Bangladesh: ಎರಡು ರೈಲು ಡಿಕ್ಕಿ 15 ಮಂದಿ ಸಾವು! ಹಲವರಿಗೆ ಗಂಭೀರ ಗಾಯ
ಬಾಂಗ್ಲಾದೇಶದಲ್ಲಿ ಸೋಮವಾರ ಎರಡು ರೈಲುಗಳು ಡಿಕ್ಕಿ ಹೊಡೆದು 15 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಜಧಾನಿ ಢಾಕಾದಿಂದ ಸುಮಾರು 80 ಕಿಲೋಮೀಟರ್ (50 ಮೈಲಿ) ದೂರದಲ್ಲಿರುವ ಭೈರಬ್ನಲ್ಲಿ ಪ್ರಯಾಣಿಕ ರೈಲು ಸರಕು ಸಾಗಣೆ ರೈಲಿಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.
ಇನ್ನೂ ಎರಡು ರೈಲುಗಳ ಡಿಕ್ಕಿಯಿಂದ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ಸಿರಾಜುಲ್ ಇಸ್ಲಾಂ ತಿಳಿಸಿದ್ದಾರೆ.

ಎರಡು ರೈಲುಗಳ ನಡುವೆ ಮುಖಮುಖಿ ಡಿಕ್ಕಿ ಹೊಡೆದಿದ್ದು, ಈಗಾಗಲೇ 15 ಜನ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಹೆಚ್ಚಾಗುತ್ತದೆೆ. ಕನಿಷ್ಠ 100 ಜನರು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ನಾವು 15 ಶವಗಳನ್ನು ಹೊರತೆಗೆದಿದ್ದೇವೆ, ಅನೇಕರು ಗಾಯಗೊಂಡಿದ್ದಾರೆ, ಸಂಜೆ 4:00 ಗಂಟೆಗೆ (1000 GMT) ಸಂಭವಿಸಿದ ಈ ಅಪಘಾತವು ಒಂದು ರೈಲು ಇನ್ನೊಂದು ಮಾರ್ಗವನ್ನು ಪ್ರವೇಶಿಸಿದಾಗ ಸಂಭವಿಸಿದೆ ಎಂದು ಭೈರಬ್ನ ಸರ್ಕಾರಿ ಆಡಳಿತಾಧಿಕಾರಿ ಸಾದಿಕುರ್ ರೆಹಮಾನ್ ಎಎಫ್ಪಿಗೆ ತಿಳಿಸಿದ್ದಾರೆ.
ಇನ್ನೂ ಹಾನಿಗೊಳಗಾದ ಕೋಚ್ಗಳ ಕೆಳಗೆ ಗಾಯಗೊಂಡ ವ್ಯಕ್ತಿಗಳು ಇದ್ದು ಹಲವಾರು ಜನರು ರೈಲಿನಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಅಲ್ಲದೇ ಬಾಂಗ್ಲಾದೇಶದಲ್ಲಿ ಸಾಮಾನ್ಯವಾಗಿ ಕಳಪೆ ಸಿಗ್ನಲಿಂಗ್, ನಿರ್ಲಕ್ಷ್ಯ, ಹಳೆಯ ಟ್ರ್ಯಾಕ್ಗಳು ಅಥವಾ ಇತರ ಕಡಿಮೆ ಮೂಲಸೌಕರ್ಯಗಳಿಂದ ಉಂಟಾಗುತ್ತದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications