Donald Trump: ಎಲಾನ್ ಮಸ್ಕ್ಗೆ ವಾರ್ನಿಂಗ್ ಕೊಟ್ಟ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್!
ಜಗತ್ತಿನ ಅತ್ಯಂತ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ & ಡೊನಾಲ್ಡ್ ಟ್ರಂಪ್ ನಡುವೆ ಕಿಚ್ಚು ಹೊತ್ತಿಕೊಂಡಿದ್ದು, ಈ ಬೆಂಕಿಯ ಕಿಡಿಯಿಂದ ಇದೀಗ ಇಡೀ ಅಮೆರಿಕ ಹೊತ್ತಿ ಉರಿಯುವ ಪರಿಸ್ಥಿತಿ ನಿರ್ಮಾಣ ಆಗುತ್ತಿದೆ. ಯಾಕಂದ್ರೆ ಇಬ್ಬರು ಚನ್ನಾಗಿಯೇ ಇದ್ದು ಈಗ ಜಗಳ ಶುರು ಮಾಡಿದ್ದಾರೆ. ಒಬ್ಬರ ಮೇಲೆ ಮತ್ತೊಬ್ಬರು ಕೆಂಡ ಕಾರುವ ಹಂತಕ್ಕೆ ಈ ಇಬ್ಬರ ಸಂಬಂಧ ಈಗ ಬಂದು ತಲುಪಿದೆ. ಇಂತಹ ಸಮಯದಲ್ಲೇ, ಎಲಾನ್ ಮಸ್ಕ್ಗೆ ವಾರ್ನಿಂಗ್ ಕೊಟ್ಟ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಏನು ಹೇಳಿದ್ದಾರೆ ಗೊತ್ತಾ?
ಡೊನಾಲ್ಡ್ ಟ್ರಂಪ್ ಜೊತೆ ಯಾರೇ ಕಿರಿಕ್ ಮಾಡಿಕೊಂಡರೂ ಅವರ ನೆಮ್ಮದಿ ಹಾಳಾಗುವುದು ಗ್ಯಾರಂಟಿ ಎನ್ನಬಹುದು. ಯೆಸ್, ಟ್ರಂಪ್ ಅವರ ತೆರಿಗೆ ಕಡಿತ ಮತ್ತು ಖರ್ಚು ಮಸೂದೆ ವಿರುದ್ಧ ಎಲಾನ್ ಮಸ್ಕ್ ರೊಚ್ಚಿಗೆದ್ದು ಕೂತಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಅಲ್ಲದೆ ಇದೇ ವಿಚಾರವಾಗಿ ಎಲಾನ್ ಮಸ್ಕ್ & ಡೊನಾಲ್ಡ್ ಟ್ರಂಪ್ ನಡುವೆ ವಾರ್ ಕೂಡ ಶುರುವಾಗಿತ್ತು. ಹೀಗೆ ಎಲಾನ್ ಮಸ್ಕ್ & ಡೊನಾಲ್ಡ್ ಟ್ರಂಪ್ ತಿಕ್ಕಾಟ ಜೋರಾಗಿದ್ದ ಸಮಯದಲ್ಲೇ, ಎಲಾನ್ ಮಸ್ಕ್ಗೆ ಭಾರಿ ದೊಡ್ಡ ವಾರ್ನಿಂಗ್ ಕೊಟ್ಟಿದ್ದಾರೆ ಅಮೆರಿಕ ಅಧ್ಯಕ್ಷ ಟ್ರಂಪ್. ಅದರಲ್ಲೂ ತಮ್ಮ ಎದುರಾಳಿ ಪಕ್ಷವನ್ನ ಬೆಂಬಲಿಸಿ ನಿಂತರೆ ಆಪತ್ತು ಗ್ಯಾರಂಟಿ ಎಂಬ ಸಂದೇಶ ಕೂಡ ರವಾನೆ ಮಾಡಿದ್ದಾರೆ.

ಡೊನಾಲ್ಡ್ ಟ್ರಂಪ್ ವಾರ್ನಿಂಗ್ ಏನು?
ಅಂದಹಾಗೆ ಜಗತ್ತಿನ ಅತ್ಯಂತ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ಬೆಂಬಲ ಇದ್ದ ಕಾರಣಕ್ಕೆ ಡೊನಾಲ್ಡ್ ಟ್ರಂಪ್ ಅವರು 2024 ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದರು. ಇಷ್ಟೆಲ್ಲಾ ನಡೆದಿದ್ದರೂ ಕೂಡ ಇದೀಗ ಟ್ರಂಪ್ ಅವರ ತೆರಿಗೆ ಕಡಿತ ಮತ್ತು ಖರ್ಚು ಮಸೂದೆ ವಿರುದ್ಧ ಎಲಾನ್ ಮಸ್ಕ್ ರೊಚ್ಚಿಗೆದ್ದು ಕೂತಿದ್ದರು ಎಂಬ ಕಾರಣ ಟ್ರಂಪ್ & ಮಸ್ಕ್ ನಡುವೆ ಯುದ್ಧ ಆರಂಭವಾಗಿದೆ. ಹೀಗಿದ್ದಾಗ ಟ್ರಂಪ್ ಅವರ ರಿಪಬ್ಲಿಕನ್ ಪಕ್ಷ ಬಿಟ್ಟು, ಟ್ರಂಪ್ ಅವರ ವಿರೋಧಿ ಪಕ್ಷ ಡೆಮಾಕ್ರಟಿಕ್ ಬೆಂಬಲಕ್ಕೆ ಎಲಾನ್ ಮಸ್ಕ್ ನಿಲ್ಲಲಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇದೇ ವಿಚಾರ ಈಗ ಟ್ರಂಪ್ ಪಿತ್ತ ನೆತ್ತಿಗೆ ಏರಿಸಿದ್ದು, ಮುಂಬರುವ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿಗಳನ್ನ ಬೆಂಬಲಿಸಿದರೆ ಗಂಭೀರ ಪರಿಣಾಮ ಎದುರಿಸುವುದು ಗ್ಯಾರಂಟಿ ಅಂತಾ ಎಲಾನ್ ಮಸ್ಕ್ಗೆ ಎಚ್ಚರಿಸಿದ್ದಾರೆ ಟ್ರಂಪ್!
ಇಬ್ಬರ ಸಂಬಂಧ ಮುಗಿದ ಕಥೆ?
ಅಮೆರಿಕದ ಖಾಸಗಿ ನ್ಯೂಸ್ ಚಾನಲ್ಗೆ ಡೊನಾಲ್ಡ್ ಟ್ರಂಪ್ ಫೋನ್ ಮೂಲಕ ಸಂದರ್ಶನ ನೀಡಿದ್ದರು, ಈ ಸಮಯದಲ್ಲಿ ಎಲಾನ್ ಮಸ್ಕ್ ಅವರಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ ಡೊನಾಲ್ಡ್ ಟ್ರಂಪ್. ಆದರೆ ಮಸ್ಕ್ ಯಾವ ಪರಿಣಾಮಗಳನ್ನು ಎದುರಿಸಬಹುದು? ಎಂಬುದನ್ನು ಸ್ಪಷ್ಟಪಡಿಸಲು ಟ್ರಂಪ್ ನಿರಾಕರಿಸಿದ್ದಾರೆ. ಹಾಗೂ, ಮಸ್ಕ್ ಜೊತೆಗಿನ ಸಂಬಂಧ ಮತ್ತೆ ಸರಿ ಮಾಡಿಕೊಳ್ಳಲು ಕೂಡ ಆಸಕ್ತಿ ಇಲ್ಲ ಎಂದು ಹೇಳಿದ್ದಾರೆ ಟ್ರಂಪ್. ಹೀಗಾಗಿ, ಇಬ್ಬರ ಜಗಳ ಮುಗಿಲು ಮುಟ್ಟಿದ್ದು, ಭಾರಿ ದೊಡ್ಡ ಸಂಚಲನ ಸೃಷ್ಟಿಯಾಗಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications