ಬ್ರಿಟನ್ ಚುನಾವಣೆ: ಸಮ್ಮಿಶ್ರ ಸರಕಾರದೊಂದಿಗೆ ಥೆರಸಾ ಮೇ ಮತ್ತೆ ಅಧಿಕಾರಕ್ಕೆ
ಲಂಡನ್, ಜೂನ್ 9: ಬ್ರಿಟನ್ ಸಂಸತ್ತಿಗೆ ನಡೆದ ಚುನಾವಣೆಯ ಅಂತಿಮ ಫಲಿತಾಂಶ ಹೊರ ಬಿದ್ದಿದ್ದು ಆಡಳಿತರೂಢ ಕನ್ಸರ್ವೇಟಿವ್ ಪಕ್ಷ ಅತೀ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ. ಅತಂತ್ರ ಸಂಸತ್ ಸೃಷ್ಟಿಯಾಗಿದ್ದರೂ ಇತರ ಪಕ್ಷಗಳ ಬೆಂಬಲದೊಂದಿದೆ ಹಾಲಿ ಪ್ರಧಾನ ಮಂತ್ರಿ ಥೆರೆಸಾ ಮೇ ಅಧಿಕಾರದಲ್ಲಿ ಮುಂದುವರಿಯಲಿದ್ದಾರೆ.
650 ಸದಸ್ಯ ಬಲದ ಬ್ರಿಟನ್ ಸಂಸತ್ತಿನಲ್ಲಿ ಬಹುಮತಕ್ಕೆ 326 ಸ್ಥಾನಗಳು ಅಗತ್ಯವಾಗಿದ್ದು ಥೆರೆಸಾ ಮೇ ನೇತೃತ್ವದ ಪಕ್ಷ 319 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಬಹುಮತಕ್ಕೆ ಕೇವಲ 7 ಸ್ಥಾನಗಳ ಕೊರತೆ ಆ ಪಕ್ಷಕ್ಕೆ ಎದುರಾಗಿದೆ.
[UK ಸಂಸತ್ ಚುನಾವಣೆ: ಅತಂತ್ರ ಸಂಸತ್ತಿನ ಸೂಚನೆ ನೀಡಿದ ಸಮೀಕ್ಷೆಗಳು]

ಆದರೆ 'ಡೆಮಾಕ್ರಾಟಿಕ್ ಯೂನಿಯನಿಸ್ಟ್ ಆಫ್ ನಾರ್ಥರ್ನ್ ಐರ್ಲಾಂಡ್' (ಡಿಯುಪಿ) ಪಕ್ಷ 10 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು, ಈ ಪಕ್ಷದ ಬೆಂಬಲ ಗಿಟ್ಟಿಸಿಕೊಂಡಿರುವ ಥೆರೆಸಾ ಮೇ 329 ಸ್ಥಾನಗಳನ್ನು ಹೊಂದಿಸಿದ್ದಾರೆ. ಈ ಹಿನ್ನಲೆಯಲ್ಲಿ ಭಾರತೀಯ ಕಾಲಮಾನ ಸಂಜೆ 5 ಗಂಟೆಗೆ ಬಕಿಂಗ್ ಹ್ಯಾಮ್ ಅರಮನೆಯಲ್ಲಿ ರಾಣಿ ಎಲಿಜಬೆತ್ ಭೇಟಿಯಾಗಿ ಸರಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.
[ಬ್ರಿಟನ್ ಚುನಾವಣೆಯಲ್ಲಿ ನಾರಾಯಣ ಮೂರ್ತಿ ಅಳಿಯನಿಗೆ ಭರ್ಜರಿ ಗೆಲುವು]
ಬ್ರಿಟನ್ ಚುನಾವಣಾ ಫಲಿತಾಂಶ
ಒಟ್ಟು ಸ್ಥಾನಗಳು - 650
ಬಹಮತಕ್ಕೆ ಅಗತ್ಯವಾದ ಸ್ಥಾನಗಳು - 326
ಕನ್ಸರ್ವೇಟಿವ್ - 319
ಲೇಬರ್ ಪಾರ್ಟಿ - 261
ಸ್ಕಾಟಿಷ್ ನ್ಯಾಷನಲ್ ಪಾರ್ಟಿ - 35
ಲಿಬರಲ್ ಡೆಮಾಕ್ರಾಟಿಕ್ - 12
ಡಿಯುಪಿ - 10
ಇತರ - 13
ಲೇಬರ್ ಪಕ್ಷ ಜೆರೋಮಿ ಕಾರ್ಬೈನ್ ನೇತೃತ್ವದಲ್ಲಿ ಕಳೆದ ಬಾರಿಗಿಂತ 29 ಹೆಚ್ಚುವರಿ ಸ್ಥಾನಗಳನ್ನು ಗೆದ್ದಿತಾದರೂ ಬಹುಮತ ಪಡೆಯುವಲ್ಲಿ ವಿಫಲವಾಗಿದೆ. ಹೀಗಾಗಿ ಸತತ ಮೂರನೇ ಬಾರಿಗೆ ಅಧಿಕಾರ ಹಿಡಿಯಲು ಲೇಬರ್ ಪಕ್ಷ ವಿಫಲವಾಗಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications