Helicopters Crash: ಸೇನೆಯ ಎರಡು ಹೆಲುಕಾಪ್ಟರ್ ಡಿಕ್ಕಿ: 10 ಜನರ ಸಾವು
ಮಲೇಷ್ಯಾದ ಲುಮುಟ್ ನಗರದಲ್ಲಿ ಕಸರತ್ತು ನಡೆಸುತ್ತಿದ್ದಾಗ ಸೇನೆಯ ಎರಡು ಹೆಲಿಕಾಪ್ಟರ್ಗಳು ಪರಸ್ಪರ ಡಿಕ್ಕಿ ಹೊಡೆದಿವೆ. ಈ ಅಪಘಾತದಲ್ಲಿ ಹೆಲಿಕಾಪ್ಟರ್ನಲ್ಲಿದ್ದ 10 ಮಂದಿ ಸಾವನ್ನಪ್ಪಿದ್ದಾರೆ.
ಸೆನೆಯ ಹೆಲೆಕಾಪ್ಟರ್ ಪರಸ್ಪರ ಡಿಕ್ಕಿ ಹೊಡೆಯುತ್ತಿರುವ ವಿಡಿಯೋ ಸಾಮಾಜಿಕ ತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ. ಅಗ್ನಿಶಾಮಕ ಮತ್ತು ರಕ್ಷಣಾ ಇಲಾಖೆಯ ವಕ್ತಾರರ ಪ್ರಕಾರ, ಅಪಘಾತದಲ್ಲಿ ಯಾರೊಬ್ಬರು ಬದುಕಿರುವ ಸಾಧ್ಯತೆ ಇಲ್ಲವೇ ಇಲ್ಲ ಎಂದು ತಿಳಿಸಿದ್ದಾರೆ. ಎರಡೂ ಹೆಲಿಕಾಪ್ಟರ್ಗಳಲ್ಲಿ ಒಟ್ಟು 10 ನೌಕಾಪಡೆ ಸಿಬ್ಬಂದಿಗಳಿದ್ದು, ಅವರಲ್ಲಿ ಯಾರೂ ಬದುಕುಳಿದಿಲ್ಲ.

ಎರಡೂ ಹೆಲಿಕಾಪ್ಟರ್ಗಳು ಟೇಕ್ ಆಫ್ ಆಗಿದ್ದು, ಕೆಲವೇ ಸೆಕೆಂಡುಗಳಲ್ಲಿ ಎರಡರ ರೋಟರ್ಗಳು ಒಂದಕ್ಕೊಂದು ಡಿಕ್ಕಿ ಹೊಡೆದಿರುವುದು ವಿಡಿಯೋದಲ್ಲಿ ಕಂಡುಬರುತ್ತದೆ. ಇದಾದ ನಂತರ, ಆ ಎರಡೂ ಹೆಲಿಕಾಪ್ಟರ್ಗಳು ತುಂಡುಗಳಾಗಿ ನೆಲದ ಮೇಲೆ ಬೀಳುತ್ತಿರುವುದು ಕಂಡು ಬಂದಿದೆ. ಅಪಘಾತಕ್ಕೀಡಾದ ಹೆಲಿಕಾಪ್ಟರ್ಗಳು ಆಗಸ್ಟಾ ವೆಸ್ಟ್ ಲ್ಯಾಂಡ್ AW139 ಮತ್ತು ಯುರೋಕಾಪ್ಟರ್ ಫೆನೆಕ್ ಎಂದು ತಿಳಿದು ಬಂದಿವೆ.
BREAKING: 🇲🇾 2 military helicopters crash after mid-air collision in Malaysia, killing all 10 people on board pic.twitter.com/ckiEaqnd4R
— Megatron (@Megatron_ron) April 23, 2024
ಎರಡೂ ಹೆಲಿಕಾಪ್ಟರ್ಗಳು ಮುಂದಿನ ತಿಂಗಳು ನಡೆಯಲಿರುವ ನೌಕಾಪಡೆಯ ಫ್ಲೀಟ್ ಓಪನ್ ಡೇ ಕಾರ್ಯಕ್ರಮದಲ್ಲಿ ಪ್ರದರ್ಶನ ನೀಡಲು ಅಭ್ಯಾಸ ಮಾಡುತ್ತಿದ್ದವು. ಇದೇ ವೇಳೆ ಎರಡು ಹೆಲಿಕಾಪ್ಟರ್ಗಳು ಪರಸ್ಪರ ಡಿಕ್ಕಿ ಹೊಡೆದವು. ಮಲೇಷಿಯಾದ ಸಶಸ್ತ್ರ ಪಡೆಗಳ ಹೆಲಿಕಾಪ್ಟರ್ಗಳು ಇಂದು ಬೆಳಿಗ್ಗೆ ಪೆರಾಕ್ನ ಲುಮುಟ್ನಲ್ಲಿರುವ ರಾಯಲ್ ಮಲೇಷಿಯನ್ ನೇವಿ ನೆಲೆಯಲ್ಲಿ ವ್ಯಾಯಾಮ ನಡೆಸುತ್ತಿದ್ದಾಗ ಅಪಘಾತವಾಗಿದೆ ಎಂದು ಮಾಧ್ಯಮ ವರದಿಗಳ ಪ್ರಕಾರ ತಿಳಿದು ಬಂದಿದೆ.
ಅಪಘಾತದ ನಂತರ, ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ತಮ್ಮ ಬೇಸರವನ್ನು ವ್ಯಕ್ತ ಪಡಿಸಿದ್ದಾರೆ. ತಮ್ಮ ಸಾಮಾಜಿಕ ತಾಣದಲ್ಲಿ ಅವರು ಈ ಬಗ್ಗೆ ಪೋಸ್ಟ್ ಮಾಡಿದ್ದಾರೆ. ಮೃತರ ಕುಟುಂಬಗಳಿಗೆ ನನ್ನ ಸಂತಾಪ. ಈ ಕಷ್ಟದ ಸಮಯದಲ್ಲಿ ಹೋರಾಡುವ ಶಕ್ತಿಯನ್ನು ದೇವರು ಅವರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಜಪಾನ್ನಲ್ಲೂ ನಡೆದಿತ್ತು ಅಪಘಾತ
ಶನಿವಾರ ಜಪಾನ್ ನೌಕಾಪಡೆಯ ಎರಡು ಹೆಲಿಕಾಪ್ಟರ್ಗಳು ಟೋಕಿಯೊದ ದಕ್ಷಿಣ ಪೆಸಿಫಿಕ್ ಮಹಾಸಾಗರದಲ್ಲಿ ಅಪಘಾತಕ್ಕೀಡಾಗಿದ್ದವು. ಅಪಘಾತದಲ್ಲಿ ಒಬ್ಬರು ಸಾವನ್ನಪ್ಪಿದ್ದು, ಏಳು ಮಂದಿ ನಾಪತ್ತೆಯಾಗಿದ್ದಾರೆ. ಶನಿವಾರ ರಾತ್ರಿ ತರಬೇತಿ ವೇಳೆ ಹೆಲಿಕಾಪ್ಟರ್ಗಳು ಪರಸ್ಪರ ಡಿಕ್ಕಿ ಹೊಡೆದಿದ್ದವು ಎಂದು ಜಪಾನ್ನ ರಕ್ಷಣಾ ಸಚಿವಾಲಯ ತಿಳಿಸಿತ್ತು. ಎರಡೂ ಹೆಲಿಕಾಪ್ಟರ್ಗಳಲ್ಲಿ 8 ಸಿಬ್ಬಂದಿ ಇದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications