ಟರ್ಕಿ ಭೂಕಂಪ: ಸಾವಿನ ಸಂಖ್ಯೆ 5,000ಕ್ಕೆ ಏರಿಕೆ: ಹಲವು ದೇಶಗಳಿಂದ ಸಹಾಯ ಹಸ್ತ!
ಟರ್ಕಿ, ಸಿರಿಯಾ ಭೂಕಂಪನಕ್ಕೆ ಸಾವು ಸಂಖ್ಯೆ 5,000ಕ್ಕೆ ಏರಿಕೆಯಾಗಿದ್ದು ಅಂತರಾಷ್ಟ್ರಗಳು ಸಹಾಯಕ್ಕೆ ಮುಂದಾಗಿವೆ.
ಸಿರಿಯಾ ಫೆಬ್ರವರಿ 7: ಟರ್ಕಿ, ಸಿರಿಯಾದಲ್ಲಿ ಸಂಭವಿಸಿದ ಪ್ರಬಲ ಭೂಕಂಪದಿಂದಾಗಿ ಸಾವಿನ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಈವರೆಗೆ 5,000ಕ್ಕೂ ಹೆಚ್ಚು ಜನ ಭೂಕಂಪನಕ್ಕೆ ಬಲಿಯಾಗಿದ್ದಾರೆ. ಬೃಹತ್ ಕಟ್ಟಡಗಳು ಧರಗುರುಳಿದ್ದರಿಂದ ಅವಶೇಷಗಳ ಅಡಿ ಸಿಲುಕಿ ಹಲವಾರು ಜನ ಪ್ರಾಣಬಿಟ್ಟಿದ್ದಾರೆ. ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ರಕ್ಕಸ ಭೂಕಂಪಕ್ಕೆ ನೂರಾರು ಜನ ಇನ್ನೂ ಕಾಣೆಯಾಗಿದ್ದಾರೆ. ಪ್ರದೇಶದಲ್ಲಿ ನಿರಾಶ್ರಿತರ ಅಳಲು, ನೋವಿನ ದೃಶ್ಯಗಳು ವೈರಲ್ ಆಗಿವೆ. ಕಾಣೆಯಾದವರ ಹುಡುಕುವ ಕಾರ್ಯ ಮುಂದುವರೆದಿದೆ.
ಸೋಮವಾರ ಮೊದಲ ಭಾರಿ 7.8-ರಿಕ್ಟರ್ ಭೂಕಂಪ ಸಂಭವಿಸಿತು. ಬೆಳಗಿನ ಜಾವ ಜನ ನಿದ್ದೆಯಲ್ಲಿರುವಾಗಲೇ ಈ ಭೂಕಂಪ ಸಂಭವಿಸಿದೆ. ಪ್ರಬಲ ಭೂಕಂಪಕ್ಕೆ ಕಟ್ಟಡಗಳು ನೆಲಕ್ಕಚ್ಚಿ ಹಲವಾರು ಜನ ನಿದ್ದೆಯಲ್ಲೇ ಪ್ರಾಣ ಬಿಟ್ಟಿದ್ದಾರೆ. ಉತ್ತರ ಸಿರಿಯಾದ ಭೂಕಂಪ-ಪೀಡಿತ ಪ್ರದೇಶದಲ್ಲಿ ಮನೆಗಳು, ಆಸ್ಪತ್ರೆಗಳು ಮತ್ತು ಚಿಕಿತ್ಸಾಲಯಗಳು ನಾಶವಾಗಿವೆ. ಅನೇಕ ಕಂದಮ್ಮಗಳು ತಮ್ಮ ಪೋಷಕರನ್ನು ಕಳೆದುಕೊಂಡಿವೆ. ನಿವಾಸಿಗಳಿಂದ ತುಂಬಿರುವ 5,606 ಅಪಾರ್ಟ್ ಮೆಂಟ್ ಕಟ್ಟಡಗಳಲ್ಲಿ ಅನೇಕ ಧರೆಗುರುಳಿದ್ದರೆ ಇನ್ನು ಕೆಲವು ಶಿಥಿಲಗೊಂಡಿವೆ. ಸಿರಿಯಾದಲ್ಲಿ ಡಜನ್ಗಟ್ಟಲೆ ಕುಸಿತಗಳನ್ನು ಮತ್ತು ಅಲೆಪ್ಪೊದಲ್ಲಿನ ಪುರಾತತ್ತ್ವ ಶಾಸ್ತ್ರದ ಸ್ಥಳಗಳಿಗೆ ಹಾನಿಯನ್ನು ಉಂಟುಮಾಡಿವೆ.

ಟರ್ಕಿಯಲ್ಲಿ ಸಂಭವಿಸಿದ ಭೀಕರ ಭೂಕಂಪಕ್ಕೆ ನೆರವಾಗಲು ಯುನೈಟೆಡ್ ಸ್ಟೇಟ್ಸ್, ಯುರೋಪಿಯನ್ ಯೂನಿಯನ್ ಮತ್ತು ರಷ್ಯಾ ಮುಂದಾಗಿದೆ. ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಟರ್ಕಿಗೆ "ಅಗತ್ಯ ನೆರವು" ನೀಡಲು ಮುಂದಾಗಿದ್ದಾರೆ. ಬೀಜಿಂಗ್ ರಕ್ಷಕರು, ವೈದ್ಯಕೀಯ ತಂಡಗಳು ಮತ್ತು ಇತರ ಸರಬರಾಜುಗಳನ್ನು ಕಳುಹಿಸುತ್ತಿದೆ ಎಂದು ಚೀನಾದ ರಾಜ್ಯ ಮಾಧ್ಯಮ ಮಂಗಳವಾರ ತಿಳಿಸಿದೆ.
ಜೊತೆಗೆ ವಿನಾಶಕಾರಿ ಭೂಕಂಪದಿಂದ ಚೇತರಿಸಿಕೊಳ್ಳಲು ಸಹಾಯ ಮಾಡಲು ಅಗತ್ಯವಿರುವ "ಯಾವುದೇ ಮತ್ತು ಎಲ್ಲಾ" ನೆರವನ್ನು ಯುನೈಟೆಡ್ ಸ್ಟೇಟ್ಸ್ ಕಳುಹಿಸುತ್ತದೆ ಎಂದು ಅಧ್ಯಕ್ಷ ಜೋ ಬಿಡೆನ್ ತನ್ನ ಟರ್ಕಿಶ್ ಕೌಂಟರ್ ರೆಸೆಪ್ ತಯ್ಯಿಪ್ ಎರ್ಡೋಗನ್ ಅವರಿಗೆ ಭರವಸೆ ನೀಡಿದರು.

ಟರ್ಕಿ ವಿಶ್ವದ ಅತ್ಯಂತ ಸಕ್ರಿಯ ಭೂಕಂಪ ವಲಯಗಳಲ್ಲಿ ಒಂದಾಗಿದೆ. ಅಧಿಕ ಪ್ರಬಲವಾದ ಭೂಕಂಪ ಈ ಹಿಂದೆ 1939 ರಲ್ಲಿ ಸಂಭವಿಸಿತ್ತು. ಇದು 7.8 ತೀವ್ರತೆಯ ಪೂರ್ವ ಎರ್ಜಿನ್ಕಾನ್ ಪ್ರಾಂತ್ಯದಲ್ಲಿ 33,000 ಜನರನ್ನು ಬಲಿತೆಗೆದುಕೊಂಡಿತು. ಬಳಿಕ 1999 ರಲ್ಲಿ ಟರ್ಕಿಯ ಡಝ್ಸ್ ಪ್ರದೇಶ 7.4 ತೀವ್ರತೆಯಲ್ಲಿ ಕಂಪಿಸಿತು. ಈ ವೇಳೆ 17,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications