Breaking; ಜೂಲಿಯನ್ ಅಸ್ಸಾಂಜೆ ಗಡಿಪಾರಿಗೆ ಅಧಿಕೃತ ಆದೇಶ
ಲಂಡನ್, ಏಪ್ರಿಲ್ 20; ವಿಕಿಲೀಕ್ಸ್ ಸಂಸ್ಥಾಪಕ ಜೂಲಿಯನ್ ಅಸ್ಸಾಂಜೆಯನ್ನು ಅಮೆರಿಕಕ್ಕೆ ಗಡಿಪಾರು ಮಾಡಲು ಬ್ರಿಟನ್ ನ್ಯಾಯಾಲಯ ಆದೇಶ ಹೊರಡಿಸಿದೆ. ಅಸ್ಸಾಂಜೆ ಪರ ವಕೀಲರು ಮುಂದಿನ ನಡೆ ಬಗ್ಗೆ ತೀರ್ಮಾನ ಕೈಗೊಳ್ಳಲಿದ್ದಾರೆ.
ಬ್ರಿಟನ್ ನ್ಯಾಯಾಲಯ ಬುಧವಾರ ಜೂಲಿಯನ್ ಅಸ್ಸಾಂಜೆಯನ್ನು ಗಡಿಪಾರು ಮಾಡಲು ಆದೇಶ ಹೊರಡಿಸಿದೆ. ಆಂತರಿಕ ಸಚಿವೆ ಪ್ರೀತಿ ಪಟೇಲ್ ಗಡಿಪಾರು ಮಾಡು ತೀರ್ಮಾನ ಕೈಗೊಳ್ಳಬೇಕಿದೆ. ಗಡಿಪಾರಿಗೆ ಅನುಮೋದನೆ ನೀಡಿದಲ್ಲಿ, ಅಸ್ಸಾಂಜೆ ಪರ ವಕೀಲರು ಹೈಕೋರ್ಟ್ ಮೊರೆ ಹೋಗಲಿದ್ದಾರೆ.
ಇರಾಕ್ ಮತ್ತು ಅಘ್ಫಾನಿಸ್ತಾನದ ಯುದ್ಧಗಳಿಗೆ ಸಂಬಂಧಿಸಿದಂತೆ ರಹಸ್ಯ ಕಡತಗಳನ್ನು ಬಹಿರಂಗಪಡಿಸಿದ ಪ್ರಕರಣದ ವಿಚಾರಣೆಗಾಗಿ ಜೂಲಿಯನ್ ಅಸ್ಸಾಂಜೆ ಅಮೆರಿಕಕ್ಕೆ ಬೇಕಾಗಿದ್ದಾರೆ. ಅಮೆರಿಕ ಬೇಹುಗಾರಿಕೆ ಕಾನೂನಿನ ಉಲ್ಲಂಘನೆ ಸೇರಿದಂತೆ 18 ಪ್ರಕರಣಗಳನ್ನು ಅವರ ವಿರುದ್ಧ ದಾಖಲು ಮಾಡಲಾಗಿದೆ.

ಸಚಿವೆ ಪ್ರೀತಿ ಪಟೇಲ್ ಗಡಿಪಾರು ಕುರಿತು ತೀರ್ಮಾನ ಕೈಗೊಂಡರೆ ಜೂಲಿಯನ್ ಅಸ್ಸಾಂಜೆ 14 ದಿನದಲ್ಲಿ ಈ ಕುರಿತು ಮೇಲ್ಮನವಿ ಸಲ್ಲಿಕೆ ಮಾಡಲು ಅವಕಾಶವಿದೆ. ಬುಧವಾರ ಗಡಿಪಾರಿಗೆ ಆದೇಶ ಹೊರಡಿಸುವ ಮೂಲಕ ಲಂಡನ್ ಕೋರ್ಟ್ನಲ್ಲಿ ನಡೆಯುತ್ತಿದ್ದ ಸುಧೀರ್ಘ ವಿಚಾರಣೆ ಪೂರ್ಣಗೊಂಡಿದೆ.
ಜೂಲಿಯನ್ ಅಸ್ಸಾಂಜೆಯನ್ನು ಗಡಿಪಾರು ವಿಚಾರದಲ್ಲಿ ಹೈಕೋರ್ಟ್ನಲ್ಲಿ ಇದುವರೆಗೂ ಯಾವುದೇ ಅರ್ಜಿಗಳನ್ನು ಸಲ್ಲಿಕೆ ಮಾಡಿಲ್ಲ ಎಂದು ಅವರ ಪರ ವಕೀಲರು ಕಳೆದ ತಿಂಗಳು ಹೇಳಿದ್ದರು. ಬುಧವಾರ ಕೋರ್ಟ್ ಆದೇಶದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುವ ನಿರೀಕ್ಷೆ ಇದೆ.
ಆಸ್ಟ್ರೇಲಿಯಾ ಮೂಲದ ಜೂಲಿಯನ್ ಅಸ್ಸಾಂಜೆ ಅಮೆರಿಕದ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಆಗ ಅಮೆರಿಕ ಸೇನೆಯ ಹಲವು ದಾಖಲೆಗಳನ್ನು ಸಂಗ್ರಹ ಮಾಡಿದ್ದರು. ಅದನ್ನು ತಮ್ಮ ವಿಕಿಲೀಕ್ಸ್ ತಾಣದ ಮೂಲಕ ಬಿಡುಗಡೆ ಮಾಡಿದ್ದರು. ಇದರಲ್ಲಿ ಅಮೆರಿಕ ಸೇನೆ ಇರಾಕ್ ಮತ್ತು ಅಫ್ಘಾನಿಸ್ತಾನದಲ್ಲಿ ನಡೆಸಿದ ದೌರ್ಜನ್ಯಗಳ ಕುರಿತು ಸಹ ಮಾಹಿತಿ ಇತ್ತು.
ಈ ದಾಖಲೆ ಬಿಡುಗಡೆಯನ್ನು ಗಂಭೀರವಾಗಿ ಪರಿಗಣಿಸಿದ ಅಮೆರಿಕ ಜೂಲಿಯನ್ ಅಸ್ಸಾಂಜೆ ವಿರುದ್ಧ ದೇಶದ್ರೋಹ ಸೇರಿದಂತೆ 18 ಪ್ರಕರಣಗಳನ್ನು ದಾಖಲಿಸಿದೆ. ಈ ಪ್ರಕರಣಗಳ ವಿಚಾರಣೆಗಾಗಿ ಅಸ್ಸಾಂಜೆ ಅಮೆರಿಕಕ್ಕೆ ಬೇಕಾಗಿದ್ದಾರೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications