ಹಂದಿ ಜಿಲಾಟಿನ್ ನಿಂದ ಮಾಡಿದರೂ ಲಸಿಕೆ ತಗೊಳ್ಳಿ: ಇಸ್ಲಾಂ ಫತ್ವಾ ಸಮಿತಿ ಸೂಚನೆ
ಸೌದಿ ಅರೇಬಿಯಾ, ಡಿಸೆಂಬರ್ 23: ಕೊರೊನಾ ವೈರಸ್ ಸೋಂಕಿನ ವಿರುದ್ಧ ಅಭಿವೃದ್ಧಿಪಡಿಸುತ್ತಿರುವ ಹಲವು ಲಸಿಕೆಗಳಲ್ಲಿ ಹಂದಿ ಮಾಂಸದ ಜಿಲಾಟಿನ್ ಅಂಶದ ಬಳಕೆ ಕುರಿತು ಈಚೆಗೆ ಇಂಡೋನೇಷ್ಯಾದಲ್ಲಿ ವಿವಾದ ಉಂಟಾಗಿತ್ತು.
ಈ ಕಾರಣಕ್ಕೆ ಕೊರೊನಾ ಲಸಿಕೆಗಳನ್ನು ತಿರಸ್ಕರಿಸುವಂತೆ ಇಸ್ಲಾಂನ ಕೆಲವು ಧಾರ್ಮಿಕ ಗುರುಗಳು ಕರೆ ನೀಡಿದ್ದು, ಲಸಿಕೆ ಬಳಕೆಯ ಕುರಿತು ಚರ್ಚೆಗಳು ಆರಂಭವಾಗಿದ್ದವು. ಇದೀಗ ಹಂದಿ ಮಾಂಸದ ಜಿಲಾಟಿನ್ ಬಳಸಿದ್ದರೂ ಲಸಿಕೆ ತೆಗೆದುಕೊಳ್ಳುವುದಕ್ಕೆ ಯಾವುದೇ ಅಡ್ಡಿಯಿಲ್ಲ ಎಂದು ಇಸ್ಲಾಂ ಪ್ರಾಧಿಕಾರ ಸೂಚನೆ ನೀಡಿದೆ.
ಯುನೈಟೆಡ್ ಅರಬ್ ಎಮಿರೇಟ್ಸ್ ನ ಇಸ್ಲಾಂ ಫತ್ವಾ ಸಮಿತಿ, ಜಿಲಾಟಿನ್ ಬಳಸಿದ್ದರೂ ಮುಸ್ಲಿಮರು ಲಸಿಕೆ ಪಡೆಯಲು ಸಮಸ್ಯೆಯಿಲ್ಲ ಎಂದು ಅನುಮತಿ ನೀಡಿದೆ. ಇಸ್ಲಾಮಿಕ್ ಪದ್ಧತಿ ಪ್ರಕಾರ, ಹಂದಿ ಮಾಂಸದ ಉತ್ಪನ್ನ ಬಳಸುವುದು ನಿಷಿದ್ಧ. ಆದರೆ ಜೀವಕ್ಕೇ ಮಾರಕವಾಗಿರುವ ಕೊರೊನಾ ಸೋಂಕಿನ ವಿರುದ್ಧ ನಮ್ಮನ್ನು ನಾವು ಕಾಪಾಡಿಕೊಳ್ಳುವುದೂ ಮುಖ್ಯ. ಲಸಿಕೆಯಲ್ಲಿ ಹಂದಿ ಮಾಂಸದ ಉತ್ಪನ್ನ ಬಳಸಿರುವ ಒಂದೇ ಕಾರಣಕ್ಕೆ ಮುಸ್ಲಿಮರು ಲಸಿಕೆಯಿಂದ ದೂರವುಳಿಯಬಾರದು ಎಂದು ತಿಳಿಸಿದೆ.

ಕೊರೊನಾ ವೈರಸ್ ಲಸಿಕೆಯು ಇಸ್ಲಾಂ ಧರ್ಮದ ನಿರ್ಬಂಧಗಳಿಗೆ ಒಳಪಡುವುದಿಲ್ಲ. ಪ್ರಸ್ತುತ ಜೀವವನ್ನು ರಕ್ಷಿಸಿಕೊಳ್ಳುವ ಅಗತ್ಯವೇ ಹೆಚ್ಚಿದ್ದು, ಬೇರೆ ಪರ್ಯಾಯವಿಲ್ಲದಿರುವ ಈ ಸಂದರ್ಭದಲ್ಲಿ ಲಸಿಕೆ ಬಳಕೆಗೆ ಅನುಮತಿ ಇದೆ ಎಂದು ಸಮಿತಿಯ ಅಧ್ಯಕ್ಷ ಶೇಕ್ ಅಬ್ದುಲ್ಲಾ ತಿಳಿಸಿದ್ದಾರೆ.
ಕೊರೊನಾ ವೈರಸ್ ಪ್ರಕರಣದಲ್ಲಿ ಹಂದಿ ಮಾಂಸವನ್ನು ಔಷಧಿಯಂತೆ ಪರಿಗಣಿಸಲಾಗುತ್ತಿದೆ, ಆಹಾರದಂತೆ ಅಲ್ಲ. ಹೀಗಾಗಿ ವಿಶ್ವಕ್ಕೆ ಮಾರಕವಾಗಿರುವ ಸೋಂಕಿಗೆ ಲಸಿಕೆ ತೆಗೆದುಕೊಳ್ಳುವುದು ಅವಶ್ಯಕವಾಗಿದೆ ಎಂದಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications