ಉಕ್ರೇನ್ ಮತ್ತು ರಷ್ಯಾ ಯುದ್ಧ 5ನೇ ವರ್ಷಕ್ಕೆ ಎಂಟ್ರಿ, ಶಾಂತಿ ಎನ್ನುವುದೇ ಅನುಮಾನ | Ukraine Issue
ಅದು 2022 ಫೆಬ್ರವರಿ 24 ಗುರುವಾರ, ಅಂದು ರಷ್ಯಾ ಮತ್ತು ಉಕ್ರೇನ್ ನಡುವೆ ದೊಡ್ಡ ಬೆಂಕಿ ಕಿಡಿ ಹೊತ್ತಿಕೊಂಡಿತ್ತು. ಉಕ್ರೇನ್ ತಮ್ಮ ಮಾತು ಕೇಳದೆ ನ್ಯಾಟೋ ಒಕ್ಕೂಟ ಸೇರಿ ಪಾಶ್ಚಿಮಾತ್ಯ ದೇಶಗಳ ಜೊತೆಗೆ ನಿಲ್ಲುತ್ತಿದೆ ಎಂಬ ಆರೋಪ ಮಾಡಲಾಗಿತ್ತು. ಇದೇ ಕಾರಣಕ್ಕೆ ರಷ್ಯಾ ನೇರವಾಗಿ ಉಕ್ರೇನ್ನ ಮೇಲೆ ದಾಳಿ ಶುರು ಮಾಡಿತ್ತು, ಆ ಮೂಲಕ ಘೋರ ಯುದ್ಧವೇ ಶುರುವಾಗಿ ಲಕ್ಷಾಂತರ ಜನ ಬೀದಿಗೆ ಬೀಳುವ ಪರಿಸ್ಥಿತಿ ನಿರ್ಮಾಣ ಆಗಿದೆ. ಹೀಗೆ 2022 ಫೆಬ್ರವರಿ 24ಕ್ಕೆ ಶುರುವಾಗಿದ್ದ ಉಕ್ರೇನ್ ಮತ್ತು ರಷ್ಯಾ ಯುದ್ಧ ಇದೀಗ 5ನೇ ವರ್ಷಕ್ಕೆ ಎಂಟ್ರಿ ಕೊಟ್ಟಿದೆ. ಹಾಗಾದರೆ ಈ ಯುದ್ಧ ನಿಲ್ಲುವುದು ಯಾವಾಗ? ಈ ಯುದ್ಧ ನಿಲ್ಲಿಸುವ ಬಗ್ಗೆ ಉಕ್ರೇನ್ ಮತ್ತು ರಷ್ಯಾ ನಿಲುವು ಏನು? ಬನ್ನಿ ತಿಳಿಯೋಣ.
ಹೌದು, ರಷ್ಯಾ & ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧ ನಿಲ್ಲಿಸಲು ಏನೆಲ್ಲಾ ಪ್ರಯತ್ನ ಮಾಡಿದರೂ ಪ್ರಯೋಜನಕ್ಕೆ ಬಂದಿಲ್ಲ. ರಷ್ಯಾ & ಉಕ್ರೇನ್ ಯುದ್ಧ ಜ್ವಾಲೆ ದಿನದಿಂದ ದಿನಕ್ಕೆ ಮತ್ತಷ್ಟು ಜೋರಾಗುತ್ತಾ ಧಗಧಗಿಸುತ್ತಾ ಇದೆ. ಹೀಗೆ ರಷ್ಯಾ & ಉಕ್ರೇನ್ ಬಡಿದಾಡುತ್ತಿದ್ರೆ ಅತ್ತ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಈ ಯುದ್ಧ ನಿಲ್ಲಿಸಿಯೇ ತೀರಬೇಕು ಎಂಬ ಗುರಿ ಇಟ್ಟುಕೊಂಡು ಶಾಂತಿ ಒಪ್ಪಂದಕ್ಕೆ ಪ್ರಯತ್ನ ಮಾಡುತ್ತಾ ಇದ್ದಾರೆ. ಆದರೆ ಒಂದು ಕಡೆ ಅಮೆರಿಕ ಶಾಂತಿ ಒಪ್ಪಂದಕ್ಕೆ ಪ್ರಯತ್ನ ಮಾಡುತ್ತಿದ್ದರೆ, ಇನ್ನೊಂದೆಡೆ ಉಕ್ರೇನ್ ವಿರುದ್ಧ ಭೀಕರ ದಾಳಿ ಆರಂಭಿಸಿರುವ ರಷ್ಯಾ ಸೇನೆ ಪರಿಸ್ಥಿತಿ ಕೈಮೀರಿ ಹೋಗುವಂತೆ ಮಾಡಿದೆ ಎಂಬ ಆರೋಪ ಇದೆ. ಹಾಗೇ ಉಕ್ರೇನ್ ಕೂಡ ತಾನು ಏನು ಕಮ್ಮಿ ಇಲ್ಲ ಎಂದು ಮರು ದಾಳಿಯ ನಡೆಸುತ್ತಿದೆ.

ಉಕ್ರೇನ್ ದೇಶಕ್ಕೆ ಮೈತುಂಬಾ ಸಾಲ
ರಷ್ಯಾ 2022ರಲ್ಲಿ ಯುದ್ಧ ಶುರು ಮಾಡಿದಾಗ ರೊಚ್ಚಿಗೆದ್ದು ಮರುದಾಳಿ ಆರಂಭಿಸಿ ತಾನು ಗೆದ್ದೇ ಗೆಲ್ಲುವೆ ಎಂದು ಗುಟುರು ಹಾಕಿತ್ತು ಉಕ್ರೇನ್ ಮಿಲಿಟರಿ. ಆದರೆ ಈಗ ರಷ್ಯಾ ಸೇನೆ ವಿರುದ್ಧ ಗೆಲ್ಲುವ ಮಾತು ಬಿಡಿ, ಉಕ್ರೇನ್ ಸೇನೆಗೆ ಜೀವ ಉಳಿಸಿಕೊಳ್ಳುವುದು ಕೂಡ ಕಷ್ಟ ಆಗಿದೆ. ಹೀಗಾಗಿ, ನ್ಯಾಟೋ ದೇಶಗಳು ಉಕ್ರೇನ್ ಗಡಿಯಲ್ಲಿ ಭಾರಿ ಪ್ರಮಾಣದಲ್ಲಿ ಸಹಾಯ ಹಸ್ತ ಚಾಚುತ್ತಿವೆ. ಇದರ ಜೊತೆಗೆ ಉಕ್ರೇನ್ ಮಾಡಿಕೊಂಡಿದ್ದ ಸಾಲಗಳ ಪ್ರಮಾಣ ಕೂಡ ಹೆಚ್ಚಾಗುತ್ತಿದೆ. ಈ ಎಲ್ಲಾ ಕಾರಣಕ್ಕೆ ಕೊನೆಗೂ ಯುದ್ಧ ನಿಂತರೆ ಸಾಕಪ್ಪಾ ಎಂಬ ನಿಲುವಿಗೆ ಬಂದಿದೆ ಉಕ್ರೇನ್. ಇನ್ನೊಂದು ಕಡೆ ರಷ್ಯಾ ಸೇನೆ ತನ್ನ ಶತ್ರು ಉಕ್ರೇನ್ ವಿರುದ್ಧ, ಭಯಾನಕ ಅಸ್ತ್ರಗಳನ್ನು ಬಳಸಿ ದಾಳಿ ಮಾಡುತ್ತಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications