ಈ ದೇಶದಲ್ಲಿ ಇದುವರೆಗೂ ಒಂದೇ ಒಂದು ಕೊರೊನಾ ಪ್ರಕರಣವೂ ವರದಿಯಾಗಿಲ್ಲ!
ಕೊರೊನಾ ಸೋಂಕು ವಿಶ್ವವನ್ನೇ ಆವರಿಸುತ್ತಾ ಎರಡು ವರ್ಷಗಳಾಗಿವೆ. ಆದರೆ ಈ ದೇಶದಲ್ಲಿ ಇದುವರೆಗೂ ಒಂದೇ ಒಂದು ಕೊರೊನಾ ಪ್ರಕರಣವೂ ವರದಿಯಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಟರ್ಕ್ಮೆನಿಸ್ತಾನ್ ದೇಶದಲ್ಲಿ ಕೊರೊನಾ ಸೋಂಕು ಆರಂಭವಾದಾಗಿನಿಂದ ಇಲ್ಲಿಯವರೆಗೂ ಒಂದೇ ಒಂದು ಕೊರೊನಾ ಸೋಂಕಿತ ಪ್ರಕರಣವೂ ವರದಿಯಾಗಿಲ್ಲ, ಇದು ಮಧ್ಯ ಏಷ್ಯಾದಲ್ಲಿರುವ ಒಂದು ದೇಶವಾಗಿದೆ.
ಜಾನ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ಹಾಗೂ ವಿಶ್ವ ಆರೋಗ್ಯ ಸಂಸ್ಥೆ ಸಂಗ್ರಹಿಸಿದ ಮಾಹಿತಿ ಪ್ರಕಾರ ಸುಮಾರು 6 ಮಿಲಿಯನ್ ಜನಸಂಖ್ಯೆಯಿರುವ ಒಟ್ಟು ಐದು ದೇಶಗಳಲ್ಲಿ ಕೊರೊನಾ ಸೋಂಕು ಇದುವರೆಗೂ ಪತ್ತೆಯಾಗಿಲ್ಲ.

ಟರ್ಕ್ಮೆನಿಸ್ತಾನ್ ಅಧ್ಯಕ್ಷ ಗರ್ಬಂಗೂಲಿ 2006ರಿಂದ ಅಧಿಕಾರದಲ್ಲಿದ್ದಾರೆ. ದೇಶದಲ್ಲಿ ಕೊರೊನಾ ಸೋಂಕು ಪತ್ತೆಯಾಗಿಲ್ಲ ಎಂದು ಹೇಳಿದ್ದಾರೆ.
ಆದರೆ ಅಲ್ಲಿನ ಕೆಲವು ಸಂಘಟನೆಗಳು, ಕಾರ್ಯಕರ್ತರು ಪತ್ರಕರ್ತರು ಈ ವರದಿ ಸುಳ್ಳು ದೇಶದಲ್ಲೂ ಕೊರೊನಾ ಪ್ರಕರಣಗಳಿವೆ ಎಂದು ಹೇಳಿವೆ.
ಟರ್ಕ್ಮೆನಿಸ್ತಾನದ ಸ್ವತಂತ್ರ ಸುದ್ದಿಸಂಸ್ಥೆ ಟರ್ಕ್ಮೆನ್ ನ್ಯೂಸ್ನ ಸಂಪಾದಕ ರುಸ್ಲಾನ್ ಹೇಳುವ ಪ್ರಕಾರ, ಶಿಕ್ಷಕರು, ಕಲಾವಿದರು ಸೇರಿದಂತೆ ದೇಶದಲ್ಲಿ 60ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಿದ್ದಾರೆ.
ಮಧ್ಯ ಏಷ್ಯಾ ರಾಷ್ಟ್ರ ಟರ್ಕ್ಮೆನಿಸ್ತಾನದಲ್ಲಿ ಕೊರೊನಾ ವೈರಸ್ ಎಂಬ ಪದವನ್ನು ಅಲ್ಲಿನ ಸರಕಾರ ನಿಷೇಧಿಸಿದ್ದು, ರಾಷ್ಟ್ರದಲ್ಲಿ ಇದುವರೆಗೂ ಒಂದು ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿಲ್ಲ ಎಂದು ಹೇಳಿಕೊಂಡಿದೆ. ಮಾಧ್ಯಮಗಳು ಕೊರೊನಾ ವೈರಸ್ ಪದವನ್ನು ಬಳಸುವಂತಿಲ್ಲ. ಅದಲ್ಲದೇ ಶಾಲೆ, ಆಸ್ಪತ್ರೆಗಳಲ್ಲಿ ವಿತರಿಸುವ ಸರಕಾರದ ಆರೋಗ್ಯ ಬ್ರೋಷರ್ಗಳಲ್ಲಿಯೂ ಆ ಪದವನ್ನು ತೆಗೆದು ಹಾಕಲಾಗಿದೆ.
2019ರ ವಿಶ್ವ ಪತ್ರಿಕಾ ಸ್ವಾತಂತ್ರ್ಯ ಸೂಚ್ಯಂಕದಲ್ಲಿ ಟರ್ಕ್ಮೆನಿಸ್ತಾನ್ ಕಡೆ ಸ್ಥಾನ ಪಡೆದಿತ್ತು. ಅದಲ್ಲದೇ ವಿಶ್ವದಲ್ಲಿಯೇ ಅತಿ ಹೆಚ್ಚು ನಿರ್ಬಂಧ ವಿಧಿಸಿಕೊಂಡಿರುವ ದೇಶ ಎಂಬ ಕುಖ್ಯಾತಿಗೆ ಈ ರಾಷ್ಟ್ರ ಒಳಗಾಗಿದೆ. ಇರಾನ್ನಲ್ಲಿ ಇದುವರೆಗೂ 44,000 ಕೊರೊನಾ ಪಾಸಿಟಿವ್ ಕೇಸ್ಗಳು ಪತ್ತೆಯಾಗಿದ್ದರೂ ನೆರೆಯ ಟರ್ಕ್ಮೆನಿಸ್ತಾನದಲ್ಲಿ ಮಾತ್ರ ಯಾವುದೇ ಪ್ರಕರಣ ಕಂಡುಬಂದಿಲ್ಲ ಎಂದು ಅಲ್ಲಿನ ಸರಕಾರ ಹೇಳಿದೆ.
ಅಲ್ಲಿನ ಸ್ಥಳೀಯ ಮಾಧ್ಯಮದ ವರದಿಗಳ ಪ್ರಕಾರ, ಸಾರ್ವಜನಿಕರು ಕೊರೊನಾ ಬಗ್ಗೆ ಮಾತನಾಡಿದರೆ ಮಫ್ತಿಯಲ್ಲಿರುವ ಪೊಲೀಸರು ಅವರನ್ನು ಪೊಲೀಸ್ ಠಾಣೆಗೆ ಕರೆದೊಯ್ಯುತ್ತಿದ್ದಾರೆ ಎಂದು ಹೇಳಿದೆ.
ಇನ್ನು, ಅಲ್ಲಿನ ನಾಯಕರು ಕೊರೊನಾ ವೈರಸ್ ಬಗೆಗಿನ ಎಲ್ಲ ಮಾಹಿತಿಯನ್ನು ಅಳಿಸಿ ಹಾಕಲು ಎಲ್ಲ ವಿಧದಲ್ಲೂ ಪ್ರಯತ್ನಿಸುತ್ತಿದ್ದಾರೆ. ಇದರಿಂದ ಅಲ್ಲಿನ ಜನರಿಗೆ ಭದ್ರತೆ ಇಲ್ಲದಂತಾಗುತ್ತದೆ ಎಂದು ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ ವರದಿ ಮಾಡಿದೆ.
ಟರ್ಕ್ಮೆನಿಸ್ತಾನದ ಅಧ್ಯಕ್ಷ ಗರ್ಬಂಗೂಲಿ ಬೆರ್ಡಿಮುಖಾಮ್ಮೇಡವ್ ವಿಧಿಸುತ್ತಿರುವ ಅರ್ಥವಿಲ್ಲದ ಆದೇಶಗಳನ್ನು ಪ್ರಶ್ನಿಸಬೇಕು. ಇದರ ಬಗ್ಗೆ ಅಂತರಾಷ್ಟ್ರೀಯ ಸಮುದಾಯ ಪ್ರತಿಕ್ರಿಯಿಸಬೇಕು.
ಇಲ್ಲಿ ನಡೆಯುತ್ತಿರುವ ಮಾನವ ಹಕ್ಕುಗಳ ಉಲ್ಲಂಘನೆಯನ್ನು ವಿರೋಧಿಸಬೇಕು ಎಂದು ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ನ ಪೂರ್ವ ಯುರೋಪ್ ಹಾಗೂ ಮಧ್ಯ ಏಷ್ಯಾ ಡೆಸ್ಕ್ನ ಮುಖ್ಯಸ್ಥ ಜೆನ್ನೆ ಕೇವಿಲಿಯರ್ ಆಗ್ರಹಿಸಿದ್ದಾರೆ.
Recommended Video
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications