Tsunami Warning: ಚಿಲಿ, ಅರ್ಜೆಂಟಿನಾದಲ್ಲಿ ಭೂಕಂಪ; ಸುನಾಮಿ ಎಚ್ಚರಿಕೆ
ಚಿಲಿ ಮತ್ತು ಅರ್ಜೆಂಟೀನಾದ ದಕ್ಷಿಣ ಕರಾವಳಿಯಲ್ಲಿ ಶುಕ್ರವಾರ 7.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ ಮಾಹಿತಿ ನೀಡಿದೆ. ಇಲ್ಲಿನ ಕೇಪ್ ಹಾರ್ನ್ ಮತ್ತು ಅಂಟಾರ್ಕ್ಟಿಕಾ ನಡುವೆ ಸ್ಥಳೀಯ ಸಮಯ ಬೆಳಿಗ್ಗೆ 9:58 ಕ್ಕೆ 10 ಕಿಮೀ ಆಳದಲ್ಲಿ ಭೂಕಂಪ ಸಂಭವಿಸಿದೆ ಅದಾದ ಬಳಿಕ ಹಲವು ಸಣ್ಣ ಕಂಪನಗಳು ಸಂಭವಿಸಿವೆ ಎಂದು ವರದಿಯಾಗಿದೆ.
ಎಎಫ್ಪಿ ವರದಿ ಮಾಡಿರುವ ಪ್ರಕಾರ, ಚಿಲಿಯ ಅಧಿಕಾರಿಗಳು ದೇಶದ ದಕ್ಷಿಣ ಭಾಗದಲ್ಲಿ ಸುನಾಮಿ ಎಚ್ಚರಿಕೆ ನೀಡಿದ್ದಾರೆ. ಸುನಾಮಿ ಎಚ್ಚರಿಕೆ ಬಳಿಕ ದಕ್ಷಿಣ ಭಾಗದಲ್ಲಿರುವ ಮ್ಯಾಗಲ್ಲನೆಸ್ ಪ್ರದೇಶದ ಕರಾವಳಿ ಪ್ರದೇಶದಲ್ಲಿರುವ ಜನರನ್ನು ಬೇರೆಡೆ ಸ್ಥಳಾಂತರ ಮಾಡಬೇಕು ಎಂದು ಚಿಲಿಯ ರಾಷ್ಟ್ರೀಯ ವಿಪತ್ತು ತಡೆಗಟ್ಟುವಿಕೆ ಮತ್ತು ಪ್ರತಿಕ್ರಿಯೆ ಸೇವೆ ತಿಳಿಸಿದೆ.

ಚಿಲಿಯ ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ಸಾರ್ವಜನಿಕರು ಮ್ಯಾಗಲ್ಲನೆಸ್ ಪ್ರದೇಶದ ಕರಾವಳಿಯನ್ನು ಸ್ಥಳಾಂತರಿಸುವಂತೆ ಸೂಚನೆ ಕೊಟ್ಟಿದ್ದಾರೆ. ಮ್ಯಾಗಲ್ಲನೆಸ್ ಪ್ರದೇಶದಾದ್ಯಂತ ಕರಾವಳಿಯನ್ನು ಸ್ಥಳಾಂತರಿಸಲು ನಾವು ಕರೆ ನೀಡುತ್ತೇವೆ ಎಂದು ಅಧ್ಯಕ್ಷ ಗೇಬ್ರಿಯಲ್ ಬೋರಿಕ್ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.
ಜನರ ಸ್ಥಳಾಂತರ ಕೆಲಸ ಆರಂಭ
ಸಾಮಾಜಿಕ ಮಾಧ್ಯಮಗಳಲ್ಲಿ ಜನರನ್ನು ಬೇರೆ ಕಡೆ ಸ್ಥಳಾಂತರಿಸುತ್ತಿರುವ ವಿಡಿಯೋಗಳನ್ನು ಹಂಚಿಕೊಳ್ಳಲಾಗಿದೆ. ಸೈರನ್ಗಳು ಮೊಳಗಿದ ಬಳಿಕ ಜನ ಶಾಂತವಾಗಿ ಪ್ರದೇಶವನ್ನು ತೊರೆಯುತ್ತಿದ್ದಾರೆ. ಚಿಲಿಯ ಹೈಡ್ರೋಗ್ರಾಫಿಕ್ ಮತ್ತು ಓಷಿಯೋಗ್ರಾಫಿಕ್ ಸರ್ವಿಸ್ (SHOA) ಅಂದಾಜಿನ ಪ್ರಕಾರ, ಮುಂದಿನ ಗಂಟೆಗಳಲ್ಲಿ ಅಂಟಾರ್ಕ್ಟಿಕಾ ಮತ್ತು ಚಿಲಿಯ ದಕ್ಷಿಣದ ತೀವ್ರ ನಗರಗಳಿಗೆ ದೊಡ್ಡ ಅಲೆಗಳು ಅಪ್ಪಳಿಸುವ ಸಾಧ್ಯತೆ ಇದೆ.
ಬಿಬಿಸಿ ವರದಿ ಮಾಡಿರುವ ಪ್ರಕಾರ, ಚಿಲಿಯ ಸ್ಥಳೀಯ ಮಾಧ್ಯಮಗಳು ನಿವಾಸಿಗಳನ್ನು ಸಮುದ್ರ ಮಟ್ಟದಿಂದ 30 ಮೀಟರ್ ಎತ್ತರದಲ್ಲಿರುವ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲು ಕೆಲಸ ಮಾಡುತ್ತಿದೆ ಎಂದು ಮಾಹಿತಿ ನೀಡಿದೆ. ದಕ್ಷಿಣ ಅಮೆರಿಕಾದ ದಕ್ಷಿಣ ತುದಿಯಲ್ಲಿರುವ ಮ್ಯಾಗಲ್ಲನೆಸ್ ಪ್ರದೇಶವು ಚಿಲಿಯ ಎರಡನೇ ಅತಿದೊಡ್ಡ ಆದರೆ ಕಡಿಮೆ ಜನಸಂಖ್ಯೆಯನ್ನು ಹೊಂದಿದೆ.
ಚಿಲಿಯಲ್ಲಿ ಭೂಕಂಪದಿಂದ ಹೆಚ್ಚಿನ ಹಾನಿಯಾಗಿದೆ. ಇದು ಪದೇ ಭೂಕಂಪವನ್ನು ಅನುಭವಿಸುವ ದೇಶಗಳಲ್ಲಿ ಒಂದಾಗಿದೆ. ನಾಜ್ಕಾ, ದಕ್ಷಿಣ ಅಮೆರಿಕಾ ಮತ್ತು ಅಂಟಾರ್ಕ್ಟಿಕ್ ಒಟ್ಟು ಮೂರು ಟೆಕ್ಟೋನಿಕ್ ಪ್ಲೇಟ್ಗಳು ಅದರ ಪ್ರದೇಶದೊಳಗೆ ಒಮ್ಮುಖವಾಗುತ್ತವೆ.
1960 ರಲ್ಲಿ 9.5 ತೀವ್ರತೆಯ ಭೂಕಂಪದ ಬಳಿಕ ವಾಲ್ಡಿವಿಯಾ ಸಂಪೂರ್ಣ ನಾಶವಾಗಿತ್ತು. ಈ ದುರಂತದಲ್ಲಿ 9,500 ಜನ ಮೃತಪಟ್ಟಿದ್ದರು. 2010 ರಲ್ಲಿ, ಮಧ್ಯ ಚಿಲಿಯ ಕರಾವಳಿಯಲ್ಲಿ 8.8 ತೀವ್ರತೆಯ ಭೂಕಂಪ ಸಂಭವಿಸಿದ ಪರಿಣಾಮ ಸುನಾಮಿ ಅಪ್ಪಳಿಸಿದ್ದರಿಂದ 520 ಮಂದಿ ಮೃತಪಟ್ಟಿದ್ದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications