ಐಎಸ್ಐ ವಶದಲ್ಲಿದ್ದ ಇಬ್ಬರು ಭಾರತೀಯ ಅಧಿಕಾರಿಗಳು ಬಿಡುಗಡೆ
ನವದೆಹಲಿ, ಜೂನ್.15: ಪಾಕಿಸ್ತಾನ ಗುಪ್ತಚರ ಇಲಾಖೆ ಅಧಿಕಾರಿಗಳ ವಶದಲ್ಲಿದ್ದ ಇಬ್ಬರು ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿಗಳನ್ನು ಸೋಮವಾರ ರಾತ್ರಿ ಬಿಡುಗಡೆ ಮಾಡಲಾಗಿದೆ. ಸೋಮವಾರ ಬೆಳಗ್ಗೆ 8 ಗಂಟೆಯಿಂದಲೂ ಭಾರತದ ಇಬ್ಬರು ಅಧಿಕಾರಿಗಳನ್ನು ಪಾಕಿಸ್ತಾನದ ಗುಪ್ತಚರ ಇಲಾಖೆ(ಐಎಸ್ಐ) ಅಧಿಕಾರಿಗಳ ವಶದಲ್ಲಿದ್ದಾರೆ ಎಂದು ಹೇಳಲಾಗಿತ್ತು.
Recommended Video
ಭಾರತ ಮಿಷನ್ ನಿಂದ 2 ಕಿಲೋ ಮೀಟರ್ ದೂರದಲ್ಲಿ ಇರುವ ಇಸ್ಲಮಾಬಾದ್ ಕಾರ್ಯದರ್ಶಿ ಪೊಲೀಸ್ ಠಾಣೆಗೆ ನಾಪತ್ತೆಯಾಗಿದ್ದ ಇಬ್ಬರು ಭಾರತೀಯ ಅಧಿಕಾರಿಗಳನ್ನು ಒಪ್ಪಿಸಲಾಗಿದೆ. ಈ ವೇಳೆ ಇಬ್ಬರು ಅಧಿಕಾರಿಗಳ ಮೈ ಮೇಲೆ ಗಾಯದ ಗುರುತುಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗುತ್ತಿದ್ದು, ತದನಂತರದಲ್ಲಿ ಈ ಬಗ್ಗೆ ಸ್ಪಷ್ಟ ಚಿತ್ರಣ ಹೊರಬೀಳಲಿದೆ.
ಪಾಕಿಸ್ತಾನದಲ್ಲಿರುವ ರಾಯಭಾರಿಗೆ ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಈ ಬಗ್ಗೆ ಸಂದೇಶ ರವಾನಿಸಿದೆ ಎಂದು ಎಎನ್ಐ ಸುದ್ದಿಸಂಸ್ಥೆಯು ವರದಿ ಮಾಡಿತ್ತು. ಇಬ್ಬರು ಭಾರತೀಯ ಅಧಿಕಾರಿಗಳು ನಾಪತ್ತೆಯಾಗಿರುವ ಬಗ್ಗೆ ಪಾಕಿಸ್ತಾನ ಸರ್ಕಾರಕ್ಕೂ ದೂರು ಸಲ್ಲಿಸಲಾಗಿತ್ತು.
ನವದೆಹಲಿಯಲ್ಲಿ ಇರುವ ಪಾಕಿಸ್ತಾನ ರಾಯಭಾರಿ ಕಚೇರಿಯ ವೀಸಾ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಇಬ್ಬರು ಅಧಿಕಾರಿಗಳ ವಿರುದ್ಧ ಗೂಢಚರ್ಯೆ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆ ಶಂಕಿತ ಅಧಿಕಾರಿಗಳನ್ನು ಗಡೀಪಾರು ಮಾಡುವ ಬಗ್ಗೆ ಚರ್ಚೆ ನಡೆಸಿತ್ತು. ಅದಾಗಿ ಒಂದೇ ವಾರದಲ್ಲಿ ಪಾಕಿಸ್ತಾನ ರಾಯಭಾರಿ ಕಚೇರಿಯಲ್ಲಿರುವ ಇಬ್ಬರು ಅಧಿಕಾರಿಗಳು ನಾಪತ್ತೆಯಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಪಾಕಿಸ್ತಾನದಲ್ಲಿ ಇರುವ ಭಾರತೀಯ ರಾಯಭಾರಿ ಕಚೇರಿ ಅಧಿಕಾರಿಗಳನ್ನು ಆಕ್ರಮಣಕಾರಿಯಾಗಿ ಕಟ್ಟಿಹಾಕಲಾಗಿದೆ ಎಂಬ ಆರೋಪ ಎದುರಾಗಿತ್ತು. ಭಾರತೀಯ ಅಧಿಕಾರಿಗಳು ಮತ್ತು ಸಿಬ್ಬಂದಿ ಮೇಲಿನ ಹಲ್ಲೆ ಖಂಡಿಸಿ ಕಳೆದ ಮಾರ್ಚ್ ತಿಂಗಳಿನಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗಿತ್ತು.
-
ಇರಾನ್ನ ವಾಯುನೆಲೆ, ಶಸ್ತ್ರಾಸ್ತ್ರ ಡಿಪೋ ಮೇಲೆ ಯುಎಸ್ ಜಂಟಿ ದಾಳಿ, ರಷ್ಯಾ ಬೆಂಬಲ? ಇಲ್ಲಿವೆ ಪ್ರಮುಖಾಂಶಗಳು -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ












Click it and Unblock the Notifications