Turkey Earthquake: ತಂದೆ-ತಾಯಿ ಸಾವು- ಅವಶೇಷಗಳಡಿಯಲ್ಲಿ ಜನಿಸಿದ ಪವಾಡ ಮಗು!
ಟರ್ಕಿಯಲ್ಲಿ ಸಂಭವಿಸಿದ ಪ್ರಬಲ ಭೂಕಂಪಕ್ಕೆ ಇಡೀ ವಿಶ್ವವೇ ಮರುಕ ವ್ಯಕ್ತಪಡಿಸಿದೆ. ಈವರೆಗೆ ಸಾವಿನ ಸಂಖ್ಯೆ 6000ಕ್ಕೂ ಹೆಚ್ಚಾಗಿದೆ. ಈ ನಡುವೆ ಒಂದು ಪವಾಡ ನಡೆದಿದೆ. ಟರ್ಕಿ-ಸಿರಿಯಾ ಭೂಕಂಪದಲ್ಲಿ ಕುಸಿದ ಕಟ್ಟಡಗಳ ಅವಶೇಷಗಳಡಿಯಲ್ಲಿ ತಂದೆ-ತಾಯಿ ಸಾವನ್ನಪ್ಪಿದ್ದು ಹೆಣ್ಣು ಮಗುವೊಂದು ಜನಿಸಿದೆ. ಪೋಷಕರಿಗೆ ಬದುಕಲು ಸಾಧ್ಯವಾಗದೆ ಮಗು ಅನಾಥವಾಗಿದೆ. ನವಜಾತ ಶಿಶು ಮತ್ತು ಅದರ ಕುಟುಂಬದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಆದರೆ ಅವಶೇಷಗಳಡಿಯಲ್ಲಿ ಆಗಷ್ಟೃ ಜನಿಸಿದ ಮಗು ಪತ್ತೆಯಾಗಿದೆ.
ಭೂಕಂಪದ ಸಮಯದಲ್ಲಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಭೂಕಂಪನದ ಸಮಯದಲ್ಲಿ ಕಟ್ಟಡಗಳು ಕುಸಿದ ಪರಿಣಾಮ ತಾಯಿ ಕೊನೆ ಉಸಿರೆಳೆದಿದ್ದು ಹುಟ್ಟಿದ ಮಗು ಜೀವಂತವಾಗಿದೆ. ವ್ಯಕ್ತಿಯೋರ್ವ ನವಜಾತ ಶಿಶುವನ್ನು ಎತ್ತಿಕೊಂಡು ಓಡಿ ಬರುತ್ತಿರುವುದನ್ನು ಕಾನಬಹುದು.
ಈಶಾನ್ಯ ಸಿರಿಯಾದ ಆಫ್ರಿನ್ನ ಗ್ರಾಮಾಂತರದಲ್ಲಿರುವ ಜೆಂಡರೆಸ್ನಲ್ಲಿ ಕತ್ತಲೆ ಆವರಿಸಿದೆ. ಮಳೆ ಮತ್ತು ಚಳಿ ಆವರಿಸಿದ್ದರಿಂದ ನವಜಾತ ಶಿಶು ಮತ್ತು ಅವರ ಕುಟುಂಬವನ್ನು ರಕ್ಷಿಸಲು ಬೃಹತ್ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು. ಆದರೆ ಪೋಷಕರು ಭೂಕಂಪದ ಪ್ರಭಾವದಿಂದ ಬದುಕುಳಿಯಲಿಲ್ಲ ಎನ್ನುವುದು ತಿಳಿದು ಬಂದಿದೆ.

ಸೋಮವಾರ ಮುಂಜಾನೆ 7.8 ತೀವ್ರತೆಯ ಪ್ರಬಲ ಭೂಕಂಪದಿಂದ ಟರ್ಕಿ ಮತ್ತು ಸಿರಿಯಾ ತತ್ತರಿಸಿವೆ. ಈ ಮಾರಣಾಂತಿಕ ನೈಸರ್ಗಿಕ ವಿಕೋಪದಿಂದಾಗಿ ಸಾವಿರಾರು ಜನರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಕಟ್ಟಡಗಳು ನೆಲಸಮವಾಗಿವೆ. ಆರಂಭಿಕ ಭೂಕಂಪದ ನಂತರ 7.7 ತೀವ್ರತೆಯ ಭೂಕಂಪ ಎರಡನೆಯ ಬಾರಿಗೆ ಸಂಭವಿಸಿದೆ. ಭೂಕಂಪದ ತೀವ್ರತೆಗೆ ಪೂರ್ವ ಟರ್ಕಿಯನ್ನು ನಲುಗಿಸಿದೆ. ಬದುಕುಳಿದವರನ್ನು ಹುಡುಕುವ ಕಾರ್ಯ ಇಮದಿಗೂ ಮುಂದುವರೆದಿದೆ. ಹೀಗಾಗಿ ಸಾವಿನ ಸಂಖ್ಯೆ ಎಹಚ್ಚಾಗುವ ಸಾಧ್ಯತೆ ಇದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications