ಕೊರೊನಾ ಬಿಕ್ಕಟ್ಟು: ಟ್ವಿಟ್ಟರ್ ಸಂಸ್ಥೆಯಿಂದ ಭಾರತಕ್ಕೆ 110 ಕೋಟಿ ರೂ. ನೆರವು
ವಾಷಿಂಗ್ಟನ್, ಮೇ 12: ವಿಶ್ವದ ಎಲ್ಲ ದೇಶಗಳಿಗಿಂತ ಕೊರೊನಾ ಸೋಂಕು ಪ್ರಕರಣಗಳು ಭಾರತದಲ್ಲಿ ಕಂಡುಬರುತ್ತಿದ್ದು, ಈ ಮಹಾಮಾರಿ ವೈರಸ್ ನಿಯಂತ್ರಿಸಲು ಭಾರತ ಹರಸಾಹಸ ಪಡುತ್ತಿದೆ. ಅದರ ಜೊತೆಗೆ ವಿಶ್ವದ ವಿವಿಧ ದೇಶಗಳೂ ಸಹ ಭಾರತದ ನೆರವಿಗೆ ನಿಂತಿವೆ.
ಸದ್ಯ ಕೊರೊನಾ ವೈರಸ್ ಎರಡನೇ ಅಲೆಯಿಂದ ತತ್ತರಿಸಿ ಹೋಗಿರುವ ಭಾರತಕ್ಕೆ ಖ್ಯಾತ ಸಾಮಾಜಿಕ ಜಾಲತಾಣ ಟ್ವಿಟ್ಟರ್ ಸಂಸ್ಥೆ 15 ಮಿಲಿಯನ್(110 ಕೋಟಿ) ಹಣವನ್ನು ನೀಡುವ ಮೂಲಕ ನೆರವಿನ ಹಸ್ತ ಚಾಚಿದೆ.
ಈ ಕುರಿತು ಟ್ವೀಟ್ ಮಾಡಿರುವ ಟ್ವಿಟ್ಟರ್ ಸಂಸ್ಥೆಯ ಸಿಇಒ ಜಾಕ್ ಪ್ಯಾಟ್ರಿಕ್ ಡಾರ್ಸಿ, ಭಾರತಕ್ಕೆ ವೈದ್ಯಕೀಯ ನೆರವು ನೀಡುವ ಸಲುವಾಗಿ ಸರ್ಕಾರೇತರ ಸಂಸ್ಥೆ(ಎನ್ಜಿಒ)ಗಳ ಮೂಲಕ 15 ಮಿಲಿಯನ್ (110 ಕೋಟಿ) ಹಣ ನೀಡುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಎನ್ಜಿಒ ಗಳಾದ ಯೈಡ್ ಇಂಡಿಯಾ ಮತ್ತು ಸೇವಾ ಇಂಟರ್ ನ್ಯಾಷನಲ್ ಅಮೆರಿಕ ಸಂಸ್ಥೆಯೊಂದಿಗೆ ಕೈಜೋಡಿಸಿ 110 ಕೋಟಿ ರೂಪಾಯಿ ಹಣವನ್ನು ನೀಡಲು ಮುಂದೆ ಬಂದಿದ್ದು, ಸೇವಾ ಇಂಟರ್ ನ್ಯಾಷನಲ್ ಎನ್ಜಿಒ ಈಗಾಗಲೇ ಆಕ್ಸಿಜನ್ ಮತ್ತು ವೆಂಟಿಲೇಟರ್ ಗಳನ್ನು ಭಾರತಕ್ಕೆ ತಲುಪಿಸುವ ಕಾರ್ಯದಲ್ಲಿ ತೊಡಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.
ಇನ್ನು ಇದೇ ವೇಳೆ ಭಾರತದಲ್ಲಿನ ಕೊರೊನಾ ಬಿಕ್ಕಟ್ಟನ್ನು ನಿಭಾಯಿಸಲು ಅಮೆರಿಕದ ನೆರವು ಮುಂದುವರೆಯಲಿದೆ ಎಂದು ವಿದೇಶಾಂಗ ಇಲಾಖೆಯ ವಕ್ತಾರ ನೆಡ್ ಪ್ರೈಸ್ ಹೇಳಿದ್ದಾರೆ.

ಕೊರೊನಾ ಸೋಂಕು ನಿಯಂತ್ರಿಸುವ ಸಲುವಾಗಿ ಭಾರತಕ್ಕೆ ಅಮೆರಿಕ ಸರ್ಕಾರ 100 ದಶಲಕ್ಷ ಡಾಲರ್ ಮೊತ್ತದ ನೆರವು ನೀಡಿದೆ, ಅಮೆರಿಕದ ಖಾಸಗಿ ವಲಗಳಿಂದ 400 ದಶಲಕ್ಷ ಡಾಲರ್ಗಳಷ್ಟು ನೆರವು ನೀಡಲಾಗಿದೆ.
ಹಾಗೆಯೇ ಭಾರತದ ಅಧಿಕಾರಿಗಳು ಮತ್ತು ಆರೋಗ್ಯ ಪರಿಣಿತರರೊಂದಿಗೆ ಕೊರೊನಾ ಬಿಕ್ಕಟ್ಟು ನಿಭಾಯಿಸಲು ಯಾವ ರೀತಿ ನೆರವು ನೀಡಬಹುದಾಗಿದೆ ಎಂಬ ಬಗ್ಗೆ ನಿಕಟ ಸಂಪರ್ಕ ಸಾಧಿಸಲಾಗಿದೆ ಎಂದು ನೆಡ್ ಪ್ರೈಸ್ ತಿಳಿಸಿದ್ದಾರೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 3,48,421 ಹೊಸ ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 4205 ಸೋಂಕಿತರು ಮೃತಪಟ್ಟಿದ್ದಾರೆ. 3,55,338 ಸೋಂಕಿತರು ಚೇತರಿಸಿಕೊಂಡಿದ್ದಾರೆ. 37,04,099 ಸಕ್ರಿಯ ಸೋಂಕಿತ ಪ್ರಕರಣಗಳಿವೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications