ಉಗ್ರರ ಸ್ವರ್ಗ ಪಾಕಿಸ್ತಾನ : ಡೊನಾಲ್ಡ್ ಟ್ರಂಪ್ ವಾಗ್ದಾಳಿ
ವಾಷಿಂಗ್ಟನ್, ಆಗಸ್ಟ್ 22: "ಪಾಕಿಸ್ತಾನ ಉಗ್ರರ ಪಾಲಿನ ಸ್ವರ್ಗವಾಗಿದೆ," ಎಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕಿಡಿಕಾರಿದ್ದಾರೆ.
ರಿಪಬ್ಲಿಕ್ ಪಕ್ಷದ ರಾಷ್ಟ್ರೀಯ ಸಮಾವೇಶ ಉದ್ದೇಶಿಸಿ ಮಾತನಾಡಿರುವ ಅವರು ಹಲವಾರು ಮಹತ್ವದ ವಿಚಾರಗಳನ್ನು ಪ್ರಸ್ತಾಪಿಸಿದ್ದಾರೆ.

"ಪಾಕಿಸ್ತಾನದ ಜನರು ಭಯೋತ್ಪಾದಕರಿಂದ ತೊಂದರೆ ಅನುಭವಿಸಿದ್ದಾರೆ. ಇದೇ ವೇಳೆ ಪಾಕಿಸ್ತಾನ ಉಗ್ರರ ಪಾಲಿನ ಸ್ವರ್ಗವಾಗಿದೆ. ಇದೀಗ ಪಾಕ್ ಉಗ್ರರನ್ನು ಮಟ್ಟ ಹಾಕಿ ತನ್ನ ಭದ್ಧತೆಯನ್ನು ಪ್ರದರ್ಶಿಬೇಕಾಗಿದೆ," ಎಂದು ಟ್ರಂಪ್ ಭಾರತದ ನೆರೆಯ ರಾಷ್ಟ್ರಕ್ಕೆ ಕಟು ಸಂದೇಶ ನೀಡಿದ್ದಾರೆ.
ಅಫ್ಘಾನಿಸ್ತಾನದಿಂದ ಸೇನೆ ಹಿಂತೆಗವಿಲ್ಲ
"ಇರಾಕ್ ನಿಂದ ಸೇನೆಯನ್ನು ಹಿಂತೆಗೆದುಕೊಂಡು ನಮ್ಮ ಹಿಂದಿನ ನಾಯಕರು ಮಾಡಿದ ತಪ್ಪನ್ನು ನಾವು ಮಾಡುವುದಿಲ್ಲ. ಅಫ್ಘಾನಿಸ್ತಾನದಿಂದ ನಮ್ಮ ಸೇನೆಯನ್ನು ಹಿಂತೆಗೆದುಕೊಳ್ಳುವುದಿಲ್ಲ. ಸೇನೆಯನ್ನು ಹಿಂತೆಗೆದುಕೊಂಡರೆ ಆ ಜಾಗ ತುಂಬಲ ಐಸಿಸ್ ಮತ್ತು ಅಲ್ ಖೈದಾ ಸಂಘಟನೆಗಳಿಗೆ ದಾರಿ ಮಾಡಿಕೊಟ್ಟ ಹಾಗೆ ಆಗುತ್ತದೆ," ಎಂದು ಡೊನಾಲ್ಡ್ ಟ್ರಂಪ್ ಸ್ಪಷ್ಟವಾಗಿ ಹೇಳಿದ್ದಾರೆ.
ನಾವು ಭಾರತದ ಪಾಲುದಾರಿಕೆಯೊಂದಿಗೆ ಆಳವಾದ ಕಾರ್ಯತಂತ್ರ ರೂಪಿಸುತ್ತಿದ್ದೇವೆ. ಇವತ್ತು ಭಾರತ ನಮ್ಮ ಜತೆ ವ್ಯಾಪಾರದಲ್ಲಿ ಬಿಲಿಯನ್ ಡಾಲರ್ ಗಳನ್ನು ಗಳಿಸುತ್ತಿದೆ. ಈ ಸಂದರ್ಭದಲ್ಲಿ ನಾವು ಭಾರತ ಅಫ್ಘಾನಿಸ್ತಾನದಲ್ಲಿ ನಮ್ಮ ನೆರವಿಗೆ ಬರಬೇಕು ಎಂದು ಬಯುಸುತ್ತೇವೆ ಎಂದು ಟ್ರಂಪ್ ತಮ್ಮ ಮನದಾಳದ ಬಯಕೆ ತಿಳಿಸಿದ್ದಾರೆ.
ಇನ್ನು ನಮ್ಮ ಜತೆ ಅಫ್ಘಾನಿಸ್ತಾನದಲ್ಲಿ ಕೈ ಜೋಡಿಸುವುದರಿಂದ ಪಾಕಿಸ್ತಾನಕ್ಕೆ ಭಾರೀ ಲಾಭವಿದೆ. ಅದೇ ಭಯೋತ್ಪಾದಕರು ಮತ್ತು ಕ್ರಿಮಿನಲ್ ಗಳಿಗೆ ನೆಲೆ ನೀಡುವುದರಿಂದ ಪಾಕಿಸ್ತಾನಕ್ಕೆ ಬಹಳಷ್ಟು ನಷ್ಟವಿದೆ ಎಂದು ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.
ಇದೇ ವೇಳೆ ಅವರು "ಭಾರತ ಮತ್ತು ಪಾಕಿಸ್ತಾನ ಪರಮಾಣು ಅಸ್ತ್ರ ಹೊಂದಿರುವ ದೇಶಗಳಾಗಿವೆ. ಈ ದೇಶಗಳ ನಡುವಿನ ಉದ್ವಿಗ್ನ ಸಂಬಂಧಗಳು ಸಂಘರ್ಷಕ್ಕೆ ನಾಂದಿಯಾಗಬಹುದು ಮತ್ತು ಅದು ಸಂಭವಿಸಲೂಹುದು," ಎಂದು ಹೇಳಿದ್ದಾರೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications