‘ತೊಟ್ಟಿಲಿನಂತೆ ತೂಗಾಡಿದ ಟರ್ಕಿ’: ಪ್ರಬಲ ಭೂಕಂಪಕ್ಕೆ ಸಿರಿಯಾದಲ್ಲಿ 640 ಸಾವು- ಬದುಕುಳಿದವರಿಗಾಗಿ ಹುಡುಕಾಟ!
ಇಂದು ಮುಂಜಾನೆ ದಕ್ಷಿಣ ಟರ್ಕಿಯಲ್ಲಿ ರಿಕ್ಟರ್ ಮಾಪಕದಲ್ಲಿ 7.8 ರ ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ನಂತರ 6.7 ತೀವ್ರತೆಯ ಮತ್ತೊಂದು ಪ್ರಬಲ ಕಂಪನ ಸಂಭವಿಸಿದ್ದು ಅಪಾರ ಸಾವು ನೋವು ಸಂಭವಿಸಿದೆ
ಸಿರಿಯಾದ ಗಡಿಗೆ ಸಮೀಪವಿರುವ ದಕ್ಷಿಣ ಟರ್ಕಿಯಲ್ಲಿ ಸೋಮವಾರ ಭಯಾನಕ ಭೂಕಂಪ ಸಂಭವಿಸಿದೆ. 7.8 ತೀವ್ರತೆಯ ಪ್ರಬಲ ಭೂಕಂಪನದಿಂದಾಗಿ ಟರ್ಕಿ ಮತ್ತು ಸಿರಿಯಾದಲ್ಲಿ 640 ಜನರು ಸಾವನ್ನಪ್ಪಿದ್ದಾರೆ. ಮಾತ್ರವಲ್ಲದೆ ಹಲವಾರು ಕಟ್ಟಡಗಳು ನೆಲಸಮವಾಗಿವೆ. ಅವಶೇಷಗಳ ಅಡಿ ಸಿಲುಕಿದ ಜನರನ್ನು ರಕ್ಷಣೆ ಮಾಡುವ ಕಾರ್ಯ ಮುಂದುವರೆದಿದೆ.
ಘಟನೆಯಲ್ಲಿ ಸುಮಾರು 2,323 ಜನರು ಗಾಯಗೊಂಡಿದ್ದಾರೆ ಎಂದು ಟುಕಿಯ ರಾಜ್ಯ ಮಾಧ್ಯಮ ವರದಿ ಮಾಡಿದೆ. ಮಲತ್ಯಾ ಪ್ರಾಂತ್ಯದಲ್ಲಿ 130 ಕಟ್ಟಡಗಳು ಉರುಳಿದರೆ, ದಿಯರ್ಬಕಿರ್ನಲ್ಲಿ 16 ಕುಸಿದಿವೆ. ಅವಶೇಷಗಳಡಿ ಸಿಲುಕಿರುವ ಬದುಕುಳಿದವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಪ್ರಬಲ ಭೂಕಂಪಕ್ಕೆ ಸಿರಿಯಾದಲ್ಲಿ 640 ಸಾವು
ಕೇಂದ್ರದ ವಾಯುವ್ಯಕ್ಕೆ 460 ಕಿಮೀ ದೂರದಲ್ಲಿರುವ ಟರ್ಕಿಯ ರಾಜಧಾನಿ ಅಂಕಾರಾದಲ್ಲಿಯೂ ಕಂಪನದ ಅನುಭವವಾಗಿದೆ. ಭೂಕಂಪದ ಹಿನ್ನೆಲೆಯಲ್ಲಿ, ಟರ್ಕಿಯ ಅಧಿಕಾರಿಗಳು ಅಂತರಾಷ್ಟ್ರೀಯ ಸಹಾಯಕ್ಕಾಗಿ ಕರೆ ನೀಡಿದ್ದಾರೆ. ನಡುಕಗಳು ಎಷ್ಟು ಪ್ರಬಲವಾಗಿದ್ದವೆಂದರೆ ಉತ್ತರ ಸಿರಿಯಾದಲ್ಲಿ ಸುಮಾರು 237 ಜನರು ಸಾವನ್ನಪ್ಪಿದ್ದಾರೆ ಮತ್ತು 600 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಟರ್ಕಿಯ ಅಧ್ಯಕ್ಷ ರೆಸೆಪ್ ತಯ್ಯಿಪ್ ಎರ್ಡೊಗನ್ ಅವರು ಟ್ವಿಟರ್ನಲ್ಲಿ "ಹುಡುಕಾಟ ಮತ್ತು ರಕ್ಷಣಾ ತಂಡಗಳನ್ನು ತಕ್ಷಣವೇ ಭೂಕಂಪದಿಂದ ಹಾನಿಗೊಳಗಾದ ಪ್ರದೇಶಗಳಿಗೆ ಕಳುಹಿಸಲಾಗಿದೆ" ಎಂದು ಹೇಳಿದ್ದಾರೆ.
|
ಟರ್ಕಿಗೆ ಎಲ್ಲ ರೀತಿಯ ನೆರವು ನೀಡುವ ಭರವಸೆ
ಘಟನೆಯ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದು, ಟರ್ಕಿಗೆ ಎಲ್ಲ ರೀತಿಯ ನೆರವು ನೀಡಿದ್ದಾರೆ. "ಟರ್ಕಿ ಭೂಕಂಪದಿಂದಾಗಿ ಪ್ರಾಣಹಾನಿ ಮತ್ತು ಆಸ್ತಿ ಹಾನಿಯಿಂದ ದುಃಖವಾಗಿದೆ. ದುಃಖತಪ್ತ ಕುಟುಂಬಗಳಿಗೆ ಸಂತಾಪ. ಗಾಯಾಳುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ. ಭಾರತವು ಟರ್ಕಿಯ ಜನರೊಂದಿಗೆ ಒಗ್ಗಟ್ಟಿನಿಂದ ನಿಂತಿದೆ. ನಾವು ಈ ದುರಂತವನ್ನು ನಿಭಾಯಿಸಲು ಸಾಧ್ಯವಿರುವ ಎಲ್ಲ ನೆರವು ನೀಡಲು ಸಿದ್ಧವಾಗಿದ್ದೇವೆ "ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಯುಎಸ್ ಜಿಯೋಲಾಜಿಕಲ್ ಸರ್ವೆ ಪ್ರಕಾರ, ಸೋಮವಾರದ ಮುಂಜಾನೆ ದಕ್ಷಿಣ ಟರ್ಕಿಯಲ್ಲಿ ರಿಕ್ಟರ್ ಮಾಪಕದಲ್ಲಿ 7.8 ಅಳತೆಯ ಪ್ರಬಲ ಭೂಕಂಪ ಸಂಭವಿಸಿದೆ. ನಂತರ 6.7 ತೀವ್ರತೆಯ ಮತ್ತೊಂದು ಪ್ರಬಲ ಕಂಪನ ಸಂಭವಿಸಿದೆ. ಆರಂಭಿಕ ಭೂಕಂಪ ಗಾಜಿಯಾಂಟೆಪ್ ಪ್ರಾಂತ್ಯದ ನೂರ್ಡಗಿ ನಗರದ ಪೂರ್ವಕ್ಕೆ 26 ಕಿಮೀ ದೂರದಲ್ಲಿ 17.9 ಕಿಮೀ ಆಳದಲ್ಲಿ ಕೇಂದ್ರೀಕೃತವಾಗಿತ್ತು. ಎರಡನೆಯದು ನಿಮಿಷಗಳ ನಂತರ ಮಧ್ಯ ಟರ್ಕಿಯಲ್ಲಿ 9.9 ಕಿಮೀ ಆಳದಲ್ಲಿ ಅಪ್ಪಳಿಸಿತು. 350 ಕಿಮೀ ಪೂರ್ವಕ್ಕೆ ದಿಯರ್ಬಕಿರ್ನಲ್ಲಿ ರಾಯಿಟರ್ಸ್ ಸಾಕ್ಷಿಯ ಪ್ರಕಾರ, ಕಂಪನವು ಸುಮಾರು ಒಂದು ನಿಮಿಷದವರೆಗೆ ಕಂಪಿಸಿದೆ. ಇದರಿಂದ ಮನೆಗಳು ಉರುಳಿವೆ.
|
ಟ್ವಿಟರ್ನಲ್ಲಿ ಭಯಾನಕ ವಿಡಿಯೊ ವೈರಲ್
"ನಾವು ತೊಟ್ಟಿಲಿನಂತೆ ಅಲುಗಾಡಿದ್ದೇವೆ. ಮನೆಯಲ್ಲಿ ನಾವು ಒಂಬತ್ತು ಮಂದಿ ಇದ್ದೆವು. ನನ್ನ ಇಬ್ಬರು ಗಂಡು ಮಕ್ಕಳು ಇನ್ನೂ ಅವಶೇಷಗಳಲ್ಲಿದ್ದಾರೆ, ನಾನು ಅವರಿಗಾಗಿ ಕಾಯುತ್ತಿದ್ದೇನೆ" ಎಂದು ದಿಯರ್ಬಕೀರ್ನಲ್ಲಿ ಏಳು ಅಂತಸ್ತಿನ ಅಪಾರ್ಟ್ಮೆಂಟ್ ಕುಸಿದು ಬಿದ್ದ ಮಹಿಳೆಯೊಬ್ಬರು ರಾಯಿಟರ್ಸ್ಗೆ ತಿಳಿಸಿದರು. ಟ್ವಿಟರ್ನಲ್ಲಿ ಹಂಚಿಕೊಳ್ಳಲಾದ ವಿಡಿಯೊಗಳಲ್ಲಿ ಜನರು ಪ್ರಾಣಕ್ಕಾಗಿ ಕಿರುಚುತ್ತಿರುವುದು ಮತ್ತು ಓಡುತ್ತಿರುವುದು ಕಂಡು ಬಂದಿದೆ.

ಭೂಕಂಪದ ವಿಡಿಯೋ ವೈರಲ್
ಟರ್ಕಿಯ ರೆಡ್ಕ್ರಾಸ್ನ ಮುಖ್ಯಸ್ಥರು ಗಂಭೀರ ಹಾನಿ ಮತ್ತು ಕುಸಿದ ಕಟ್ಟಡಗಳ ಮಾಹಿತಿಯನ್ನು ಪಡೆದಿರುವ ಕಾರಣ ಈ ಪ್ರದೇಶಕ್ಕೆ ಸಂಪನ್ಮೂಲಗಳನ್ನು ಸಜ್ಜುಗೊಳಿಸುತ್ತಿದ್ದಾರೆ. ಹಾನಿಗೊಳಗಾದ ಮನೆಗಳ ಕುಟುಂಬಸ್ಥರನ್ನು ಸ್ಥಳಾಂತರಿಸಲು ಸೂಚಿಸಲಾಗಿದೆ. ಸಿರಿಯಾದ ರಾಜಧಾನಿ ಡಮಾಸ್ಕಸ್ನಲ್ಲಿ ಮತ್ತು ಲೆಬನಾನಿನ ನಗರಗಳಾದ ಬೈರುತ್ ಮತ್ತು ಟ್ರಿಪೋಲಿಯಲ್ಲಿ ಜನರು ಭೂಕಂಪನವಾದಾಗ ಬೀದಿಗೆ ಓಡಿ ಬಂದರು. ತಮ್ಮ ಕಟ್ಟಡಗಳಿಂದ ಹೊರಬರಲು ತಮ್ಮ ಕಾರುಗಳನ್ನು ತೆಗೆದುಕೊಂಡರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications