ರಷ್ಯಾ ವಿರುದ್ಧ ಹೋರಾಡಲು ಉಕ್ರೇನ್ಗೆ F-16 ಉಡುಗೊರೆ?
ರಷ್ಯಾ ವಿರುದ್ಧ ಸೋತು ಸುಣ್ಣವಾಗಿರುವ ಉಕ್ರೇನ್ಗೆ ಸಹಾಯ ಮಾಡಲು ಇದೀಗ 'ನ್ಯಾಟೋ' ಸ್ನೇಹಿತರು ಮುಂದೆ ಬಂದಿದ್ದಾರೆ. ಅದರಲ್ಲೂ ಖಾರ್ಕೀವ್ ಮೇಲೆ ರಷ್ಯಾ ಭಯಾನಕ ದಾಳಿ ಮಾಡುತ್ತಿರುವ ಸಮಯದಲ್ಲೇ, ಭರ್ಜರಿ ಉಡುಗೊರೆ ಒಂದು ಸಿದ್ಧವಾಗಿದೆ. ಅಕಸ್ಮಾತ್ ಈಗ ಉಕ್ರೇನ್ಗೆ ಈ ಅಸ್ತ್ರಗಳು ಸಿಕ್ಕರೆ ಯುದ್ಧದ ಗತಿಯೇ ಬದಲಾಗಲಿದೆ ಎಂದು ವಿಶ್ಲೇಷಿಸಲಾಗಿದೆ.
ಹೌದು, ಉಕ್ರೇನ್ ವಿರುದ್ಧ ರಷ್ಯಾ ಭೀಕರ ದಾಳಿ ಮಾಡುತ್ತಿದೆ. ಅದರಲ್ಲೂ ರಷ್ಯಾ ದಾಳಿಗೆ ಈಗಾಗಲೇ ಉಕ್ರೇನ್ ಕಂಗೆಟ್ಟು ಹೋಗಿದೆ. ಜೀವ ಉಳಿಸಿಕೊಳ್ಳುವುದು ಹೇಗೆ ಎಂಬ ಚಿಂತೆ, ಭಯ & ಆತಂಕ ಉಕ್ರೇನ್ ಜನರಲ್ಲಿ ಶುರುವಾಗಿದೆ. ಹೀಗಿದ್ದಾಗಲೇ ಜಗತ್ತಿನ ಅತ್ಯಂತ ಶಕ್ತಿ ಭರಿತ ಯುದ್ಧ ವಿಮಾನಗಳು ಎಂದು ಗುರುತಿಸುವ, ಎಫ್-16 (F-16) ಫೈಟರ್ ಜೆಟ್ಗಳನ್ನ ಇದೀಗ ಉಕ್ರೇನ್ಗೆ ಉಡುಗೊರೆಯಾಗಿ ನೀಡಲು 'ನ್ಯಾಟೋ' ಮಿತ್ರ ರಾಷ್ಟ್ರಗಳು ಸಿದ್ಧತೆಯನ್ನ ನಡೆಸಿವೆ. ಈ ಮೂಲಕ ಉಕ್ರೇನ್ಗೆ ಈ ಅಸ್ತ್ರಗಳು ಸಿಕ್ಕರೆ ನೆಮ್ಮದಿ ಸಿಗುವ ನಿರೀಕ್ಷೆ ಇದೆ.

ವಿಶ್ವಸಂಸ್ಥೆ ಕೂಡ ಸೋತು ಹೋಗಿದೆ
ರಷ್ಯಾ & ಉಕ್ರೇನ್ ಇಬ್ಬರೂ ಒಬ್ಬರು ಮತ್ತೊಬ್ಬರನ್ನ ನಾಶ ಮಾಡುವ ಹಂತಕ್ಕೆ ಬಂದಿದ್ದಾರೆ. 2 ವರ್ಷಗಳ ಹಿಂದೆ ಶುರುವಾದ ರಷ್ಯಾ & ಉಕ್ರೇನ್ ಯುದ್ಧ, ಜಗತ್ತಿನ ಬೆನ್ನಿಗೆ ಚೂರಿ ಹಿರಿದಂತೆ ಕಾಣುತ್ತಿದೆ. ಯಾಕಂದ್ರೆ ಪ್ರತಿದಿನ ಒಂದಲ್ಲ ಒಂದು ಸಮಸ್ಯೆಯ ಈ ಯುದ್ಧವು ಸೃಷ್ಟಿ ಮಾಡ್ತಿದೆ. ಹೀಗೆ ಪರದಾಟ ಕೂಡ ಜಾಸ್ತಿ ಆಗಿದ್ದು ಯಾವ ಕ್ಷಣದಲ್ಲಿ ಏನಾಗುತ್ತೆ? ಅನ್ನೋದೇ ಗೊತ್ತಾಗ್ತಿಲ್ಲ. ವಿಶ್ವಸಂಸ್ಥೆ ಕೂಡ ಯುದ್ಧ ನಿಲ್ಲಿಸುವ ಪ್ರಯತ್ನ ಮಾಡಿ ಸೋತು ಹೋಗಿದೆ.
ರಷ್ಯಾ ವಿನಾಶಕಾರಿ ಅಸ್ತ್ರ ಬಳಸುತ್ತಾ?
ಇನ್ನು ರಷ್ಯಾ ಸೇನೆ ಉಕ್ರೇನ್ ವಿರುದ್ಧ ಕೆಂಡವಾಗಲು ಬಲವಾದ ಕಾರಣವೂ ಇದ್ದು, ಯಾವಾಗ ಅಮೆರಿಕ ಪರೋಕ್ಷವಾಗಿ ಉಕ್ರೇನ್ಗೆ ಸಹಾಯ ಮಾಡುತ್ತಿತ್ತೋ ಆಗಲೇ ಉಕ್ರೇನ್ ಸೇನೆ ಗ್ರಹಚಾರ ಕೆಟ್ಟಿತ್ತು. ಇದೀಗ ನೇರವಾಗಿ ಉಕ್ರೇನ್ ಬೆನ್ನಿಗೆ ನಿಲ್ಲಲು ಅಮೆರಿಕ & ಪಾಶ್ಚಿಮಾತ್ಯ ದೇಶಗಳ ಒಕ್ಕೂಟ ಸಿದ್ಧವಾಗಿರುವುದು ಪರಿಸ್ಥಿತಿ ಮತ್ತೆ ಕೈಮೀರುವಂತೆ ಮಾಡಿದೆ. ಎಫ್-16 ವಿಮಾನದ ಎಂಟ್ರಿ ಆಗಿದ್ದೇ ನಿಜವಾದರೆ ರಷ್ಯಾ ತನ್ನಲ್ಲಿರುವ ಮತ್ತಷ್ಟು ವಿನಾಶಕಾರಿ ಅಸ್ತ್ರಗಳನ್ನ ಈಗ ಹೊರತೆಗೆಯುವ ಸಾಧ್ಯತೆ ಇದೆ.

ಒಟ್ನಲ್ಲಿ ರಷ್ಯಾ ಕೆಂಗಣ್ಣಿಗೆ ಗುರಿಯಾಗಿ ನರಳಿರುವ ಉಕ್ರೇನ್ ಈಗ ಜೀವ ಉಳಿಸಿಕೊಳ್ಳಲು ಕೂಡ ಒದ್ದಾಡುವ ಪರಿಸ್ಥಿತಿ ನಿರ್ಮಾಣ ಆಗಿದೆ. ಉಕ್ರೇನ್ನ ಪ್ರಮುಖ ನಗರ ಖಾರ್ಕಿವ್ ನಗರದ ಮೇಲೆ ರಷ್ಯಾ ಸೇನೆ ಕಳೆದ 2 ವಾರಗಳಿಂದ ನಿರಂತರ ದಾಳಿ ಮಾಡುತ್ತಿದ್ದು, ಇಡೀ ಉಕ್ರೇನ್ ಅಕ್ಷರಶಃ ನರಕವಾಗಿ ಬದಲಾಗಿದೆ. ಹೀಗಾಗಿ ಭವಿಷ್ಯದ ಬಗ್ಗೆ ಉಕ್ರೇನ್ ಪ್ರಜೆಗಳಿಗೆ ಚಿಂತೆ ಶುರುವಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications