Rishi Sunak Visits Israel: ಇಸ್ರೇಲ್ಗೆ ಯುಕೆ ಪ್ರಧಾನಿ ರಿಷಿ ಸುನಕ್ ಭೇಟಿ
ಇಸ್ರೇಲ್ ಹಮಾಸ್ ಸಂಘರ್ಷದ ನಡುವೆ ಕೂಡ ಇಸ್ರೇಲ್ಗೆ ಪ್ರಮುಖ ದೇಶಗಳ ನಾಯಕರು ಭೇಟಿ ನೀಡುತ್ತಿದ್ದಾರೆ. ಬುಧವಾರ ಯುಎಸ್ ಅಧ್ಯಕ್ಷ ಜೋ ಬಿಡೆನ್ ಭೇಟಿ ನೀಡಿದ್ದ ಬೆನ್ನಲ್ಲೇ, ಗುರುವಾರ ಯುಕೆ ಪ್ರಧಾನಿ ರಿಷಿ ಸುನಕ್ ಇಸ್ರೇಲ್ಗೆ ಭೇಟಿ ನೀಡಲಿದ್ದಾರೆ.
ಇಸ್ರೇಲ್ಗೆ ಭೇಟಿ ನೀಡಲಿರುವ ರಿಷಿ ಸುನಕ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಮತ್ತು ಅಧ್ಯಕ್ಷ ಐಸಾಕ್ ಹೆರ್ಜೋಗ್ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಅವರ ಕಚೇರಿ ಮಾಹಿತಿ ನೀಡಿದೆ. ಈ ಮೂಲಕ ಹಲವು ಪ್ರಬಲ ರಾಷ್ಟ್ರಗಳು ಇಸ್ರೇಲ್ಗೆ ಬಂಬಲ ಸೂಚಿಸಿವೆ.

ಅಕ್ಟೋಬರ್ 7ರಂದು ಗಾಜಾ ಮೂಲಕ ಪ್ಯಾಲೇಸ್ಟಿನ್ನ ಹಮಾಸ್ ಉಗ್ರರು ಇಸ್ರೇಲ್ ಮೇಲೆ ದಾಳಿ ಮಾಡಿದ ನಂತರ ಯುದ್ಧ ಆರಂಭವಾಗಿದೆ. ಈವರೆಗೂ ಸಾವಿರಾರು ಜನ ಎರಡೂ ಕಡೆಗಳಲ್ಲಿ ಸಾವನ್ನಪ್ಪಿದ್ದಾರೆ. ಇಸ್ರೇಲ್ ಮತ್ತು ಗಾಜಾದಲ್ಲಿ ಸಂಭವಿಸಿದ ಜೀವಹಾನಿಗಾಗಿ ರಿಷಿ ಸುನಕ್ ಸಂತಾಪವನ್ನು ಹಂಚಿಕೊಳ್ಳಲಿದ್ದಾರೆ. ಈ ಪ್ರದೇಶದಲ್ಲಿ ಸಂಘರ್ಷ ಹೆಚ್ಚಾಗದಂತೆ ಕೂಡ ಎಚ್ಚರಿಕೆ ನೀಡಲಿದ್ದಾರೆ.
ಆಸ್ಪತ್ರೆ ಮೇಲಿನ ದಾಳಿ ಖಂಡನೆ
ಸಂಘರ್ಷದಲ್ಲಿ ಪ್ರತಿಯೊಬ್ಬ ನಾಗರಿಕರ ಸಾವು ದುರಂತವಾಗಿದೆ. ಹಮಾಸ್ನ ಭೀಕರ ಭಯೋತ್ಪಾದನೆ ನಂತರ ಹಲವು ಜೀವಗಳನ್ನು ಕಳೆದುಕೊಂಡಿದೆ ಎಂದು ರಿಷಿ ಸುನಕ್ ಇಸ್ರೇಲ್ ಭೇಟಿಯ ಮೊದಲು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಗಾಜಾ ಆಸ್ಪತ್ರೆಯಲ್ಲಿ ಮಂಗಳವಾರ ನಡೆದ ಮಾರಣಾಂತಿಕ ಸ್ಫೋಟವು ನೂರಾರು ಪ್ಯಾಲೆಸ್ಟೀನಿಯನ್ನರನ್ನು ಕೊಂದ ಘಟನೆಯನ್ನು ರಿಷಿ ಸುನಕ್ ತೀವ್ರವಾಗಿ ಖಂಡಿಸಿದ್ದಾರೆ."ಸಂಘರ್ಷ ಮತ್ತಷ್ಟು ತೀವ್ರವಾಗುವದನ್ನು ತಪ್ಪಿಸಲು ವಿಶ್ವದ ಎಲ್ಲಾ ನಾಯಕರು ಈ ಕ್ಷಣದಲ್ಲಿ ಒಗ್ಗೂಡಬೇಕು, ನಾವು ಕೂಡ ಆ ಪ್ರಯತ್ನ ಮಾಡುತ್ತೇವೆ" ಎಂದು ತಿಳಿಸಿದ್ದಾರೆ.
ಸಾಧ್ಯವಾದಷ್ಟು ಬೇಗ ಗಾಜಾಕ್ಕೆ ಮಾನವೀಯ ಸಹಾಯವನ್ನು ಅನುಮತಿಸಲು ಮತ್ತು ಗಾಜಾದಲ್ಲಿ ಸಿಕ್ಕಿಬಿದ್ದಿರುವ ಬ್ರಿಟಿಷ್ ಪ್ರಜೆಗಳನ್ನು ತೊರೆಯಲು ಅನುವು ಮಾಡಿಕೊಡುವ ಮಾರ್ಗವನ್ನು ತೆರೆಯಲು ಸುನಕ್ ಇಸ್ರೇಲ್ಗೆ ಒತ್ತಾಯಿಸಿದ್ದಾರೆ.
ಇಸ್ರೇಲ್ ಮೇಲಿನ ದಾಳಿಯಿಂದ ಕನಿಷ್ಠ ಏಳು ಬ್ರಿಟಿಷ್ ಪ್ರಜೆಗಳು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ ಒಂಬತ್ತು ಮಂದಿ ಕಾಣೆಯಾಗಿದ್ದಾರೆ ಎಂದು ಸುನಕ್ ಅವರ ವಕ್ತಾರರು ಬುಧವಾರ ಮಾಹಿತಿ ನೀಡಿದ್ದಾರೆ.
ಇಸ್ರೇಲ್ ಬಳಿಕ ಇತರೆ ದೇಶಗಳಿಗೆ ಭೇಟಿ
ಸುನಾಕ್ ಅವರ ಭೇಟಿಯ ಜೊತೆಗೆ, ಕಳೆದ ವಾರ ಇಸ್ರೇಲ್ಗೆ ಭೇಟಿ ನೀಡಿದ್ದ ಬ್ರಿಟಿಷ್ ವಿದೇಶಾಂಗ ಕಾರ್ಯದರ್ಶಿ ಜೇಮ್ಸ್ ಕ್ಲೆವರ್ಲಿ ಅವರು ಮುಂದಿನ ಮೂರು ದಿನಗಳಲ್ಲಿ ಈಜಿಪ್ಟ್, ಟರ್ಕಿ ಮತ್ತು ಕತಾರ್ಗೆ ತೆರಳಿ ಸಂಘರ್ಷದ ಬಗ್ಗೆ ಚರ್ಚೆ ಮಾಡಲಿದ್ದು, ಶಾಂತಿಯುತ ಪರಿಹಾರವನ್ನು ಹುಡುಕಲಿದ್ದಾರೆ ಎಂದು ಅವರ ಕಚೇರಿ ತಿಳಿಸಿದೆ.
"ಪ್ರಾದೇಶಿಕ ಸ್ಥಿರತೆಯನ್ನು ಎತ್ತಿಹಿಡಿಯಲು, ಒತ್ತೆಯಾಳುಗಳನ್ನು ಮುಕ್ತಗೊಳಿಸಲು ಮತ್ತು ಗಾಜಾಕ್ಕೆ ಮಾನವೀಯ ಪ್ರವೇಶವನ್ನು ಅನುಮತಿಸಲು ಅಂತರರಾಷ್ಟ್ರೀಯ ಪ್ರಯತ್ನಗಳಿಗೆ ಮೂರು ದೇಶಗಳು ಪ್ರಮುಖವಾಗಿವೆ" ಎಂದು ಬ್ರಿಟನ್ ಹೇಳಿದೆ.
ಘರ್ಷಣೆ ಹರಡುವುದನ್ನು ತಡೆಯುವ ಪ್ರಯತ್ನಗಳ ಬಗ್ಗೆ ಚರ್ಚಿಸಲು ಅಲ್ಲಿನ ಹಿರಿಯ ನಾಯಕರನ್ನು ಬುದ್ಧಿವಂತಿಕೆಯಿಂದ ಭೇಟಿ ಮಾಡಲಾಗುವುದು, ಈಜಿಪ್ಟ್ನೊಂದಿಗೆ ರಫಾ ಕ್ರಾಸಿಂಗ್ ಅನ್ನು ತೆರೆಯುವ ತುರ್ತು ಅಗತ್ಯವು ನೆರವು ಅಗತ್ಯವಿರುವವರಿಗೆ ತಲುಪಲು ಮತ್ತು ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವಂತೆ ಬ್ರಿಟನ್ ಒತ್ತಾಯಿಸಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications