ಭಾರತದ ಮುಸ್ಲಿಂ ಧರ್ಮಗುರುಗಳು ಪಾಕಿಸ್ತಾನದಲ್ಲಿ ನಾಪತ್ತೆ
ಭಾರತದಿಂದ ಪಾಕಿಸ್ತಾನಕ್ಕೆ ತೆರಳಿದ್ದ ಮುಸ್ಲಿಂ ಸಮುದಾಯದ ಧರ್ಮಗುರುಗಳಿಬ್ಬರು ಲಾಹೋರ್ ಮತ್ತು ಕರಾಚಿ ಮಾರ್ಗ ಮಧ್ಯೆ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದ ಒಬ್ಬರು ದೆಹಲಿಯ ನಿಜಾಮುದ್ದೀನಾ ದರ್ಗಾದ ಮುಖ್ಯ ಧರ್ಮಗುರುಗಳಾಗಿದ್ದಾರೆ.
ನವ ದೆಹಲಿ, ಮಾರ್ಚ್ 16: ಭಾರತದಿಂದ ಪಾಕಿಸ್ತಾನಕ್ಕೆ ತೆರಳಿದ್ದ ಮುಸ್ಲಿಂ ಸಮುದಾಯದ ಧರ್ಮಗುರುಗಳಿಬ್ಬರು ಲಾಹೋರ್ ಮತ್ತು ಕರಾಚಿ ಮಾರ್ಗ ಮಧ್ಯೆ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದ ಒಬ್ಬರು ದೆಹಲಿಯ ನಿಜಾಮುದ್ದೀನಾ ದರ್ಗಾದ ಮುಖ್ಯ ಧರ್ಮಗುರುಗಳಾಗಿದ್ದಾರೆ.
ಸದ್ಯ ಈ ವಿಚಾರವನ್ನು ಪಾಕಿಸ್ತಾನ ಸರಕಾರದ ಗಮನಕ್ಕೂ ತರಲಾಗಿದೆ. ಮೂಲಗಳ ಪ್ರಕಾರ ನಿಜಾಮುದ್ದೀನ್ ದರ್ಗಾದ ಮುಖ್ಯಗುರು ಆಸಿಫ್ ನಿಜಾಮಿ ಮತ್ತು ನಾಝಿಮ್ ನಿಜಾಮಿ ಲಾಹೋರಿನ ವಿಶ್ವವಿಖ್ಯಾತ ದಾತಾ ದರ್ಬಾರಿಗೆ ಭೇಟಿ ನೀಡಿದ್ದರು. ಅಲ್ಲಿಂದ ನಂತರ ಕರಾಚಿಗೆ ತೆರಳಲು ವಿಮಾನ ಹತ್ತಿದ್ದರು.

ಮೂಲಗಳ ಪ್ರಕಾರ ಸರಿಯಾದ ಪ್ರಯಾಣ ದಾಖಲೆಗಳಿಲ್ಲದ ಹಿನ್ನಲೆಯಲ್ಲಿ ನಝೀಮ್ ರನ್ನು ಲಾಹೋರ್ ವಿಮಾನ ನಿಲ್ದಾಣದಲ್ಲಿ ತಡೆಯಲಾಗಿತ್ತು. ಇದಾದ ನಂತರ ನಝೀಮ್ ಪ್ರತಿಕ್ರಿಯೆಗೆ ಲಭ್ಯರಾಗಿಲ್ಲ. ಇನ್ನು ಕರಾಚಿಗೆ ತೆರಳಿದ ಆಸೀಫ್ ಕರಾಚಿ ವಿಮಾನ ನಿಲ್ದಾಣದಿಂದ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.
Last pictures of the two clerics from Delhi's Hazrat Nizamuddin Dargah, Asif Nizami and Nazim Nizami who have gone missing in Pakistan pic.twitter.com/1tdxsbgtJY
— ANI (@ANI_news) March 16, 2017
ನಾಪತ್ತೆ ವಿಚಾರವನ್ನು ದೆಹಲಿಯಲ್ಲಿರುವ ಪಾಕಿಸ್ತಾನ ರಾಯಭಾರ ಕಚೇರಿ ಹಾಗೂ ಭಾರತದ ಇಸ್ಲಾಮಾಬಾದ್ ರಾಯಭಾರ ಕಚೇರಿಯ ಮೂಲಕ ಪಾಕಿಸ್ತಾನ ಸರಕಾರದ ಗಮನಕ್ಕೆ ತರಲಾಗಿದೆ.[ಫ್ರಾನ್ಸ್ : ಶಾಲೆಯಲ್ಲಿ ಗುಂಡಿನ ದಾಳಿ, ಲೆಟರ್ ಬಾಂಬ್ ಸ್ಫೋಟ]
ನಾಪತ್ತೆಯಾಗುವ ಮೊದಲು ಅಂದರೆ ಮಾರ್ಚ್ 8ರಂದು ಇಬ್ಬರೂ ಧರ್ಮಗುರುಗಳು ಕರಾಚಿಯಲ್ಲಿರುವ ಸಂಬಂಧಿಕರ ಮನೆಗೆ ಭೇಟಿ ನೀಡಬೇಕಾಗಿತ್ತು. ಅದಕ್ಕೂ ಮೊದಲ ಇಬ್ಬರೂ ದಾತಾ ದರ್ಬಾರಿಗೆ ಭೇಟಿ ನೀಡಿದ್ದರು. ನಿಜಾಮುದ್ದೀನ್ ದರ್ಗಾ ಹಾಗೂ ದಾತಾ ದರ್ಬಾರಿನ ಧರ್ಮಗುರುಗಳು ಪರಸ್ಪರ ಮಸೀದಿಗಳಿಗೆ ಭೇಟಿ ನೀಡುವ ಸಂಪ್ರದಾಯ ಹಿಂದಿನಿಂದಲೂ ನಡೆದು ಬಂದಿದೆ. [2018ನೇ ವರ್ಷದ ಎಚ್- 1ಬಿ ವೀಸಾಕ್ಕಾಗಿ ಏ. 3ರಿಂದ ಅರ್ಜಿ ಆಹ್ವಾನ]
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications