ಕೆಲಸದಿಂದ ತೆಗೆಯಲು ಡೊನಾಲ್ಡ್ ಟ್ರಂಪ್ ಆದೇಶ, ಅಮೆರಿಕ ಅಧ್ಯಕ್ಷರ ನಿರ್ಧಾರಕ್ಕೆ ಭಾರಿ ವಿರೋಧ!
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಾವು ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಹಲವಾರು ಕಠಿಣ ನಿಯಮಗಳನ್ನು ಜಾರಿಗೆ ತಂದಿದ್ದಾರೆ. ಇದು ಅಮೆರಿಕದಲ್ಲಿ ಪರ & ವಿರೋಧದ ಬಗ್ಗೆ ಚರ್ಚೆ ಹುಟ್ಟುಹಾಕಿದೆ. ಆದರೆ ಇದೆಲ್ಲವನ್ನೂ ಮೀರಿ ಅಮೆರಿಕದ ಸರ್ಕಾರಿ ನೌಕರರ ಕೆಲಸಕ್ಕೆ ಕುತ್ತು ಬಂದಿರುವ ವಿಚಾರ ಇದೀಗ ಜಾಗತಿಕ ಮಟ್ಟದಲ್ಲೂ ದೊಡ್ಡ ಸದ್ದು ಮಾಡುತ್ತಿದೆ. ಈ ಮೂಲಕ ಜಗತ್ತಿನ ಶಕ್ತಿಶಾಲಿ ದೇಶದ ಪ್ರಥಮ ಪ್ರಜೆ ಕೈಗೊಂಡಿರುವ ನಿರ್ಧಾರಕ್ಕೆ ಜನ ಏನು ಹೇಳುತ್ತಿದ್ದಾರೆ ಗೊತ್ತಾ?
ಅಮೆರಿಕ ಶ್ರೀಮಂತ ದೇಶ ಅಂತಾ ಹೊರಗೆ ಬಿಲ್ಡಪ್ ಕೊಡುವುದು ಅಷ್ಟೇ, ಆದರೆ ಒಳಗೊಳಗೆ ಈ ದೇಶ ನೊಂದು ಬೆಂದು ಹೋಗಿದೆ. ಹೀಗೆ ಈ ದೇಶ ನರಳುತ್ತಿರುವ ಕಾರಣಕ್ಕೆ ಆರ್ಥಿಕವಾಗಿ ಬೀದಿಗೆ ಬರುವ ಆತಂಕ ಕೂಡ ಎದುರಾಗಿದೆ. ಇದನ್ನು ಸರಿ ಮಾಡುವ ಉದ್ದೇಶಕ್ಕೆ ಸಾವಿರ ಸಾವಿರ ಉದ್ಯೋಗ ಕಡಿತಕ್ಕೆ ಅಮೆರಿಕ ಸರ್ಕಾರ ನಿರ್ಧಾರ ಮಾಡಿದೆ. ಈ ವಿಚಾರ ಎಲ್ಲೆಡೆಯೂ ದೊಡ್ಡ ಚರ್ಚೆಗೆ ವೇದಿಕೆ ಒದಗಿಸಿದೆ. ಕೆಲವರು ಟ್ರಂಪ್ ನಿರ್ಧಾರ ಸಮರ್ಥಿಸಿಕೊಂಡರೆ, ಈ ಸಮಯದಲ್ಲೇ ಇನ್ನೂ ಕೆಲವರು ಟ್ರಂಪ್ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ನೌಕರರ ಕೆಲಸಕ್ಕೆ ಬಂತಾ ಕುತ್ತು?
ಅಮೆರಿಕದ ಸರ್ಕಾರಿ ನೌಕರರು ಮನೆಗೆ ಹೋಗಲು ರೆಡಿಯಾಗಿದ್ದು, ಅಮೆರಿಕದಲ್ಲಿ ಬರೋಬ್ಬರಿ 10,000 ಸರ್ಕಾರಿ ನೌಕರರಿಗೆ ಗೇಟ್ ಪಾಸ್ ಗ್ಯಾರಂಟಿ ಆಗಿದೆ. ಒಟ್ಟು 23 ಲಕ್ಷ ಸರ್ಕಾರಿ ನೌಕರರ ಪೈಕಿ ಹತ್ತಾರು ಸಾವಿರ ಸರ್ಕಾರಿ ನೌಕರರು ಸ್ವಯಂ ನಿವೃತ್ತಿಗೆ ಒಪ್ಪಿದ್ದಾರೆ. ಇದರ ಜೊತೆಯಲ್ಲೇ 10,000 ಸರ್ಕಾರಿ ನೌಕರರಿಗೆ ಗೇಟ್ ಪಾಸ್ ನೀಡಲು ಟ್ರಂಪ್ ಆಡಳಿತ ಸಜ್ಜಾಗಿದೆ. ಈ ಮೂಲಕ ತನ್ನ ತಲೆ ಮೇಲೆ ಇರುವ ಆರ್ಥಿಕ ಭಾರ ಕಡಿಮೆ ಮಾಡಿಕೊಳ್ಳಲು ಟ್ರಂಪ್ ಸರ್ಕಾರ ಇದೀಗ ಸಜ್ಜಾಗಿದೆ. ಆದರೆ ಈ ವಿಚಾರ ಅಮೆರಿಕದಲ್ಲಿ ಮತ್ತಷ್ಟು ಕಿಚ್ಚು ಹೊತ್ತಿಸುವ ಆತಂಕವನ್ನು ಈಗ ಮೂಡಿಸಿದೆ.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಏಪ್ರಿಲ್ 11ರ ದರಪಟ್ಟಿ












Click it and Unblock the Notifications