ಕೆಲಸದಿಂದ ತೆಗೆಯಲು ಡೊನಾಲ್ಡ್ ಟ್ರಂಪ್ ಆದೇಶ, ಅಮೆರಿಕ ಅಧ್ಯಕ್ಷರ ನಿರ್ಧಾರಕ್ಕೆ ಭಾರಿ ವಿರೋಧ!
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಾವು ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಹಲವಾರು ಕಠಿಣ ನಿಯಮಗಳನ್ನು ಜಾರಿಗೆ ತಂದಿದ್ದಾರೆ. ಇದು ಅಮೆರಿಕದಲ್ಲಿ ಪರ & ವಿರೋಧದ ಬಗ್ಗೆ ಚರ್ಚೆ ಹುಟ್ಟುಹಾಕಿದೆ. ಆದರೆ ಇದೆಲ್ಲವನ್ನೂ ಮೀರಿ ಅಮೆರಿಕದ ಸರ್ಕಾರಿ ನೌಕರರ ಕೆಲಸಕ್ಕೆ ಕುತ್ತು ಬಂದಿರುವ ವಿಚಾರ ಇದೀಗ ಜಾಗತಿಕ ಮಟ್ಟದಲ್ಲೂ ದೊಡ್ಡ ಸದ್ದು ಮಾಡುತ್ತಿದೆ. ಈ ಮೂಲಕ ಜಗತ್ತಿನ ಶಕ್ತಿಶಾಲಿ ದೇಶದ ಪ್ರಥಮ ಪ್ರಜೆ ಕೈಗೊಂಡಿರುವ ನಿರ್ಧಾರಕ್ಕೆ ಜನ ಏನು ಹೇಳುತ್ತಿದ್ದಾರೆ ಗೊತ್ತಾ?
ಅಮೆರಿಕ ಶ್ರೀಮಂತ ದೇಶ ಅಂತಾ ಹೊರಗೆ ಬಿಲ್ಡಪ್ ಕೊಡುವುದು ಅಷ್ಟೇ, ಆದರೆ ಒಳಗೊಳಗೆ ಈ ದೇಶ ನೊಂದು ಬೆಂದು ಹೋಗಿದೆ. ಹೀಗೆ ಈ ದೇಶ ನರಳುತ್ತಿರುವ ಕಾರಣಕ್ಕೆ ಆರ್ಥಿಕವಾಗಿ ಬೀದಿಗೆ ಬರುವ ಆತಂಕ ಕೂಡ ಎದುರಾಗಿದೆ. ಇದನ್ನು ಸರಿ ಮಾಡುವ ಉದ್ದೇಶಕ್ಕೆ ಸಾವಿರ ಸಾವಿರ ಉದ್ಯೋಗ ಕಡಿತಕ್ಕೆ ಅಮೆರಿಕ ಸರ್ಕಾರ ನಿರ್ಧಾರ ಮಾಡಿದೆ. ಈ ವಿಚಾರ ಎಲ್ಲೆಡೆಯೂ ದೊಡ್ಡ ಚರ್ಚೆಗೆ ವೇದಿಕೆ ಒದಗಿಸಿದೆ. ಕೆಲವರು ಟ್ರಂಪ್ ನಿರ್ಧಾರ ಸಮರ್ಥಿಸಿಕೊಂಡರೆ, ಈ ಸಮಯದಲ್ಲೇ ಇನ್ನೂ ಕೆಲವರು ಟ್ರಂಪ್ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ನೌಕರರ ಕೆಲಸಕ್ಕೆ ಬಂತಾ ಕುತ್ತು?
ಅಮೆರಿಕದ ಸರ್ಕಾರಿ ನೌಕರರು ಮನೆಗೆ ಹೋಗಲು ರೆಡಿಯಾಗಿದ್ದು, ಅಮೆರಿಕದಲ್ಲಿ ಬರೋಬ್ಬರಿ 10,000 ಸರ್ಕಾರಿ ನೌಕರರಿಗೆ ಗೇಟ್ ಪಾಸ್ ಗ್ಯಾರಂಟಿ ಆಗಿದೆ. ಒಟ್ಟು 23 ಲಕ್ಷ ಸರ್ಕಾರಿ ನೌಕರರ ಪೈಕಿ ಹತ್ತಾರು ಸಾವಿರ ಸರ್ಕಾರಿ ನೌಕರರು ಸ್ವಯಂ ನಿವೃತ್ತಿಗೆ ಒಪ್ಪಿದ್ದಾರೆ. ಇದರ ಜೊತೆಯಲ್ಲೇ 10,000 ಸರ್ಕಾರಿ ನೌಕರರಿಗೆ ಗೇಟ್ ಪಾಸ್ ನೀಡಲು ಟ್ರಂಪ್ ಆಡಳಿತ ಸಜ್ಜಾಗಿದೆ. ಈ ಮೂಲಕ ತನ್ನ ತಲೆ ಮೇಲೆ ಇರುವ ಆರ್ಥಿಕ ಭಾರ ಕಡಿಮೆ ಮಾಡಿಕೊಳ್ಳಲು ಟ್ರಂಪ್ ಸರ್ಕಾರ ಇದೀಗ ಸಜ್ಜಾಗಿದೆ. ಆದರೆ ಈ ವಿಚಾರ ಅಮೆರಿಕದಲ್ಲಿ ಮತ್ತಷ್ಟು ಕಿಚ್ಚು ಹೊತ್ತಿಸುವ ಆತಂಕವನ್ನು ಈಗ ಮೂಡಿಸಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications