ಕ್ಯಾಲಿಫೋರ್ನಿಯಾದಲ್ಲಿ ಶೂಟೌಟ್, ಒಬಾಮಾ ಕಳವಳ
ಕ್ಯಾಲಿಫೋರ್ನಿಯಾ, ಡಿ. 03: ದಕ್ಷಿಣ ಕ್ಯಾಲಿಫೋರ್ನಿಯಾದ ಸ್ಯಾನ್ ಬೆರ್ನಾಡಿನೋ ನಗರದಲ್ಲಿ ಮೂವರು ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ ಘಟನೆ ನಡೆದಿದೆ. ಈ ದುರ್ಘಟನೆಯಲ್ಲಿ 14 ಜನ ಸಾವನ್ನಪ್ಪಿದ್ದು, ಹಲವರಿಗೆ ಗಾಯಗಳಾಗಿವೆ.
ಹೆಚ್ಚುತ್ತಿರುವ ಶೂಟೌಟ್ ಪ್ರಕರಣಗಳ ಬಗ್ಗೆ ಅಧ್ಯಕ್ಷ ಬರಾಕ್ ಒಬಾಮಾ ಅವರು ತೀವ್ರ ಕಳಕಳ ವ್ಯಕ್ತಪಡಿಸಿದ್ದಾರೆ. ಜನರ ಸುರಕ್ಷತೆಗೆ ಬೇಕಾದ ಎಲ್ಲಾ ವ್ಯವಸ್ಥೆ ಮಾಡಲಾಗುತ್ತದೆ. ಜನತೆ ಆತಂಕ ಪಡಬೇಕಾಗಿಲ್ಲ. ದುಷ್ಕರ್ಮಿಗಳ ಸದೆಬಡಿಯಲಾಗುವುದು ಎಂದು ಹೇಳಿದ್ದಾರೆ.
ಮೂವರು ಶಂಕಿತ ದಾಳಿಕೋರರ ಪೈಕಿ ಇಬ್ಬರನ್ನು ಕೊಲ್ಲಲಾಗಿದೆ. ಮತ್ತೊಬ್ಬನನ್ನು ಸೆರೆ ಹಿಡಿಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಸ್ಯಾನ್ ಬೆರ್ನಾಡಿನೋ ನಗರದ ಇನ್ ಲ್ಯಾಂಡ್ ಪ್ರಾದೇಶಿಕ ಕೇಂದ್ರ ಕಟ್ಟಡದ ಬಳಿ ಗುಂಡಿನ ದಾಳಿ ನಡೆದಿದ್ದು, 14 ಜನ ಮೃತಪಟ್ಟಿದ್ದಾರೆ. 17ಕ್ಕೂ ಅಧಿಕ ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೂವರು ಬಂದೂಕುಧಾರಿಗಳು ಸೇನಾ ಸಿಬ್ಬಂದಿ ವೇಶದಲ್ಲಿ ಬಂದು ಗುಂಡಿನ ದಾಳಿ ನಡೆಸಿದ ಸಂದರ್ಭದಲ್ಲಿ ಕಟ್ಟಡದಲ್ಲಿ ನೂರಾರು ಮಂದಿ ಒಳಗಿದ್ದರು. ದಾಳಿಯ ಹಿನ್ನಲೆ ಇನ್ನೂ ತಿಳಿದು ಬಂದಿಲ್ಲ. ಕಪ್ಪು ಬಣ್ಣದ ಎಸ್ ಯುವಿ ವಾಹನದಲ್ಲಿ ಪರಾರಿಯಾಗಲು ಯತ್ನಿಸಿದರು. ಅದರೆ, ವಾಹನದ ಮೇಲೆ ಗುಂಡಿನ ದಾಳಿ ನಡೆಸಿ ಇಬ್ಬರನ್ನು ಕೊಂದು ಹಾಕಲಾಗಿದೆ.
Here's the latest on the California mass shooting situation. #9News https://t.co/D4Fuhh6lCE
— Nine News Australia (@9NewsAUS) ಡಿಸೆಂಬರ್ 3, 2015 ಇಲ್ಲಿನ ವಿಕಲಾಂಗರ ಅಭಿವೃದ್ಧಿ ಕೇಂದ್ರದಲ್ಲಿ ನಡೆಯುತ್ತಿದ್ದ ಸಮ್ಮೇಳನದ ಕೊಠಡಿಗೆ ಒಬ್ಬ ಬಂದೂಕುಧಾರಿ ನುಗ್ಗಿ ಹತ್ಯೆಗೈದಿದ್ದಾನೆ ಎನ್ನಲಾಗುತ್ತಿದೆ.
ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮತ್ತು ಬಂದೂಕುಧಾರಿಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ತತ್ ಕ್ಷಣದ ಮಾಹಿತಿಯಂತೆ ಇಬ್ಬರು ಬಂದೂಕುಧಾರಿಯನ್ನು ಕೊಂದು ಹಾಕಲಾಗಿದೆ. ಮೃತಪಟ್ಟವರ ಪೈಕಿ ಒಬ್ಬನನ್ನು ಸೈಯದ್ ಫರೂಕ್ ಎಂದು ಗುರುತಿಸಲಾಗಿದೆ ಎಂದು ಎಫ್ ಬಿಐ ನ ಸಹಾಯಕ ನಿರ್ದೇಶಕ ಡೇವಿಡ್ ಬೌಡಿಕ್ ಹೇಳಿದ್ದಾರೆ. ಘಟನೆ ಸಂಬಂಧಿಸಿದ ವಿಡಿಯೋ ವರದಿ ನೋಡಿ:
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications