ರಷ್ಯಾ ಜೊತೆಗೆ ಶಾಂತಿ ಮಾತುಕತೆ ನಡೆಸುವ ಬಗ್ಗೆ ಉಕ್ರೇನ್ ಅಧ್ಯಕ್ಷ ಹೇಳಿದ್ದೇನು?
ರಷ್ಯಾ & ಉಕ್ರೇನ್ ಯುದ್ಧ ಜಗತ್ತಿನ ಶಾಂತಿ ಹಾಗೂ ನೆಮ್ಮದಿಗೆ ಧಕ್ಕೆ ತಂದಿದೆ. ಈಗ ಜಗತ್ತು ಇಬ್ಬರ ಜಗಳ ನೋಡಿ ಸುಸ್ತಾಗಿ ಹೋಗಿದೆ. ಪರಿಸ್ಥಿತಿ ದಿನದಿಂದ ದಿನಕ್ಕೆ ಕೈಮೀರಿ ಹೋಗಿ, ಯಾವ ಕ್ಷಣದಲ್ಲಿ ಏನಾಗುತ್ತೋ? ಎಂಬ ವಾತಾವರಣ ನಿರ್ಮಾಣ ಆಗಿದೆ. ಹೀಗಾಗಿ ಇಬ್ಬರು ಕೂತು ಸಂಧಾನ ಮಾಡಿಕೊಳ್ಳಲಿ ಎಂಬ ಒತ್ತಡ ಹೆಚ್ಚಾಗುತ್ತಿದೆ. ಪರಿಸ್ಥಿತಿ ಹೀಗಿದ್ದಾಗ ರಷ್ಯಾ ಜೊತೆಗಿನ ಶಾಂತಿ ಮಾತುಕತೆ ಬಗ್ಗೆ ಉಕ್ರೇನ್ ಅಧ್ಯಕ್ಷ ಹೇಳಿದ್ದು ಏನು ಗೊತ್ತಾ?
ಉಕ್ರೇನ್ ದೇಶದ ಒಳಗೆ ತಮ್ಮ ಅಧ್ಯಕ್ಷನ ವಿರುದ್ಧವೇ ಜನ ರೊಚ್ಚಿಗೆದ್ದು, ಆಕ್ರೋಶ ಹೊರ ಹಾಕುವ ಪರಿಸ್ಥಿತಿ ಬಂದಿದೆ. ಯಾಕಂದ್ರೆ ರಷ್ಯಾ ಜೊತೆಗಿನ ಯುದ್ಧವನ್ನು ಕೆಲವೇ ದಿನಗಳಲ್ಲಿ ಮುಗಿಸಬಹುದಿತ್ತು, ಆದರೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮಾಡಿಕೊಂಡಿರುವ ಎಡವಟ್ಟುಗಳೇ ಯುದ್ಧವನ್ನ 2 ವರ್ಷಗಳ ತನಕ ಎಳೆದು ತಂದಿದೆ ಎಂಬ ಆರೋಪ ಇದೀಗ ಸ್ವತಃ ಉಕ್ರೇನ್ ನೆಲದಲ್ಲೇ ಕೇಳಿಬರುತ್ತಿದೆ. ಪರಿಸ್ಥಿತಿ ಹೀಗಿದ್ದಾಗ ರಷ್ಯಾ ಜೊತೆಗಿನ ಶಾಂತಿ & ಮಾತುಕತೆ ಬಗ್ಗೆ ಮಹತ್ವದ ಹೇಳಿಕೆ ನೀಡಿದ್ದಾರೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರ ಉನ್ನತ ಸಲಹೆಗಾರ!

ರಷ್ಯಾ ಬಗ್ಗೆ 'ದೆವ್ವ' ಪದ ಬಳಕೆ!
ಅಂದಹಾಗೆ ಯುದ್ಧ ಕೊನೆಗೊಳಿಸಲು ರಷ್ಯಾ ಜತೆ ಒಪ್ಪಂದಕ್ಕೆ ಸಹಿ ಹಾಕುವುದು ದೆವ್ವದ ಜತೆಗೆ ಒಪ್ಪಂದ ಮಾಡಿಕೊಂಡ ರೀತಿ ಆಗುತ್ತೆ ಅಂತಾ, ಇದೀಗ ಉಕ್ರೇನ್ ಅಧ್ಯಕ್ಷ ಝೆಲೆನ್ಸ್ಕಿ ಅವರ ಉನ್ನತ ಸಲಹೆಗಾರ ಮಹತ್ವದ ಹೇಳಿಕೆ ನೀಡಿದ್ದಾರೆ. ಝೆಲೆನ್ಸ್ಕಿ ಅವರ ಉನ್ನತ ಸಲಹೆಗಾರ ಮಿಖಾಯಿಲೊ ಪೊಡೊಲ್ಯಾಕ್ ನೀಡಿರುವ ಹೇಳಿಕೆ ಇದೀಗ ಭಾರಿ ಸಂಚಲನ ಸೃಷ್ಟಿಸಿದೆ. ಅದ್ರಲ್ಲೂ ರಷ್ಯಾ ಅಧ್ಯಕ್ಷ ಪುಟಿನ್ ಇತ್ತೀಚೆಗೆ ಶಾಂತಿ ಮಾತುಕತೆ ಬಗ್ಗೆ ಪ್ರಸ್ತಾಪ ಮಾಡಿದ್ರು. ಅಲ್ಲದೆ ಸ್ವತಃ ಉಕ್ರೇನ್ ಪ್ರಜೆಗಳು ಕೂಡ ರಷ್ಯಾ ಜೊತೆಗೆ ಶಾಂತಿ ಮಾತುಕತೆ ಮಾಡಿಕೊಳ್ಳಿ, ಎಂದು ಒತ್ತಾಯ ಮಾಡುತ್ತಿದ್ದಾರೆ.
ಶಾಂತಿ ಒಪ್ಪಂದ ಮಾಡಿಕೊಳ್ಳುತ್ತಾರಾ?
ಒತ್ತಡಗಳ ಕುರಿತು ಮಾತನಾಡಿರುವ ಉಕ್ರೇನ್ ಅಧ್ಯಕ್ಷರ ಉನ್ನತ ಸಲಹೆಗಾರ, ಅಕಸ್ಮಾತ್ ಈ ರೀತಿ ಒಪ್ಪಂದ ಮಾಡಿಕೊಂಡರೆ ಅದರಿಂದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ಗೆ ಸೇನೆಯನ್ನು ಮತ್ತಷ್ಟು ಬಲಪಡಿಸಿಕೊಳ್ಳಲು ಸಮಯ ಸಿಗಲಿದೆ. ಯುದ್ಧದಲ್ಲಿ ಮತ್ತಷ್ಟು ಹೆಚ್ಚಿನ ಹಿಂಸಾತ್ಮಕ ಅಧ್ಯಾಯ ಆರಂಭಿಸುತ್ತಾರೆ ಪುಟಿನ್ ಎಂದು ಆರೋಪ ಮಾಡಿದ್ದಾರೆ. ಅಲ್ಲದೆ ಈ ಒಪ್ಪಂದ ದೆವ್ವದ ಜೊತೆಗಿನ ಒಪ್ಪಂದ ಎಂದು ಹೇಳುವ ಮೂಲಕ ಉಕ್ರೇನ್ ಇದೀಗ ಪರೋಕ್ಷವಾಗಿ, ರಷ್ಯಾ ವಿರುದ್ಧ ತಿರುಗಿಬಿದ್ದಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications