ಇರಾನ್ ಜೊತೆ ವ್ಯಾಪಾರ ಮಾಡುವ ದೇಶಗಳಿಗೆ ತೆರಿಗೆ ಆಘಾತ ನೀಡಿದ ಅಮೆರಿಕ ಅಧ್ಯಕ್ಷ!
ಅಮೆರಿಕ ಅಧ್ಯಕ್ಷ ಮತ್ತೊಮ್ಮೆ ಇರಾನ್ ವಿರುದ್ದ ರೊಚ್ಚಿಗೆದ್ದು, ಕಠಿಣ ಕ್ರಮ ಜಾರಿಗೆ ತರಲು ಇದೀಗ ಮುಂದಾಗಿದ್ದಾರೆ. ಆದರೆ ಈ ಬಾರಿ ನೇರವಾಗಿ ಇರಾನ್ ವಿರುದ್ಧ ಕ್ರಮ ಕೈಗೊಳ್ಳದೆ, ಇರಾನ್ ಜೊತೆ ಯಾರು ವ್ಯಾಪಾರ ನಡೆಸುತ್ತಾರೋ ಅವರ ಮೇಲೆ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಡೊನಾಲ್ಡ್ ಟ್ರಂಪ್ ಅವರ ಈ ನಿರ್ಧಾರ ಇದೀಗ ದೊಡ್ಡ ಮಟ್ಟದಲ್ಲಿ ಸಂಚಲನ ಸೃಷ್ಟಿ ಮಾಡಿದೆ. ಇರಾನ್ನಲ್ಲಿ ಇದೀಗ ಭಾರಿ ದೊಡ್ಡ ಪ್ರಮಾಣದಲ್ಲಿ ಪ್ರತಿಭಟನೆಗಳು ನಡೆಯುತ್ತಿದ್ದು, ಆಡಳಿತ ವಿರೋಧಿ ಅಲೆಯ ನಡುವೆ ಹಿಂಸೆ ಜೋರಾಗಿದೆ. ಹೀಗಿದ್ದಾಗ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಕಠಿಣ ಕ್ರಮ ಜಾರಿಗಾಗಿ ಮುಂದಾಗಿದ್ದಾರೆ.
ಅಲಿ ಖಮೇನಿ ಆಡಳಿತ ವಿರೋಧಿಸಿ, ಸರ್ವಾಧಿಕಾರಿ ನೀತಿ ನಮಗೆ ಬೇಡ ಎಂದು ಇರಾನ್ನ ಜನಗಳು ರೊಚ್ಚಿಗೆದ್ದು ಹೋರಾಟ ನಡೆಸುತ್ತಿದ್ದಾರೆ. ಇದರ ಪರಿಣಾಮ ಇದೀಗ ಇಡೀ ಇರಾನ್ ಧಗಧಗ ಅಂತಾ ಹೊತ್ತಿ ಉರಿಯುತ್ತಿದೆ. ಇದು ಪ್ರಜಾಪ್ರಭುತ್ವ ವಿರೋಧಿ ನೀತಿ ಎಂದು ಜಗತ್ತಿನ ಹಲವು ದೇಶಗಳು ತಮ್ಮ ಅಭಿಪ್ರಾಯ ತಿಳಿಸಿವೆ. ಇಂತಹ ಸ್ಥಿತಿಯಲ್ಲಿ ಭಾರಿ ಗಂಭೀರ ಕ್ರಮ ಕೈಗೊಳ್ಳಲು ಮುಂದಾಗಿರುವ ಟ್ರಂಪ್ ಅವರು, ಖಮೇನಿ ಸರ್ಕಾರದ ಮೇಲೆ ಒತ್ತಡ ಹೇರಲು ಇದೀಗ ಇರಾನ್ ಜೊತೆಯಲ್ಲಿ ವ್ಯಾಪಾರ ನಡೆಸುವ ದೇಶಗಳ ಮೇಲೆ ಶೇಕಡಾ 25ರಷ್ಟು ಹೆಚ್ಚುವರಿ ಸುಂಕ ಘೋಷಣೆ ಮಾಡಿದ್ದಾರೆ. ಹಾಗಾದರೆ ಇದು ನಮ್ಮ ಭಾರತದ ಮೇಲೆ ಕೂಡ ಪರಿಣಾಮ ಬೀರುತ್ತಾ? ಬನ್ನಿ ತಿಳಿಯೋಣ.

ಡೊನಾಲ್ಡ್ ಟ್ರಂಪ್ ತೆರಿಗೆ ಶಾಕ್
ಹೌದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ದಿಢೀರ್ ತೆರಿಗೆ ಬಾಣ ಪ್ರಯೋಗ ಮಾಡಿದ್ದಾರೆ. ಇದು ಇರಾನ್ ಜೊತೆಗೆ ವ್ಯಪಾರ ನಡೆಸುತ್ತಿರುವ ದೇಶಗಳಿಗೆ ಆಘಾತ ನೀಡಿದೆ. ತಕ್ಷಣ ಜಾರಿಗೆ ಬರುವಂತೆ ಇರಾನ್ ಜೊತೆ ವ್ಯಾಪಾರ ಮಾಡುವ ಯಾವುದೇ ದೇಶ ಅಮೆರಿಕದ ಜೊತೆಯಲ್ಲಿ ಮಾಡುವ ಯಾವುದೇ ವ್ಯವಹಾರದ ಮೇಲೆ ಶೇ. 25ರಷ್ಟು ಸುಂಕ ಪಾವತಿ ಮಾಡಬೇಕಿದೆ. ಅಲ್ಲದೆ ಈ ಆದೇಶ ಅಂತಿಮ ಹಾಗೂ ನಿರ್ಣಾಯಕ ಎಂದು ಹೊಸ ತೆರಿಗೆ ಬಾಂಬ್ ಪ್ರಯೋಗ ಮಾಡಿದ್ದಾರೆ.
ಭಾರತದ ಮೇಲೂ ಪರಿಣಾಮ ಬೀರಲಿದೆಯಾ?
ಇರಾನ್ ಜೊತೆಗೆ ಚೀನಾ ಅತಿದೊಡ್ಡ ಪ್ರಮಾಣದಲ್ಲಿ ವ್ಯಾಪಾರ & ವ್ಯವಹಾರ ನಡೆಸುತ್ತಾ ಬಂದಿದೆ. ಇದರ ಜೊತೆಗೆ ಭಾರತ, ಯುಎಇ ಹಾಗೂ ಟರ್ಕಿ ಕೂಡ ದೊಡ್ಡ ಪ್ರಮಾಣದಲ್ಲಿ ವ್ಯಾಪಾರ ಮಾಡುತ್ತಾ ಬಂದಿದ್ದು, ರಷ್ಯಾ ಕೂಡ ಈ ವಿಚಾರದಲ್ಲಿ ಮುಂಚೂಣಿ ದೇಶವಾಗಿದೆ. ಭಾರತ 2024-25ನೇ ಸಾಲಿನ ಆರ್ಥಿಕ ವರ್ಷದಲ್ಲಿ ಇರಾನ್ ಜೊತೆ ಸುಮಾರು 14,000 ರಿಂದ 15,000 ಕೋಟಿ ರೂಪಾಯಿ ವ್ಯಾಪಾರ ವಹಿವಾಟು ನಡೆಸಿದೆ. ಇನ್ನೊಂದು ಕಡೆ ರಷ್ಯಾ ಕೂಡ ಯುದ್ಧ ಕಾಲದಲ್ಲಿ ಇರಾನ್ ನಂಬಿ ವ್ಯಾಪಾರ ನಡೆಸುತ್ತಿದೆ. ಇದೀಗ ಟ್ರಂಪ್ ಅವರ ನಿರ್ಧಾರ ಈ ಎಲ್ಲಾ ದೇಶಗಳ ಮೇಲೆ ಕೂಡ ಪರಿಣಾಮ ಬೀರುವ ಆತಂಕ ಮೂಡಿಸಿದೆ.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications