ಲಿಬಿಯಾದಲ್ಲಿ ಅವಳಿ ಬಾಂಬ್ ಸ್ಫೋಟಕ್ಕೆ 22 ಬಲಿ
ಟ್ರಿಪೋಲಿ, ಜನವರಿ 24: ಲಿಬಿಯಾದ ಬೆಂಘಾಜಿ ನಗರದಲ್ಲಿ ಮಂಗಳವಾರ ಸಂಭವಿಸಿದ ಭೀಕರ ಅವಳಿ ಬಾಂಬ್ ಸ್ಫೋಟದಲ್ಲಿ 22 ಜನರು ಅಸುನೀಗಿದ್ದಾರೆ.
ಬೆಂಘಾಜಿಯ ಅಲ್ ಸಲ್ಮಾನಿ ಜಿಲ್ಲೆಯಲ್ಲಿ ಈ ಬಾಂಬ್ ಸ್ಫೋಟ ಸಂಭವಿಸಿದೆ. ಜನರು ಮಸೀದಿಯಿಂದ ಪ್ರಾರ್ಥನೆ ಮುಗಿಸಿ ವಾಪಾಸಾಗುತ್ತಿದ್ದ ವೇಳೇ ಬಾಂಬ್ ಸ್ಫೋಟಿಸಿದ್ದು ಹತ್ತಾರು ಜನರ ಸಾವಿಗೆ ಕಾರಣವಾಗಿದೆ.
ಮೊದಲ ಬಾಂಬ್ ಮಸೀದಿಯ ಮುಂಭಾಗ ಸ್ಫೋಟಿಸಿದ್ದರೆ, ಅದೇ ಪ್ರದೇಶದಲ್ಲಿ ಮೂವತ್ತು ನಿಮಿಷ ತಡವಾಗಿ ಎರಡನೇ ಬಾಂಬ್ ಸ್ಫೋಟಿಸಿದೆ. ಸತ್ತವರಲ್ಲಿ ಸೈನಿಕರು ಮತ್ತು ಸಾಮಾನ್ಯ ಜನರು ಸೇರಿದ್ದಾರೆ.

ಲಿಬಿಯಾದ ಸರ್ವಾಧಿಕಾರಿ ಮುವಮ್ಮರ್ ಗಡ್ಢಾಪಿಯನ್ನು 2011ರಲ್ಲಿ ನ್ಯಾಟೋ ಪಡೆಗಳು ಕೊಂದ ನಂತರ ದೇಶ ಬೆಂಕಿಯ ಬಾಣಲೆಯಾಗಿದೆ. ಇದಾದ ಬಳಿಕ 2014ರಿಂದ ದೇಶದಲ್ಲಿ ಖಲಿಫಾ ಹಫ್ತಾರ್, ಇಸ್ಲಾಮಿಕ್ ಸಂಘಟನೆಗಳು ಮತ್ತು ಇತರರ ನಡುವೆ ಆಂತರಿಕ ಸಂಘರ್ಷ ನಡೆಯುತ್ತಿದೆ. ಈ ಕಾರಣಕ್ಕೆ ಬಾಂಬ್ ಗಳು ದಿನನಿತ್ಯ ಬೀಳುತ್ತಿರುತ್ತವೆ. ಅವುಗಳಲ್ಲೇ ಮಂಗಳವಾರ ಸಂಭವಿಸಿದ ಬಾಂಬ್ ಸ್ಫೋಟ ಪ್ರಬಲವಾಗಿದ್ದ 22 ಜನರನ್ನು ಬಲಿ ಪಡೆದಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications