗೆ ಬರುವ ಎಲ್ಲಾ ಸಾಧ್ಯತೆಗಳಿವೆ'
ಈಗಿರುವ ನಿಯಮದ ಪ್ರಕಾರ H-1B ವೀಸಾ ಹೊಂದಿರುವ ವಿದೇಶಿಯರಿಗೆ ಮೂರು ವರ್ಷಗಳ ಕಾಲ ವೀಸಾ ಕಾಲಾವಧಿ ನಿಗದಿಯಾಗಿರುತ್ತದೆ. ನಂತರ ಅದನ್ನು ಮತ್ತೆ ಮೂರು ವರ್ಷದವರೆಗೆ ವಿಸ್ತರಿಸಬಹುದು. ಈ ಆರು ವರ್ಷದ ನಂತರ ವ್ಯಕ್ತಿ ಅಮೆರಿಕದಲ್ಲಿ ಶಾಶ್ವತವಾಗಿ ನೆಲೆಸಲು ಗ್ರೀನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬೇಕಾಗುತ್ತದೆ. ಗ್ರೀನ್ ಕಾರ್ಡ್ ಪಡೆಯುವವರೆಗೆ ಅನಿರ್ದಿಷ್ಟಾವಧಿ ಈ H-1B ವೀಸಾ ಕಾಲಾವಧಿಯನ್ನು ಇಷ್ಟು ದಿನ ವಿಸ್ತರಿಸಲಾಗುತ್ತಿತ್ತು. ಆದರೆ ಇನ್ನು ಮುಂದೆ ಯಾವುದೇ ರೀತಿಯಲ್ಲಿ ಇದನ್ನು ವಿಸ್ತರಿಸುವುದಕ್ಕೆ ಸಾಧ್ಯವಿಲ್ಲ ಎಂಬುದು ಈ ನಿಯಮದ ಸಾರ.
ಈಗಾಗಲೇ ಚೀನಾ ಮತ್ತು ಭಾರತದಿಂದ ಗ್ರೀನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರ ಸಂಖ್ಯೆ ಸಾಕಷ್ಟಿದೆ. ಅವರೆಲ್ಲ 10-12 ವರ್ಷಗಳಿಂದ ಗ್ರೀನ್ ಕಾರ್ಡ್ ಗಾಗಿ ಕಾಯುತ್ತಿದ್ದಾರೆ. ಯಾರ್ಯಾರ ಗ್ರೀನ್ ಕಾರ್ಡ್ ಪ್ರಕ್ರಿಯೆ ಪ್ರಗತಿಯಲ್ಲಿದೆಯೋ ಅವರು ಗ್ರೀನ್ ಕಾರ್ಡ್ ಪಡೆಯುವವರೆಗೂ ಅಮೆರಿಕದಲ್ಲಿ ನೆಲೆಸಲು ಈಗಲೂ ಅವಕಾಶ ಕಲ್ಪಿಸಲಾಗಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications