ಭಾರತಕ್ಕೆ ಕೊಡುತ್ತಿರುವ ಅನುದಾನದ ಬಗ್ಗೆ ಡೊನಾಲ್ಡ್ ಟ್ರಂಪ್ ಕಿರಿಕ್!
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪದೇ ಪದೇ ಭಾರತದ ಜೊತೆಗೆ ಕಿರಿಕ್ ತೆಗೆಯುತ್ತಿದ್ದು, ತಮ್ಮ ತಿಕ್ಕಾಟಕ್ಕೆ ಬ್ರೇಕ್ ಹಾಕುತ್ತಿಲ್ಲ. ಭಾರತದ ಬಗ್ಗೆಯೇ ಹೊಗಳುತ್ತಾ, ಭಾರತ ಮೂಲದ ಮತದಾರರ ಬೆಂಬಲ ಪಡೆದು ಅಮೆರಿಕ ಅಧ್ಯಕ್ಷರಾಗಿದ್ದರೂ ಡೊನಾಲ್ಡ್ ಟ್ರಂಪ್ ಮಾತ್ರ ಈ ರೀತಿ ಸುಖಾಸುಮ್ಮನೆ ಕಿರಿಕ್ ಮಾಡುತ್ತಿದ್ದಾರೆ. ಇದೀಗ ಮತ್ತೊಮ್ಮೆ ಟ್ರಂಪ್ ಅವರು ಭಾರತ ವಿರೋಧಿ ಹೇಳಿಕೆ ನೀಡಿ, ಹಲ್ಚಲ್ ಎಬ್ಬಿಸಿದ್ದಾರೆ.
ಭಾರತದ ಸಹಾಯ ಇಲ್ಲದೆ ಅಮೆರಿಕ ಅಭಿವೃದ್ಧಿ ಅಸಾಧ್ಯ ಎನ್ನಬಹುದು. ಅದು ಬಿಡಿ ಈಗ ಅಮೆರಿಕದ ಪರಿಸ್ಥಿತಿ ಹೇಗಿದೆ ಎಂದರೆ, ಹಲವು ವಸ್ತುಗಳನ್ನು ಭಾರತ ಪೂರೈಕೆ ಮಾಡದಿದ್ದರೆ ಅಮೆರಿಕ ವಿಲವಿಲ ಒದ್ದಾಡಿ ಹೋಗುತ್ತದೆ. ಹೀಗೆ ಅಮೆರಿಕ ನೂರಾರು ಸಂಕಷ್ಟಕ್ಕೆ ಸಿಲುಕಿ ಪರದಾಡುವ ಸಮಯದಲ್ಲೇ, ಅಲ್ಲಿನ ಅಧ್ಯಕ್ಷರು ಭಾರತದ ಬಗ್ಗೆ ಮಾತನಾಡಿರುವುದು ಈಗ ಭಾರಿ ವಿವಾದಕ್ಕೆ ದಾರಿ ಮಾಡಿಕೊಡುತ್ತಿದೆ. ಹಾಗಾದ್ರೆ ಅಮೆರಿಕದ ಅಧ್ಯಕ್ಷರು ಹೇಳಿದ್ದೇನು? ಬನ್ನಿ ತಿಳಿಯೋಣ.

ಡೊನಾಲ್ಡ್ ಟ್ರಂಪ್ ಕಿರಿಕ್ ಏನು?
ಅಂದಹಾಗೆ, ಭಾರತ ಜಗತ್ತಿನಲ್ಲೇ ಅತ್ಯಧಿಕ ತೆರಿಗೆ ದರ ಪ್ರಮಾಣ ಹೊಂದಿರುವ ದೇಶವಾಗಿದೆ ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ಹೇಳಿದ್ದಾರೆ. ಹಾಗೇ ಇದೇ ವೇಳೆ ಭಾರತಕ್ಕೆ ಅಮೆರಿಕದಿಂದ ಸಿಗುತ್ತಿರುವ ಅನುದಾನದ ವಿಚಾರವನ್ನ ಕೂಡ ಪ್ರಸ್ತಾಪ ಮಾಡಿದ್ದಾರೆ ಟ್ರಂಪ್. ಮತದಾನದ ಪ್ರಮಾಣ ಹೆಚ್ಚಿಸುವ ಉದ್ದೇಶಕ್ಕೆ ಭಾರತಕ್ಕೆ 21 ಮಿಲಿಯನ್ ಡಾಲರ್ ಆರ್ಥಿಕ ನೆರವು ನೀಡುವ ಅವಶ್ಯಕತೆ ಏನಿದೆ? ಅಂತಾ ಕೂಡ ಪ್ರಶ್ನೆ ಮಾಡಿದ್ದಾರೆ ಡೊನಾಲ್ಡ್ ಟ್ರಂಪ್. ಸುಮಾರು 182 ಕೋಟಿ ರೂಪಾಯಿ ನೆರವು ನೀಡುತ್ತಿರುವ ಬಗ್ಗೆ ಕೂಡ ಟ್ರಂಪ್ ಹೇಳಿಕೆ ನೀಡಿರುವುದು ಈಗ ಸಂಚಲನ ಸೃಷ್ಟಿ ಮಾಡಿದೆ.
ಒಟ್ನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೆರಿಗೆ ವಿಚಾರವಾಗಿ ಶುರು ಮಾಡಿರುವ ಈ ಯುದ್ಧವು ಇಷ್ಟಕ್ಕೇ ನಿಲ್ಲುವ ರೀತಿ ಕಾಣುತ್ತಿಲ್ಲ. ಅದರಲ್ಲೂ, ಮತದಾನ ಪ್ರಮಾಣ ಹೆಚ್ಚಿಸಲು ಭಾರತದ ಚುನಾವಣಾ ಆಯೋಗಕ್ಕೆ 21 ಮಿಲಿಯನ್ ಡಾಲರ್ ನೀಡಲಾಗಿದೆ ಎಂದು ಎಲಾನ್ ಮಸ್ಕ್ ನೇತೃತ್ವದ ಅಮೆರಿಕ ಸರ್ಕಾರದ ಕಾರ್ಯದಕ್ಷತಾ ಇಲಾಖೆ ಹೇಳಿಕೆಯ ನಂತರ ಈ ರೀತಿ ಟ್ರಂಪ್ ಮಾತನಾಡಿದ್ದಾರೆ. ಹೀಗಾಗಿ, ಈ ವಿಚಾರವು ದೊಡ್ಡ ಕಾಂಟ್ರವರ್ಸಿ ಹುಟ್ಟುಹಾಕುವ ಸಾಧ್ಯತೆ ದಟ್ಟವಾಗಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications