ಉಬರ್ ನಿಂದ ಮಹಾವಂಚನೆ 500 ಮಿಲಿಯನ್ ಡಾಲರ್ ಗುಳಂ?
ಸ್ಯಾನ್ ಫ್ರಾನಿಸ್ಕೋ, ಸೆಪ್ಟೆಂಬರ್ 12: ಕ್ಯಾಲಿಫೋರ್ನಿಯಾ ಮೂಲದ ಉಬರ್ ಟೆಕ್ನಾಲಜೀಸ್ ಸಂಸ್ಥೆಯು ತನ್ನ ಚಾಲಕರಿಗೆ ನೀಡಬೇಕಿರುವ ಗುತ್ತಿಗೆ ಮೊತ್ತವನ್ನು ನೀಡದೆ ಭಾರಿ ವಂಚನೆ ಮಾಡಿದೆ ಎಂದು ಆರೋಪಿಸಲಾಗಿದೆ.
ಪ್ರತಿ ಗಂಟೆಗೆ ನೀಡಬೇಕಿರುವ 9.07 ಡಾಲರ್ ಭತ್ಯೆಯನ್ನು ನೀಡುತ್ತಿಲ್ಲ. ಚಾಲಕರನ್ನು ಉದ್ಯೋಗಿಗಳಂತೆ ಪರಿಗಣಿಸದೆ ಅವರಿಗೆ ಸಿಗಬೇಕಿರುವ ಸಂಬಳ, ಭತ್ಯೆ ಗುಳಂ ಮಾಡಲಾಗಿದೆ. ಈ ರೀತಿ 500 ಮಿಲಿಯನ್ ಡಾಲರ್ ಗೂ ಅಧಿಕ ಮೊತ್ತ ಉಳಿಸಿದೆ ಎಂದು ಸ್ಯಾನ್ ಫ್ರಾನ್ಸಿಸ್ಕೋದ ಫೆಡರಲ್ ಕೋರ್ಟಿನಲ್ಲಿ ಪ್ರಕರಣ ದಾಖಲಿಸಲಾಗಿದೆ.
ಚಾಲಕರಿಗೆ ಸಾಮಾಜಿಕ ಭದ್ರತೆ ಹಾಗೂ ಆರೋಗ್ಯ ಭತ್ಯೆ ಸಿಗುತ್ತಿಲ್ಲ, ಕನಿಷ್ಟ ವೇತನ, ಓವರ್ ಟೈಮ್, ಊಟ, ವಿಶ್ರಾಂತಿ ಅವಧಿ, ಕಾರ್ಮಿಕ ಪರಿಹಾರ, ನಿರುದ್ಯೋಗ ಭತ್ಯೆ, ಆರೋಗ್ಯ ವಿಮೆ ಯಾವುದೂ ಅವರನ್ನು ತಲುಪುತ್ತಿಲ್ಲ ಎಂದು ವಾದಿಸಲಾಗಿದೆ.

ಕಳೆದ ಏಪ್ರಿಲ್ ತಿಂಗಳಿನಲ್ಲಿ ಕ್ಯಾಲಿಫೋರ್ನಿಯಾ ಸುಪ್ರೀಂಕೋರ್ಟ್, ಸ್ವತಂತ್ರ ಗುತ್ತಿಗೆದಾರರನ್ನು ಕಾರ್ಮಿಕರಂತೆ ಪರಿಗಣಿಸಲು ಆದೇಶಿಸಿತ್ತು. ಇದನ್ನು ಉಲ್ಲೇಖಿಸಿರುವ ದೂರುದಾರರಾದ ಕಾರು ಸರ್ವೀಸ್ ಸಂಸ್ಥೆ, ಉಬರ್ ನಿಂದ ಗುತ್ತಿಗೆ ಅಧಾರಿತ ಸಿಬ್ಬಂದಿಗಳಿಗೆ ಮೋಸವಾಗಿದೆ ಎಂದಿದೆ.
Diva Limousine v. Uber Technologies Inc., 18-cv-05546, U.S. District Court, Northern District of California (San Francisco)- ಬಗ್ಗೆ ಉಬರ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications