ಐಎಸ್ಐ ವಶದಲ್ಲಿದ್ದ ಇಬ್ಬರು ಭಾರತೀಯ ಅಧಿಕಾರಿಗಳು ಬಿಡುಗಡೆ
ನವದೆಹಲಿ, ಜೂನ್.15: ಪಾಕಿಸ್ತಾನ ಗುಪ್ತಚರ ಇಲಾಖೆ ಅಧಿಕಾರಿಗಳ ವಶದಲ್ಲಿದ್ದ ಇಬ್ಬರು ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿಗಳನ್ನು ಸೋಮವಾರ ರಾತ್ರಿ ಬಿಡುಗಡೆ ಮಾಡಲಾಗಿದೆ. ಸೋಮವಾರ ಬೆಳಗ್ಗೆ 8 ಗಂಟೆಯಿಂದಲೂ ಭಾರತದ ಇಬ್ಬರು ಅಧಿಕಾರಿಗಳನ್ನು ಪಾಕಿಸ್ತಾನದ ಗುಪ್ತಚರ ಇಲಾಖೆ(ಐಎಸ್ಐ) ಅಧಿಕಾರಿಗಳ ವಶದಲ್ಲಿದ್ದಾರೆ ಎಂದು ಹೇಳಲಾಗಿತ್ತು.
Recommended Video
ಭಾರತ ಮಿಷನ್ ನಿಂದ 2 ಕಿಲೋ ಮೀಟರ್ ದೂರದಲ್ಲಿ ಇರುವ ಇಸ್ಲಮಾಬಾದ್ ಕಾರ್ಯದರ್ಶಿ ಪೊಲೀಸ್ ಠಾಣೆಗೆ ನಾಪತ್ತೆಯಾಗಿದ್ದ ಇಬ್ಬರು ಭಾರತೀಯ ಅಧಿಕಾರಿಗಳನ್ನು ಒಪ್ಪಿಸಲಾಗಿದೆ. ಈ ವೇಳೆ ಇಬ್ಬರು ಅಧಿಕಾರಿಗಳ ಮೈ ಮೇಲೆ ಗಾಯದ ಗುರುತುಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುತ್ತಿದ್ದು, ತದನಂತರದಲ್ಲಿ ಈ ಬಗ್ಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ.
ಪಾಕಿಸ್ತಾನದಲ್ಲಿರುವ ರಾಯಭಾರಿಗೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಈ ಬಗ್ಗೆ ಸಂದೇಶ ರವಾನಿಸಿದೆ ಎಂದು ಎಎನ್ಐ ಸುದ್ದಿಸಂಸ್ಥೆಯು ವರದಿ ಮಾಡಿತ್ತು. ಇಬ್ಬರು ಭಾರತೀಯ ಅಧಿಕಾರಿಗಳು ನಾಪತ್ತೆಯಾಗಿರುವ ಬಗ್ಗೆ ಪಾಕಿಸ್ತಾನ ಸರ್ಕಾರಕ್ಕೂ ದೂರು ಸಲ್ಲಿಸಲಾಗಿತ್ತು.
ನವದೆಹಲಿಯಲ್ಲಿ ಇರುವ ಪಾಕಿಸ್ತಾನ ರಾಯಭಾರಿ ಕಚೇರಿಯ ವೀಸಾ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇಬ್ಬರು ಅಧಿಕಾರಿಗಳ ವಿರುದ್ಧ ಗೂಢಚರ್ಯೆ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆ ಶಂಕಿತ ಅಧಿಕಾರಿಗಳನ್ನು ಗಡೀಪಾರು ಮಾಡುವ ಬಗ್ಗೆ ಚರ್ಚೆ ನಡೆಸಿತ್ತು. ಅದಾಗಿ ಒಂದೇ ವಾರದಲ್ಲಿ ಪಾಕಿಸ್ತಾನ ರಾಯಭಾರಿ ಕಚೇರಿಯಲ್ಲಿರುವ ಇಬ್ಬರು ಅಧಿಕಾರಿಗಳು ನಾಪತ್ತೆಯಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಪಾಕಿಸ್ತಾನದಲ್ಲಿ ಇರುವ ಭಾರತೀಯ ರಾಯಭಾರಿ ಕಚೇರಿ ಅಧಿಕಾರಿಗಳನ್ನು ಆಕ್ರಮಣಕಾರಿಯಾಗಿ ಕಟ್ಟಿಹಾಕಲಾಗಿದೆ ಎಂಬ ಆರೋಪ ಎದುರಾಗಿತ್ತು. ಭಾರತೀಯ ಅಧಿಕಾರಿಗಳು ಮತ್ತು ಸಿಬ್ಬಂದಿ ಮೇಲಿನ ಹಲ್ಲೆ ಖಂಡಿಸಿ ಕಳೆದ ಮಾರ್ಚ್ ತಿಂಗಳಿನಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗಿತ್ತು.
-
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ












Click it and Unblock the Notifications