Breaking: ಯುಕೆ ಉಪ ಪ್ರಧಾನಿಯಾಗಿ ಡೊಮಿನಿಕ್ ರಾಬ್ ನೇಮಕ
ಲಂಡನ್, ಅಕ್ಟೋಬರ್ 25: ಯುನೈಟೆಡ್ ಕಿಂಗ್ ಡಮ್ ನೂತನ ಪ್ರಧಾನಮಂತ್ರಿ ರಿಷಿ ಸುನಕ್, ಕಿಂಗ್ ಚಾರ್ಲ್ಸ್ III ಅನ್ನು ಭೇಟಿಯಾದ ಒಂದು ಗಂಟೆಯೊಳಗೆ ತಮ್ಮ "ಕೆಲಸವು ತಕ್ಷಣ ಪ್ರಾರಂಭವಾಗಲಿದೆ" ಎಂಬ ಭರವಸೆಯನ್ನು ಮೂಡಿಸಲು ಹೊರಟಿದ್ದಾರೆ.
ಲಿಜ್ ಟ್ರಸ್ ಸಂಪುಟದ ಸಚಿವರ ಹೊರತಾಗಿ ಹೊಸ ಸಂಪುಟವನ್ನು ರಚಿಸುವಂತೆ ಸೂಚಿಸಲಾಗಿತ್ತು. ಇದರ ಬೆನ್ನಲ್ಲೇ ಕೆಲವು ಸಚಿವರನ್ನು ವಜಾಗೊಳಿಸಿದ ರಿಷಿ ಸುನಕ್, ಎರಡು ನಿರ್ಣಾಯಕ ನೇಮಕಾತಿಗಳನ್ನು ಮಾಡಿದ್ದಾರೆ. ಉಪ ಪ್ರಧಾನ ಮಂತ್ರಿಯಾಗಿ ಡೊಮಿನಿಕ್ ರಾಬ್ ಮತ್ತು ಹಣಕಾಸು ಮಂತ್ರಿಯಾಗಿ ಜೆರೆಮಿ ಹಂಟ್ ಅನ್ನು ನೇಮಿಸಿದ್ದಾರೆ.
ವ್ಯಾಪಾರ ಕಾರ್ಯದರ್ಶಿ ಜಾಕೋಬ್ ರೀಸ್-ಮೊಗ್, ನ್ಯಾಯ ಕಾರ್ಯದರ್ಶಿ ಬ್ರಾಂಡನ್ ಲೂಯಿಸ್, ಪಿಂಚಣಿ ಕಾರ್ಯದರ್ಶಿ ಕ್ಲೋಯ್ ಸ್ಮಿತ್ ಮತ್ತು ಅಭಿವೃದ್ಧಿ ಸಚಿವ ವಿಕಿ ಫೋರ್ಡ್ ಸೇರಿದಂತೆ ಇದುವರೆಗೆ ನಾಲ್ವರು ಸಚಿವರನ್ನು ಕೆಳಗಿಳಿಸುವಂತೆ ಸೂಚಿಸಲಾಗಿದೆ.
ಎರಡು ಪ್ರಮುಖ ನೇಮಕಾತಿ ಬಗ್ಗೆ ಟ್ವೀಟ್:
ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಅವರ ಉಪ ಪ್ರಧಾನಿಯಾಗಿದ್ದ ಡೊಮಿನಿಕ್ ರಾಬ್, ನ್ಯಾಯಾಂಗ ಖಾತೆಯ ರಾಜ್ಯ ಕಾರ್ಯದರ್ಶಿ ಸ್ಥಾನವನ್ನೂ ಹೊಂದಿರುತ್ತಾರೆ. ಅದೇ ರೀತಿ ಕ್ವಾಸಿ ಕ್ವಾರ್ಟೆಂಗ್ ಬದಲಿಗೆ ಜೆರೆಮಿ ಹಂಟ್ ಅನ್ನು ಹಣಕಾಸು ಸಚಿವರಾಗಿ ಮುಂದುವರಿಯಲಿದ್ದಾರೆ. ಈ ಬಗ್ಗೆ ಪ್ರಧಾನಿ ಅಧಿಕೃತ ಟ್ವಿಟರ್ ಹ್ಯಾಂಡಲ್ನಲ್ಲಿ ಟ್ವೀಟ್ ಮಾಡಲಾಗಿದೆ.

ಪ್ರಧಾನಿ ಆಗಿ ರಿಷಿ ಸುನಕ್ ಮೊದಲ ಭಾಷಣ:
ಪ್ರಧಾನ ಮಂತ್ರಿಯಾಗಿ ತಮ್ಮ ಮೊದಲ ಭಾಷಣದಲ್ಲಿ ರಿಷಿ ಸುನಕ್, ತಮ್ಮ ಸರ್ಕಾರದ ಕಾರ್ಯಸೂಚಿಯ ಹೃದಯಭಾಗದಲ್ಲಿ "ಆರ್ಥಿಕ ಸ್ಥಿರತೆ ಮತ್ತು ಸಾಮರ್ಥ್ಯ" ವನ್ನು ಇರಿಸುವುದಾಗಿ ಭರವಸೆ ನೀಡಿದರು. "ನಂಬಿಕೆಯೇ ಸಂಪಾದನೆಯಾಗಿದ್ದು, ನಾನು ನಿಮ್ಮನ್ನು ಸಂಪಾದಿಸಿದ್ದೇನೆ," ಎಂದು ಅವರು ಹೇಳಿದರು. ಇದೇ ವೇಳೆ ತಮ್ಮ ಹಿಂದಿನವರ "ತಪ್ಪುಗಳನ್ನು" ಸರಿಪಡಿಸುವ ಕ್ರಮಗಳ ಬಗ್ಗೆ ವಿವರಿಸಿದರು.
ಸುನಕ್ ಬಲವಾದ ರಾಷ್ಟ್ರೀಯ ಆರೋಗ್ಯ ವ್ಯವಸ್ಥೆ, ಶಾಲೆಗಳು, ಸುರಕ್ಷಿತ ಬೀದಿಗಳು, ಸಶಸ್ತ್ರ ಪಡೆಗಳನ್ನು ಬೆಂಬಲಿಸುವುದು, ನಿರುದ್ಯೋಗವನ್ನು ಮಟ್ಟಹಾಕುವುದರ ಜೊತೆಗೆ ಉದ್ಯೋಗಗಳನ್ನು ಸೃಷ್ಟಿಸುವ ಭರವಸೆಯನ್ನು ಈಡೇರಿಸುವುದಾಗಿ ಹೇಳಿದರು. ಇದು ಪ್ರತಿ ಹಂತದಲ್ಲೂ ಸಮಗ್ರತೆ, ವೃತ್ತಿಪರತೆ ಮತ್ತು ಹೊಣೆಗಾರಿಕೆಯನ್ನು ಹೊಂದಿರುತ್ತದೆ ಎಂದು ಹೇಳಿದರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications